AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಬಾಕು ಉತ್ಪನ್ನಗಳಿಗೆ ಜಿಎಸ್​ಟಿ, ಅಬಕಾರಿ ಸುಂಕ; ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಹೈಕೋರ್ಟ್ ಇಂದು (ಜನವರಿ 10) ತಂಬಾಕು ಕಂಪನಿಗಳ ವಾದ ತಿರಸ್ಕರಿಸಿದೆ. ಅಲ್ಲದೇ  ಸುಂಕ ನೀತಿ ಸಂವಿಧಾನಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ತಂಬಾಕು ಉತ್ಪನ್ನಗಳಿಗೆ ಜಿಎಸ್​ಟಿ, ಅಬಕಾರಿ ಸುಂಕ; ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್
ಹೈಕೋರ್ಟ್
TV9 Web
| Edited By: |

Updated on:Jan 10, 2022 | 8:51 PM

Share

ಬೆಂಗಳೂರು: ಕೇಂದ್ರ ಸರ್ಕಾರ ತಂಬಾಕು ಉತ್ಪನ್ನಗಳಿಗೆ ವಿವಿಧ ಬಗೆಯ ಸುಂಕ, ಜಿಎಸ್​​ಟಿ (GST),‌ ಅಬಕಾರಿ, ರಾಷ್ಟ್ರೀಯ ವಿಪತ್ತು ಸುಂಕ ಹೇರಿದೆ. ಆದರೆ ಇದನ್ನು ಒಪ್ಪದ ಕೆಲವು ತಂಬಾಕು ಕಂಪನಿಗಳು ವಿವಿಧ ಬಗೆಯ ಸುಂಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ (High Court) ಇಂದು (ಜನವರಿ 10) ತಂಬಾಕು ಕಂಪನಿಗಳ ವಾದ ತಿರಸ್ಕರಿಸಿದೆ. ಅಲ್ಲದೇ  ಸುಂಕ ನೀತಿ ಸಂವಿಧಾನಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ವಿ.ಎಸ್.ಪ್ರಾಡಕ್ಟ್ಸ್​ ಸೇರಿ ಹಲವು ತಂಬಾಕು ಉತ್ಪಾದಕರು ಮತ್ತು ತಂಬಾಕು ಉತ್ಪನ್ನಗಳ ಉತ್ಪಾದಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯದೀಶರಾದ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ವಿಚಾರಣೆ ನಡೆಸಿದೆ. ಏಕಕಾಲದಲ್ಲಿ ತಂಬಾಕು ಉತ್ಪನ್ನಗಳ ಮೇಲೆ ಜಿಎಸ್​​​ಟಿ, ಅಬಕಾರಿ ಸುಂಕ ಮತ್ತು ರಾಷ್ಟ್ರೀಯ ವಿಪತ್ತು ಸಂಕಷ್ಟ ಸುಂಕವನ್ನು ವಿಧಿಸುವ ಕೇಂದ್ರ ಸರ್ಕಾರದ ಕಾನೂನನ್ನು ಪ್ರಶ್ನಿಸಿ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತನ್ನ ತೀರ್ಮಾನವನ್ನು ಹೇಳಿದೆ.

ಕಲಂ 254ಎಗೆ ತಿದ್ದುಪಡಿ ಮಾಡಿ ಸರಕು ಮತ್ತು ಸೇವಾ ತೆರಿಗೆ ಆಡಳಿತ ಕಾನೂನುಗಳನ್ನು ಮಾಡುವ ಅಧಿಕಾರ ಹೊಂದಿದ್ದರೂ ಸಹ, 246 ಮತ್ತು 246 ಎ ವಿಧಿಯಡಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳ ಮೇಲೆ ಅಬಕಾರಿ ಸುಂಕಗಳನ್ನು ವಿಧಿಸುವ ಅಧಿಕಾರ ಹೊಂದಿದೆ. ಹಾಗಾಗಿ ಕಾನೂನುಗಳು ಸಿಂಧುವಾಗುತ್ತವೆ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಹಂತ ಹಂತವಾಗಿ ಕೋರ್ಟ್ ಕಲಾಪ ನೇರಪ್ರಸಾರ: ಹೈಕೋರ್ಟ್ ಕೋರ್ಟ್ ಕಲಾಪಗಳ ನೇರ ಪ್ರಸಾರ ವಿಚಾರಕ್ಕೆ ಸಂಬಂಧಪಟ್ಟಂತೆ ವಿಚಾರಣಾ‌ ನ್ಯಾಯಾಲಯಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನ ಅನುಷ್ಠಾನಗೊಳಿಸಬೇಕು. ಹಂತ ಹಂತವಾಗಿ ಕೋರ್ಟ್ ಕಲಾಪ ನೇರಪ್ರಸಾರ ಮಾಡಬೇಕು. ಇದಕ್ಕೆ ಪೂರಕ ಸೌಕರ್ಯ ಸರ್ಕಾರ ಕಲ್ಪಿಸಬೇಕು. ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ತಂಬಾಕು ಉತ್ಪನ್ನಗಳಿಗೆ ಯಾವುದೇ ನಿರ್ಬಂಧವಿಲ್ಲ; ಕೋಲಾರದಲ್ಲಿ ಸರ್ಕಾರಿ ಆದೇಶಗಳ ಪಾಲನೆಗೆ ಹಿಂದೇಟು

ರೀಟೇಲ್ ಬೆಲೆ ಇಳಿಸಲು ಸಂಸ್ಕರಿಸಿದ ತಾಳೆ ಎಣ್ಣೆ ಮೇಲಿನ ಆಮದು ಸುಂಕ ಶೇ 12.5ಕ್ಕೆ ಕಡಿತಗೊಳಿಸಿದ ಸರ್ಕಾರ

Published On - 8:12 pm, Mon, 10 January 22

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು