AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!

ಕೇವಲ ಮೂರು ವರ್ಷಕ್ಕೆ ಏಳು ಅಂತಸ್ತಿನ ಕಟ್ಟಡ ವಾಲಿದ್ದು ಕಳಪೆ ಕಾಮಗಾರಿಯಿಂದ ಎಂದು ಹೇಳಲಾಗುತ್ತಿದೆ. ಬಿನ್ನಿಮಿಲ್​ನಲ್ಲಿ ಪೊಲೀಸ್ ಕ್ವಾರ್ಟರ್ಸ್ ನಿರ್ಮಾಣಕ್ಕೆ ಮುನ್ನಾ ಮೂವತ್ತು ಅಡಿಯಷ್ಟು ಆಳವಾದ ಜಾಗವಿತ್ತು.

ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!
ಕುಸಿಯುವ ಹಂತದಲ್ಲಿರುವ ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್
TV9 Web
| Edited By: |

Updated on:Oct 18, 2021 | 11:16 AM

Share

ಬೆಂಗಳೂರು: ಮೈಸೂರು ರಸ್ತೆಯ ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ (Mill Police Quarters) ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತದಲ್ಲಿದೆ. 2016 ರಿಂದ 2018 ವರೆಗೂ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡಿತ್ತು. ಮೈಸೂರು ಮೂಲದ ಪಿ ಜಿ ಶೆಟ್ಟಿ ಕಂಸ್ಟ್ರಕ್ಷನ್ ಎಂಬ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಪಿಜಿ ಶೆಟ್ಟಿ ಕಂಸ್ಟ್ರಕ್ಷನ್ ಕಂಪನಿ ಜಪಾನ್ ಮಾದರಿಯಲ್ಲಿ ಕಟ್ಟಡಗಳನ್ನ ನಿರ್ಮಾಣ ಮಾಡುತ್ತಿದೆ. ಇನ್ನು ಗೋಡೆ ಬಿರುಕು ಬಿಟ್ಟಿರುವ ಪೊಲೀಸ್ ಕ್ವಾರ್ಟರ್ಸ್​ನ 18 ಕೋಟಿ ವೆಚ್ಚದಲ್ಲಿ 128 ಪ್ಲಾಟ್​ಗಳನ್ನ ನಿರ್ಮಾಣ ಮಾಡಲಾಗಿದೆ.

ಕೇವಲ ಮೂರು ವರ್ಷಕ್ಕೆ ಏಳು ಅಂತಸ್ತಿನ ಕಟ್ಟಡ ವಾಲಿದ್ದು ಕಳಪೆ ಕಾಮಗಾರಿಯಿಂದ ಎಂದು ಹೇಳಲಾಗುತ್ತಿದೆ. ಬಿನ್ನಿಮಿಲ್​ನಲ್ಲಿ ಪೊಲೀಸ್ ಕ್ವಾರ್ಟರ್ಸ್ ನಿರ್ಮಾಣಕ್ಕೆ ಮುನ್ನಾ ಮೂವತ್ತು ಅಡಿಯಷ್ಟು ಆಳವಾದ ಜಾಗವಿತ್ತು. ಕಟ್ಟಡ ನಿರ್ಮಾಣಕ್ಕೆ ಆಳವನ್ನ ಮುಚ್ಚಲಾಗಿತ್ತು. ಅಧಿಕಾರಿಗಳು ಡಬರಿಸ್ ಹಾಕಿ ಆಳವನ್ನ ಮುಚ್ಚಿದ್ದರು. ಬೆಂಗಳೂರಿನ ಬೇರೆ ಬೇರೆ ಕಾಮಗಾರಿ ವೇಳೆ ಸಿಗುವ ವೇಸ್ಟ್ ಡಬರಿಸ್​ಗಳನ್ನ ಕ್ವಾರ್ಟರ್ಸ್ ನಿರ್ಮಾಣ ಜಾಗದಲ್ಲಿ ಹಾಕಲಾಗಿತ್ತು. ಕ್ವಾರ್ಟರ್ಸ್ ನಿರ್ಮಾಣಕ್ಕೆ ಒಳ್ಳೆಯ ಮಣ್ಣು ಹಾಕಿ ಆಳವನ್ನ ಮುಚ್ಚಿರಲಿಲ್ಲ. ಡಬರಿಸ್ ಹಾಕಿದ್ದ ಜಾಗದಲ್ಲೇ ಕ್ವಾರ್ಟರ್ಸ್​ನ ನಿರ್ಮಾಣ ಮಾಡಲಾಗಿದೆ. ಇದೀಗ ನೆಲದಡಿ ಇರುವ ಮಣ್ಣು ಕುಸಿದಿದ್ದತಿಂದ ಕಟ್ಟಡ ವಾಲಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಿದ್ದ ಮರಳು ಸರಿಯಾಗಿರಲಿಲ್ಲ ಎಂಬ ಅಂಶ ಪತ್ತೆಯಾಗಿದೆ. ಕಟ್ಟಡ ವಾಲಿರುವ ಬಗ್ಗೆ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಮೊದಲೇ ಗೊತ್ತಿತ್ತು. ಆರು ತಿಂಗಳ ಹಿಂದೆಯೇ ಅಧಿಕಾರಿಗಳು ಕಮಿಟಿಯೊಂದನ್ನ ರಚಿಸಿದ್ದರು. ಕಟ್ಟಡ ವಾಸಮಾಡಲು ಯೋಗ್ಯವಿಲ್ಲವೆಂದು ತಜ್ಞರ ಸಮಿತಿ ಮಾಹಿತಿ ನೀಡಿತ್ತು. ಕಂಟ್ರಾಕ್ಟರ್ ತಪ್ಪಿನಿಂದಾಗಿ ಕಟ್ಟಡ ವಾಲಿರುವುದು ಪಕ್ಕಾ ಅಂತ ಹೇಳಲಾಗುತ್ತಿದೆ. ಯುಬಿಎಸ್​ಸಿ ಹಾಗೂ ಐಐಎಸ್​ಸಿ ತಜ್ಞರಿಂದ ಕಟ್ಟಡ ವಾಲಿರುವ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ

ವಿರಾಜಪೇಟೆ: ಗ್ರಾಮ‌ ಪಂಚಾಯಿತಿ ಸದಸ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು, ನಾಲ್ಕು ದಿನಗಳ ಬಳಿಕ ಸಾವು

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ

Published On - 9:18 am, Mon, 18 October 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ