AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿ ದುರಸ್ತಿ ಕಾರ್ಯ ಮಾಡಿ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ತಾಕೀತು

ಸಿಬಿಡಿ ವ್ಯಾಪ್ತಿಯ ಪ್ರದೇಶ ಗುಂಡಿ ಮುಕ್ತ ಮಾಡಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.S.R.ಕೃಷ್ಣ ಕುಮಾರ್ರಿದ್ದ ಪೀಠ ಆದೇಶ ನೀಡಿದೆ. ರಸ್ತೆ ಗುಂಡಿಯಿಂದ ಅಶ್ವಿನ್ ಸಾವು ಪ್ರಸ್ತಾಪ ಮಾಡಿದ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

15 ದಿನಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿ ದುರಸ್ತಿ ಕಾರ್ಯ ಮಾಡಿ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ತಾಕೀತು
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Mar 15, 2022 | 10:37 PM

Share

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ದುರಸ್ತಿಗೆ ಹೈಕೋರ್ಟ್ 15 ದಿನಗಳ ಗಡುವು ನೀಡಿದೆ. 15 ದಿನಗಳಲ್ಲಿ ರಸ್ತೆಗುಂಡಿ ಮುಚ್ಚಲು ಬಿಬಿಎಂಪಿಗೆ(BBMP) ಹೈಕೋರ್ಟ್(High Court) ತಾಕೀತು ನೀಡಿದ್ದು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿ ನೀಡಲು ಸೂಚಿಸಿದೆ. ಸಿಬಿಡಿ ವ್ಯಾಪ್ತಿಯ ಪ್ರದೇಶ ಗುಂಡಿ ಮುಕ್ತ ಮಾಡಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.S.R.ಕೃಷ್ಣ ಕುಮಾರ್ರಿದ್ದ ಪೀಠ ಆದೇಶ ನೀಡಿದೆ. ರಸ್ತೆ ಗುಂಡಿಯಿಂದ ಅಶ್ವಿನ್ ಸಾವು ಪ್ರಸ್ತಾಪ ಮಾಡಿದ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಕೂಡಲೇ ರಸ್ತೆ ಗುಂಡಿಗಳನ್ನ ಮುಚ್ಚಲು ಆದೇಶಿಸಿದ್ದು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿ ನೀಡಲು ಸೂಚನೆ ನೀಡಿದೆ.

ರಸ್ತೆ ಗುಂಡಿಗೆ ಬಿದ್ದು ಯುವಕ ಬಲಿ ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ ಆಗಿದೆ. ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ರಸ್ತೆ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಜಲಮಂಡಳಿ ಅಗೆದಿದ್ದ ರಸ್ತೆಗುಂಡಿಗೆ ಬಿದ್ದು ಅಶ್ವಿನ್‌ ಎಂಬವರಿಗೆ ಗಾಯವಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಶ್ವಿನ್ (27) ಸಾವನ್ನಪ್ಪಿದ್ದಾರೆ. ತಗ್ಗು ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಗುಂಡಿಗೆ ಬಿದ್ದು, ಅಪಘಾತ ಸಂಭವಿಸಿ ಬೈಕ್ ಸವಾರ ಅಶ್ವಿನ್ ಮೃತಪಟ್ಟ ಜಾಗದಲ್ಲಿ ಅಶ್ವಿನ್ ಸ್ನೇಹಿತರು ಜಮಾಯಿಸಿದ್ದಾರೆ. ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ಕೇಳಿಬಂದಿದೆ.

ಮಾರ್ಚ್ 13 ರಾತ್ರಿ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಅಶ್ವಿನ್ ಸಾವನ್ನಪ್ಪಿದ್ದಾರೆ. ಅಶ್ವಿನ್, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ತಾಯಿಗೆ ಒಬ್ಬನೇ ಮಗ ಅಶ್ವಿನ್. ಮೂಲತಃ ಹಾವೇರಿಯವರು ಎಂದು ತಿಳಿದುಬಂದಿದೆ.

ಅಲ್ಲದೆ, ಅಪಘಾತ ಸಂಭವಿಸಿ ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡ್ತಿದ್ದರೂ ಆಂಬ್ಯೂಲೆನ್ಸ್ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ಒಂದು ಘಂಟೆಯಿಂದ ಆಂಬ್ಯೂಲೆನ್ಸ್ಗೆ ಕಾಲ್ ಮಾಡಿದ್ರೂ ಆಂಬ್ಯೂಲೆನ್ಸ್ ಸ್ಥಳಕ್ಕೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ನಂತರ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡದವರು ದೇಶವಿರೋಧಿಗಳು; ವಿವಾದಾತ್ಮಕ ಹೇಳಿಕೆ ಕೊಟ್ಟ ಶಾಸಕ ರೇಣುಕಾಚಾರ್ಯ

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ