AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನತ ಅಧಿಕಾರಿಗಳು ಹೈಕೋರ್ಟ್​ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲು ಸೂಚನೆ: ಸಿಜೆ ಎಚ್ಚರಿಕೆ

ಹೈಕೋರ್ಟ್ ಸೂಚಿಸಿದಾಗ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಇಂಥ ಗೈರುಹಾಜರಿಯನ್ನು ನಾವು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಚ್ಚರಿಸಿದರು.

ಉನ್ನತ ಅಧಿಕಾರಿಗಳು ಹೈಕೋರ್ಟ್​ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲು ಸೂಚನೆ: ಸಿಜೆ ಎಚ್ಚರಿಕೆ
ಕರ್ನಾಟಕ ಹೈಕೋರ್ಟ್‌
TV9 Web
| Edited By: |

Updated on: Nov 08, 2021 | 4:31 PM

Share

ಬೆಂಗಳೂರು: ಹೈಕೋರ್ಟ್ (Karnataka High Court) ಸೂಚಿಸಿದರೂ ಅಧಿಕಾರಿಗಳು ವಿಚಾರಣೆಗೆ ಹಾಜರಾಗುತ್ತಿಲ್ಲ. ಇದೇ ಪ್ರವೃತ್ತಿ ಮುಂದುವರಿದರೆ ಬಂಧಿಸಿ ಕರೆತರುವಂತೆ ಡಿಜಿ ಐಜಿಪಿಗೆ ಸೂಚಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಗೈರು ಹಾಜರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹೈಕೋರ್ಟ್ ಸೂಚಿಸಿದಾಗ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಸಚಿವ ಸಂಪುಟ ಸಭೆಯಿದ್ದರೂ ನ್ಯಾಯಾಲಯದ ಕಲಾಪ ತಪ್ಪಿಸಿಕೊಳ್ಳುವಂತಿಲ್ಲ. ಇಂಥ ಗೈರುಹಾಜರಿಯನ್ನು ನಾವು ಸಹಿಸುವುದಿಲ್ಲ. ವಿಚಾರಣೆಗೆ ಹಾಜರಾಗದ ಅಧಿಕಾರಿಗಳನ್ನು ಬಂಧಿಸಿ ಕರೆತರುವಂತೆ ಡಿಜಿ ಐಜಿಪಿಗೆ ಸೂಚಿಸುವ ಅಧಿಕಾರ ನಮಗಿದೆ. ಅಂಥ ಪರಿಸ್ಥಿತಿ ಬಾರದಂತೆ ನೋಡಿಕೊಳ್ಳಿ ಎಂದು ಪ್ರಭುಲಿಂಗ ನಾವದಗಿ ಅವರಿಗೆ ಹೈಕೋರ್ಟ್ ಸೂಚಿಸಿತು.

ಹೈಕೋರ್ಟ್‌ ಅನ್ನು ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿದೆ. ನಾವು ಈ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶಿಸುತ್ತೇವೆ. ಸಂಬಳ ಬರದಂತೆ ತಡೆಹಿಡಿಯಲು ಸೂಚಿಸುತ್ತೇವೆ ಎಂದು ಕಟುವಾಗಿ ಎಚ್ಚರಿಸಿದರು. ರಾಜ್ಯ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಇವರು ಬಂದಿರಲಿಲ್ಲ. ಅಧಿಕಾರಿಗಳ ಈ ಪ್ರವೃತ್ತಿಯನ್ನು ನ್ಯಾಯಮೂರ್ತಿಗಳ ಕೋಪಕ್ಕೆ ಗುರಿಯಾಯಿತು.

ಮತ್ತೆ ಇಂತಹ ತಪ್ಪು ಮಾಡಬೇಡಿ. ನಿಮ್ಮ ವೃತ್ತಿಗೆ ಯಾವುದೇ ರೀತಿ ತೊಂದರೆ ತಂದುಕೊಳ್ಳಬೇಡಿ ಎಂದು ಹಾಜರಾಗಿದ್ದ ಅಧಿಕಾರಿಗಳಿಗೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸಮೀರ್ ವಾಂಖೆಡೆಯ ಅಪ್ಪ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ನವಾಬ್ ಮಲಿಕ್ ಪ್ರತಿಕ್ರಿಯೆ ಕೋರಿದ ಬಾಂಬೆ ಹೈಕೋರ್ಟ್ ಇದನ್ನೂ ಓದಿ: ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ