ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!

ಕೇವಲ ಮೂರು ವರ್ಷಕ್ಕೆ ಏಳು ಅಂತಸ್ತಿನ ಕಟ್ಟಡ ವಾಲಿದ್ದು ಕಳಪೆ ಕಾಮಗಾರಿಯಿಂದ ಎಂದು ಹೇಳಲಾಗುತ್ತಿದೆ. ಬಿನ್ನಿಮಿಲ್​ನಲ್ಲಿ ಪೊಲೀಸ್ ಕ್ವಾರ್ಟರ್ಸ್ ನಿರ್ಮಾಣಕ್ಕೆ ಮುನ್ನಾ ಮೂವತ್ತು ಅಡಿಯಷ್ಟು ಆಳವಾದ ಜಾಗವಿತ್ತು.

ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!
ಕುಸಿಯುವ ಹಂತದಲ್ಲಿರುವ ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್
Follow us
| Updated By: sandhya thejappa

Updated on:Oct 18, 2021 | 11:16 AM

ಬೆಂಗಳೂರು: ಮೈಸೂರು ರಸ್ತೆಯ ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ (Mill Police Quarters) ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತದಲ್ಲಿದೆ. 2016 ರಿಂದ 2018 ವರೆಗೂ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡಿತ್ತು. ಮೈಸೂರು ಮೂಲದ ಪಿ ಜಿ ಶೆಟ್ಟಿ ಕಂಸ್ಟ್ರಕ್ಷನ್ ಎಂಬ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಪಿಜಿ ಶೆಟ್ಟಿ ಕಂಸ್ಟ್ರಕ್ಷನ್ ಕಂಪನಿ ಜಪಾನ್ ಮಾದರಿಯಲ್ಲಿ ಕಟ್ಟಡಗಳನ್ನ ನಿರ್ಮಾಣ ಮಾಡುತ್ತಿದೆ. ಇನ್ನು ಗೋಡೆ ಬಿರುಕು ಬಿಟ್ಟಿರುವ ಪೊಲೀಸ್ ಕ್ವಾರ್ಟರ್ಸ್​ನ 18 ಕೋಟಿ ವೆಚ್ಚದಲ್ಲಿ 128 ಪ್ಲಾಟ್​ಗಳನ್ನ ನಿರ್ಮಾಣ ಮಾಡಲಾಗಿದೆ.

ಕೇವಲ ಮೂರು ವರ್ಷಕ್ಕೆ ಏಳು ಅಂತಸ್ತಿನ ಕಟ್ಟಡ ವಾಲಿದ್ದು ಕಳಪೆ ಕಾಮಗಾರಿಯಿಂದ ಎಂದು ಹೇಳಲಾಗುತ್ತಿದೆ. ಬಿನ್ನಿಮಿಲ್​ನಲ್ಲಿ ಪೊಲೀಸ್ ಕ್ವಾರ್ಟರ್ಸ್ ನಿರ್ಮಾಣಕ್ಕೆ ಮುನ್ನಾ ಮೂವತ್ತು ಅಡಿಯಷ್ಟು ಆಳವಾದ ಜಾಗವಿತ್ತು. ಕಟ್ಟಡ ನಿರ್ಮಾಣಕ್ಕೆ ಆಳವನ್ನ ಮುಚ್ಚಲಾಗಿತ್ತು. ಅಧಿಕಾರಿಗಳು ಡಬರಿಸ್ ಹಾಕಿ ಆಳವನ್ನ ಮುಚ್ಚಿದ್ದರು. ಬೆಂಗಳೂರಿನ ಬೇರೆ ಬೇರೆ ಕಾಮಗಾರಿ ವೇಳೆ ಸಿಗುವ ವೇಸ್ಟ್ ಡಬರಿಸ್​ಗಳನ್ನ ಕ್ವಾರ್ಟರ್ಸ್ ನಿರ್ಮಾಣ ಜಾಗದಲ್ಲಿ ಹಾಕಲಾಗಿತ್ತು. ಕ್ವಾರ್ಟರ್ಸ್ ನಿರ್ಮಾಣಕ್ಕೆ ಒಳ್ಳೆಯ ಮಣ್ಣು ಹಾಕಿ ಆಳವನ್ನ ಮುಚ್ಚಿರಲಿಲ್ಲ. ಡಬರಿಸ್ ಹಾಕಿದ್ದ ಜಾಗದಲ್ಲೇ ಕ್ವಾರ್ಟರ್ಸ್​ನ ನಿರ್ಮಾಣ ಮಾಡಲಾಗಿದೆ. ಇದೀಗ ನೆಲದಡಿ ಇರುವ ಮಣ್ಣು ಕುಸಿದಿದ್ದತಿಂದ ಕಟ್ಟಡ ವಾಲಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಿದ್ದ ಮರಳು ಸರಿಯಾಗಿರಲಿಲ್ಲ ಎಂಬ ಅಂಶ ಪತ್ತೆಯಾಗಿದೆ. ಕಟ್ಟಡ ವಾಲಿರುವ ಬಗ್ಗೆ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಮೊದಲೇ ಗೊತ್ತಿತ್ತು. ಆರು ತಿಂಗಳ ಹಿಂದೆಯೇ ಅಧಿಕಾರಿಗಳು ಕಮಿಟಿಯೊಂದನ್ನ ರಚಿಸಿದ್ದರು. ಕಟ್ಟಡ ವಾಸಮಾಡಲು ಯೋಗ್ಯವಿಲ್ಲವೆಂದು ತಜ್ಞರ ಸಮಿತಿ ಮಾಹಿತಿ ನೀಡಿತ್ತು. ಕಂಟ್ರಾಕ್ಟರ್ ತಪ್ಪಿನಿಂದಾಗಿ ಕಟ್ಟಡ ವಾಲಿರುವುದು ಪಕ್ಕಾ ಅಂತ ಹೇಳಲಾಗುತ್ತಿದೆ. ಯುಬಿಎಸ್​ಸಿ ಹಾಗೂ ಐಐಎಸ್​ಸಿ ತಜ್ಞರಿಂದ ಕಟ್ಟಡ ವಾಲಿರುವ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ

ವಿರಾಜಪೇಟೆ: ಗ್ರಾಮ‌ ಪಂಚಾಯಿತಿ ಸದಸ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು, ನಾಲ್ಕು ದಿನಗಳ ಬಳಿಕ ಸಾವು

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ

Published On - 9:18 am, Mon, 18 October 21

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು