AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಲಂಚ‌ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಜೆ ಮಂಜುನಾಥ್
TV9 Web
| Edited By: ವಿವೇಕ ಬಿರಾದಾರ|

Updated on:Aug 03, 2022 | 4:25 PM

Share

ಬೆಂಗಳೂರು: ಬೆಂಗಳೂರು (Bengaluru) ನಗರ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ (J Manjunath) ಅವರ ಲಂಚ‌ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ. ನ್ಯಾ.ಕೆ.ನಟರಾಜನ್​ರವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಎಫ್ಎಸ್ಎಲ್​ನಿಂದ ವರದಿ ಇನ್ನೂ ಬರಬೇಕಿದೆ. ಜಿಲ್ಲಾಧಿಕಾರಿ ಹುದ್ದೆ ದುರ್ಬಳಕೆಯ ಗಂಭೀರ ಆರೋಪವಿದೆ ಎಂದು ಎಸಿಬಿ ಪರ ವಕೀಲ ಪಿ.ಎನ್.ಮನಮೋಹನ್ ವಾದಿಸಿದ್ದಾರೆ.

ಪ್ರಕರಣ ? 

ಬೆಂಗಳೂರು ನಗರ ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ ಸಂಬಂಧ ಭ್ರಷ್ಟಾಚಾರ ಆರೋಪದಲ್ಲಿ IAS ಅಧಿಕಾರಿ ಜೆ.ಮಂಜುನಾಥ್‌ ಅವರನ್ನು ಯಶವಂತಪುರದಲ್ಲಿರುವ ಅವರ ನಿವಾಸದಲ್ಲಿ ಜುಲೈ 4 ರಂದು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪದ ಬಳಿಕ ಮಂಜುನಾಥ್‌ರನ್ನು ಸರ್ಕಾರ ವರ್ಗಾವಣೆಗೊಳಿಸಿತ್ತು. ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ಮಂಜುನಾಥ್‌ ವರ್ಗಾವಣೆಗೊಂಡಿದ್ದರು.

ಮಂಜುನಾಥ್‌ ವಿರುದ್ಧ ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದಿರುವ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದಾರೆ.

ಹೈಕೋರ್ಟ್‌ ತರಾಟೆ ಬೆನ್ನಲ್ಲೇ ಎಸಿಬಿ ಡಿವೈಎಸ್‌ಪಿ ರವಿಶಂಕರ್ ನೇತೃತ್ವದಲ್ಲಿ ಮಂಜುನಾಥ್ ಬಂಧನವಾಗಿದೆ. ಸದ್ಯ ಮಂಜುನಾಥ್‌ರನ್ನು ಎಸಿಬಿ ಕಚೇರಿಗೆ ಕರೆತರಲಾಗುತ್ತು

Published On - 4:25 pm, Wed, 3 August 22

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ