AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ಪ್ರಜೆಗಳ ಪುಂಡಾಟಕ್ಕೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ‘ಹಲೋ ಆಫ್ರಿಕಾ’ ಕಾರ್ಯಕ್ರಮ

Hello Africa Desk: ನೈಜೀರಿಯಾ, ಉಗಾಂಡ, ಐವರಿ ಕೊಸ್ಟ್, ಸುಡಾನ್ ಸೇರಿದಂತೆ ವಿವಿಧ ಪ್ರಜೆಗಳು ಜೊತೆ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಸಂವಾದ ನಡೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಆಫ್ರಿಕಾ ಪ್ರಜೆಗಳ ಪುಂಡಾಟಕ್ಕೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ 'ಹಲೋ ಆಫ್ರಿಕಾ' ಕಾರ್ಯಕ್ರಮ
ಬೆಂಗಳೂರು ಪೊಲೀಸರಿಂದ 'ಹಲೋ ಆಫ್ರಿಕಾ' ಕಾರ್ಯಕ್ರಮ
TV9 Web
| Edited By: |

Updated on: Aug 12, 2021 | 8:28 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಫ್ರಿಕಾ ಪ್ರಜೆಗಳಿಂದ ಪುಂಡಾಟ ಅತಿಯಾದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ‘ಹಲೋ ಆಫ್ರಿಕಾ’ ಎಂಬ ಹೊಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಈ ಕಾರ್ಯಕ್ರಮದಡಿ ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿರುವ ಆಫ್ರಿಕಾದ ವಿವಿಧ ಪ್ರಜೆಗಳೊಂದಿಗೆ ಸಂವಾದ ನಡೆಸಲಾಗುತ್ತೆ.

ನೈಜೀರಿಯಾ, ಉಗಾಂಡ, ಐವರಿ ಕೊಸ್ಟ್, ಸುಡಾನ್ ಸೇರಿದಂತೆ ವಿವಿಧ ಪ್ರಜೆಗಳು ಜೊತೆ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಸಂವಾದ ನಡೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ. ಪಾಸ್‌ಪೋರ್ಟ್, ವೀಸಾ ಸರಿಯಾಗಿದ್ದರೆ ಯಾವುದೇ ತೊಂದರೆ ನೀಡುವುದಿಲ್ಲ. ನಿಮ್ಮ ನಿಮ್ಮ ಉದ್ಯಮ, ಶಿಕ್ಷಣಕ್ಕೆ ಇಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ ಅನಧಿಕೃತ ವಾಸ, ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಶಿಕ್ಷಾರ್ಹ. ಈ ನೆಲದ ಕಾನೂನಿನಂತೆ ನಡೆದುಕೊಳ್ಳಲು ಸೂಚನೆ ನೀಡಿದ್ದಾರೆ.

ಈ ವೇಳೆ ಆಫ್ರಿಕನ್ ಪ್ರಜೆಗಳು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳಾಯಿತು. ಅನೇಕರು ನಮ್ಮದೇ ಸಮುದಾಯದ ಮುಖಂಡರ ಮಾತು ಕೇಳದೆ ಅಡ್ಡದಾರಿ ಹಿಡಿದರು ಎಂದು ಆಫ್ರಿಕನ್ಸ್ ದುಃಖ ಹೇಳಿಕೊಂಡಿದ್ದಾರೆ.

ಇನ್ನು ಈ ಹಿಂದೆ ಅನಧಿಕೃತ ವಾಸಿಗಳ ಮನೆ ಮೇಲೆ ಪೂರ್ವ ವಿಭಾಗ ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದರು. ಸುಮಾರು 60 ಜನ ಆಫ್ರಿಕನ್ಸ್ ಮನೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ 13 ಜನ ಅನಧಿಕೃತವಾಗಿ ನೆಲೆಸಿದ್ದವರನ್ನು ಬಂಧಿಸಲಾಗಿತ್ತು. ಸದ್ಯ ಎಫ್.ಆರ್.ಆರ್.ಓ (ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಷನ್ ಆಫಿಸ್ ) ವಶದಲ್ಲಿರುವ ಬಂಧಿತರು. ಕಾನೂನು ಪ್ರಕ್ರಿಯೆ ಬಳಿಕ ಬಂಧಿತರನ್ನ ಆಯಾ ದೇಶಕ್ಕೆ ಕಳಿಸಲು ತಯಾರಿ ನಡೆಸಲಾಗುತ್ತಿದೆ.

Hello africans

ಹಲೋ ಆಫ್ರಿಕಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಆಫ್ರಿಕಾ ಪ್ರಜೆ

ಇದನ್ನೂ ಓದಿ: Allu Arjun: ರಾಕ್ಷಸನಾಗಿ ಅಬ್ಬರಿಸಿದ ನಟ ಅಲ್ಲು ಅರ್ಜುನ್​; ಈ ರೀತಿ ಕೋಪ ತೋರಿಸಿದ್ದು ಯಾರ ಮೇಲೆ?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ