AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮದ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡ್ತೇವೆ; ಸಿಎಂ ಸಿದ್ದರಾಮಯ್ಯ ಟ್ವೀಟ್​

ಮಾಧ್ಯಮದ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡುತ್ತೇವೆ, ಇದನ್ನೆಲ್ಲಾ ನೀವು ಮರೆತಿರಬಹುದು, ಆದರೆ ‘ಇಂಡಿಯಾ’ ಮರೆತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ(ಟ್ವೀಟರ್​) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್‌ ಮಾಡಿದ್ದಾರೆ.

ಮಾಧ್ಯಮದ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡ್ತೇವೆ; ಸಿಎಂ ಸಿದ್ದರಾಮಯ್ಯ ಟ್ವೀಟ್​
ಸಿದ್ದರಾಮಯ್ಯ
Anil Kalkere
| Edited By: |

Updated on: Sep 15, 2023 | 10:03 PM

Share

ಬೆಂಗಳೂರು, ಸೆ.15: ನಿನ್ನೆ(ಸೆ.14) ಇಂಡಿಯಾ ಒಕ್ಕೂಟದ ಮಾಧ್ಯಮ ವಿಭಾಗದ ಸಭೆ ನಡೆದಿತ್ತು. ಬಳಿಕ ದೇಶದ ಪ್ರಮುಖ ಸುದ್ದಿ ಸಂಸ್ಥೆಯವರ ಪ್ರಮುಖ 14 ನಿರೂಪಕರು ನಡೆಸುವ ಕಾರ್ಯಕ್ರಮಗಳಿಗೆ ಇಂಡಿಯಾ ಒಕ್ಕೂಟದ ಸದಸ್ಯರುಗಳನ್ನು ಕಳುಹಿಸುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಜೆಪಿ ನಡ್ಡಾರವರೇ ಮಾಧ್ಯಮ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡುತ್ತೇವೆ, ಇದನ್ನೆಲ್ಲಾ ನೀವು ಮರೆತಿರಬಹುದು, ಆದರೆ ‘ಇಂಡಿಯಾ’ ಮರೆತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪೋಸ್ಟ್‌ ಮಾಡಿದ್ದಾರೆ.

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು

1) ಸಿದ್ದಿಕ್‌ ಕಪ್ಪನ್‌ 2) ಮೊಹಮ್ಮದ್‌ ಝುಬೇರ್ 3) ಅಜಿತ್‌ ಓಝಾ 4) ಜಸ್ಪಾಲ್‌ ಸಿಂಘ್‌ 5) ಸಜದ್‌ ಗುಲ್‌

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು

1) ರಾಕೇಶ್‌ ಸಿಂಗ್‌ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ 2) ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ 3) ಜಿ ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ 4) ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌ಐನೇಮಕಾತಿ ಹಗರಣ ಕುರಿತು ವರದಿ 5) ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ

2015 – 136ನೇ ಸ್ಥಾನ 2019 – 140ನೇ ಸ್ಥಾನ 2022 – 150ನೇ ಸ್ಥಾನ 2023 – 161ನೇ ಸ್ಥಾನ

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಎಂದು ಬರೆದು ಸಿಎಂ ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ