ತಂಬಾಕು ಉತ್ಪನ್ನಗಳಿಗೆ ಜಿಎಸ್​ಟಿ, ಅಬಕಾರಿ ಸುಂಕ; ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಹೈಕೋರ್ಟ್ ಇಂದು (ಜನವರಿ 10) ತಂಬಾಕು ಕಂಪನಿಗಳ ವಾದ ತಿರಸ್ಕರಿಸಿದೆ. ಅಲ್ಲದೇ  ಸುಂಕ ನೀತಿ ಸಂವಿಧಾನಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ತಂಬಾಕು ಉತ್ಪನ್ನಗಳಿಗೆ ಜಿಎಸ್​ಟಿ, ಅಬಕಾರಿ ಸುಂಕ; ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್
ಹೈಕೋರ್ಟ್
Follow us
| Edited By: preethi shettigar

Updated on:Jan 10, 2022 | 8:51 PM

ಬೆಂಗಳೂರು: ಕೇಂದ್ರ ಸರ್ಕಾರ ತಂಬಾಕು ಉತ್ಪನ್ನಗಳಿಗೆ ವಿವಿಧ ಬಗೆಯ ಸುಂಕ, ಜಿಎಸ್​​ಟಿ (GST),‌ ಅಬಕಾರಿ, ರಾಷ್ಟ್ರೀಯ ವಿಪತ್ತು ಸುಂಕ ಹೇರಿದೆ. ಆದರೆ ಇದನ್ನು ಒಪ್ಪದ ಕೆಲವು ತಂಬಾಕು ಕಂಪನಿಗಳು ವಿವಿಧ ಬಗೆಯ ಸುಂಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ (High Court) ಇಂದು (ಜನವರಿ 10) ತಂಬಾಕು ಕಂಪನಿಗಳ ವಾದ ತಿರಸ್ಕರಿಸಿದೆ. ಅಲ್ಲದೇ  ಸುಂಕ ನೀತಿ ಸಂವಿಧಾನಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ವಿ.ಎಸ್.ಪ್ರಾಡಕ್ಟ್ಸ್​ ಸೇರಿ ಹಲವು ತಂಬಾಕು ಉತ್ಪಾದಕರು ಮತ್ತು ತಂಬಾಕು ಉತ್ಪನ್ನಗಳ ಉತ್ಪಾದಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯದೀಶರಾದ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ವಿಚಾರಣೆ ನಡೆಸಿದೆ. ಏಕಕಾಲದಲ್ಲಿ ತಂಬಾಕು ಉತ್ಪನ್ನಗಳ ಮೇಲೆ ಜಿಎಸ್​​​ಟಿ, ಅಬಕಾರಿ ಸುಂಕ ಮತ್ತು ರಾಷ್ಟ್ರೀಯ ವಿಪತ್ತು ಸಂಕಷ್ಟ ಸುಂಕವನ್ನು ವಿಧಿಸುವ ಕೇಂದ್ರ ಸರ್ಕಾರದ ಕಾನೂನನ್ನು ಪ್ರಶ್ನಿಸಿ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತನ್ನ ತೀರ್ಮಾನವನ್ನು ಹೇಳಿದೆ.

ಕಲಂ 254ಎಗೆ ತಿದ್ದುಪಡಿ ಮಾಡಿ ಸರಕು ಮತ್ತು ಸೇವಾ ತೆರಿಗೆ ಆಡಳಿತ ಕಾನೂನುಗಳನ್ನು ಮಾಡುವ ಅಧಿಕಾರ ಹೊಂದಿದ್ದರೂ ಸಹ, 246 ಮತ್ತು 246 ಎ ವಿಧಿಯಡಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳ ಮೇಲೆ ಅಬಕಾರಿ ಸುಂಕಗಳನ್ನು ವಿಧಿಸುವ ಅಧಿಕಾರ ಹೊಂದಿದೆ. ಹಾಗಾಗಿ ಕಾನೂನುಗಳು ಸಿಂಧುವಾಗುತ್ತವೆ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಹಂತ ಹಂತವಾಗಿ ಕೋರ್ಟ್ ಕಲಾಪ ನೇರಪ್ರಸಾರ: ಹೈಕೋರ್ಟ್ ಕೋರ್ಟ್ ಕಲಾಪಗಳ ನೇರ ಪ್ರಸಾರ ವಿಚಾರಕ್ಕೆ ಸಂಬಂಧಪಟ್ಟಂತೆ ವಿಚಾರಣಾ‌ ನ್ಯಾಯಾಲಯಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನ ಅನುಷ್ಠಾನಗೊಳಿಸಬೇಕು. ಹಂತ ಹಂತವಾಗಿ ಕೋರ್ಟ್ ಕಲಾಪ ನೇರಪ್ರಸಾರ ಮಾಡಬೇಕು. ಇದಕ್ಕೆ ಪೂರಕ ಸೌಕರ್ಯ ಸರ್ಕಾರ ಕಲ್ಪಿಸಬೇಕು. ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ತಂಬಾಕು ಉತ್ಪನ್ನಗಳಿಗೆ ಯಾವುದೇ ನಿರ್ಬಂಧವಿಲ್ಲ; ಕೋಲಾರದಲ್ಲಿ ಸರ್ಕಾರಿ ಆದೇಶಗಳ ಪಾಲನೆಗೆ ಹಿಂದೇಟು

ರೀಟೇಲ್ ಬೆಲೆ ಇಳಿಸಲು ಸಂಸ್ಕರಿಸಿದ ತಾಳೆ ಎಣ್ಣೆ ಮೇಲಿನ ಆಮದು ಸುಂಕ ಶೇ 12.5ಕ್ಕೆ ಕಡಿತಗೊಳಿಸಿದ ಸರ್ಕಾರ

Published On - 8:12 pm, Mon, 10 January 22

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ