AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಬಾಕು ಉತ್ಪನ್ನಗಳಿಗೆ ಜಿಎಸ್​ಟಿ, ಅಬಕಾರಿ ಸುಂಕ; ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಹೈಕೋರ್ಟ್ ಇಂದು (ಜನವರಿ 10) ತಂಬಾಕು ಕಂಪನಿಗಳ ವಾದ ತಿರಸ್ಕರಿಸಿದೆ. ಅಲ್ಲದೇ  ಸುಂಕ ನೀತಿ ಸಂವಿಧಾನಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ತಂಬಾಕು ಉತ್ಪನ್ನಗಳಿಗೆ ಜಿಎಸ್​ಟಿ, ಅಬಕಾರಿ ಸುಂಕ; ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್
ಹೈಕೋರ್ಟ್
TV9 Web
| Edited By: |

Updated on:Jan 10, 2022 | 8:51 PM

Share

ಬೆಂಗಳೂರು: ಕೇಂದ್ರ ಸರ್ಕಾರ ತಂಬಾಕು ಉತ್ಪನ್ನಗಳಿಗೆ ವಿವಿಧ ಬಗೆಯ ಸುಂಕ, ಜಿಎಸ್​​ಟಿ (GST),‌ ಅಬಕಾರಿ, ರಾಷ್ಟ್ರೀಯ ವಿಪತ್ತು ಸುಂಕ ಹೇರಿದೆ. ಆದರೆ ಇದನ್ನು ಒಪ್ಪದ ಕೆಲವು ತಂಬಾಕು ಕಂಪನಿಗಳು ವಿವಿಧ ಬಗೆಯ ಸುಂಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ (High Court) ಇಂದು (ಜನವರಿ 10) ತಂಬಾಕು ಕಂಪನಿಗಳ ವಾದ ತಿರಸ್ಕರಿಸಿದೆ. ಅಲ್ಲದೇ  ಸುಂಕ ನೀತಿ ಸಂವಿಧಾನಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ವಿ.ಎಸ್.ಪ್ರಾಡಕ್ಟ್ಸ್​ ಸೇರಿ ಹಲವು ತಂಬಾಕು ಉತ್ಪಾದಕರು ಮತ್ತು ತಂಬಾಕು ಉತ್ಪನ್ನಗಳ ಉತ್ಪಾದಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯದೀಶರಾದ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ವಿಚಾರಣೆ ನಡೆಸಿದೆ. ಏಕಕಾಲದಲ್ಲಿ ತಂಬಾಕು ಉತ್ಪನ್ನಗಳ ಮೇಲೆ ಜಿಎಸ್​​​ಟಿ, ಅಬಕಾರಿ ಸುಂಕ ಮತ್ತು ರಾಷ್ಟ್ರೀಯ ವಿಪತ್ತು ಸಂಕಷ್ಟ ಸುಂಕವನ್ನು ವಿಧಿಸುವ ಕೇಂದ್ರ ಸರ್ಕಾರದ ಕಾನೂನನ್ನು ಪ್ರಶ್ನಿಸಿ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತನ್ನ ತೀರ್ಮಾನವನ್ನು ಹೇಳಿದೆ.

ಕಲಂ 254ಎಗೆ ತಿದ್ದುಪಡಿ ಮಾಡಿ ಸರಕು ಮತ್ತು ಸೇವಾ ತೆರಿಗೆ ಆಡಳಿತ ಕಾನೂನುಗಳನ್ನು ಮಾಡುವ ಅಧಿಕಾರ ಹೊಂದಿದ್ದರೂ ಸಹ, 246 ಮತ್ತು 246 ಎ ವಿಧಿಯಡಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳ ಮೇಲೆ ಅಬಕಾರಿ ಸುಂಕಗಳನ್ನು ವಿಧಿಸುವ ಅಧಿಕಾರ ಹೊಂದಿದೆ. ಹಾಗಾಗಿ ಕಾನೂನುಗಳು ಸಿಂಧುವಾಗುತ್ತವೆ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಹಂತ ಹಂತವಾಗಿ ಕೋರ್ಟ್ ಕಲಾಪ ನೇರಪ್ರಸಾರ: ಹೈಕೋರ್ಟ್ ಕೋರ್ಟ್ ಕಲಾಪಗಳ ನೇರ ಪ್ರಸಾರ ವಿಚಾರಕ್ಕೆ ಸಂಬಂಧಪಟ್ಟಂತೆ ವಿಚಾರಣಾ‌ ನ್ಯಾಯಾಲಯಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನ ಅನುಷ್ಠಾನಗೊಳಿಸಬೇಕು. ಹಂತ ಹಂತವಾಗಿ ಕೋರ್ಟ್ ಕಲಾಪ ನೇರಪ್ರಸಾರ ಮಾಡಬೇಕು. ಇದಕ್ಕೆ ಪೂರಕ ಸೌಕರ್ಯ ಸರ್ಕಾರ ಕಲ್ಪಿಸಬೇಕು. ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ತಂಬಾಕು ಉತ್ಪನ್ನಗಳಿಗೆ ಯಾವುದೇ ನಿರ್ಬಂಧವಿಲ್ಲ; ಕೋಲಾರದಲ್ಲಿ ಸರ್ಕಾರಿ ಆದೇಶಗಳ ಪಾಲನೆಗೆ ಹಿಂದೇಟು

ರೀಟೇಲ್ ಬೆಲೆ ಇಳಿಸಲು ಸಂಸ್ಕರಿಸಿದ ತಾಳೆ ಎಣ್ಣೆ ಮೇಲಿನ ಆಮದು ಸುಂಕ ಶೇ 12.5ಕ್ಕೆ ಕಡಿತಗೊಳಿಸಿದ ಸರ್ಕಾರ

Published On - 8:12 pm, Mon, 10 January 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್