AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಬ್ರೂಯಿ ಗೆಸ್ಟ್​ಹೌಸ್​ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್​ಗೆ ಹೈಕೋರ್ಟ್ ಗ್ರೀನ್​ಸಿಗ್ನಲ್​

Balabrooie Guest House: ಬಾಲಬ್ರೂಯಿ ಗೆಸ್ಟ್​ಹೌಸ್​ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್​ಗೆ ಹೈಕೋರ್ಟ್ ಗ್ರೀನ್​ಸಿಗ್ನಲ್ ಕೊಟ್ಟಿದೆ. ಕಾನ್ಸ್ಟಿಟ್ಯೂಷನ್ ಕ್ಲಬ್​ನಲ್ಲಿ ಒಳ್ಳೆಯ ಲೈಬ್ರರಿ, ಉತ್ತಮ ಕಾಫಿ ಸಿಗುವಂತಿರಲಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಿಜೆ ಪ್ರಸನ್ನ ಬಿ.ವರಾಳೆ ಸಲಹೆ ನೀಡಿದ್ದಾರೆ.

ಬಾಲಬ್ರೂಯಿ ಗೆಸ್ಟ್​ಹೌಸ್​ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್​ಗೆ ಹೈಕೋರ್ಟ್ ಗ್ರೀನ್​ಸಿಗ್ನಲ್​
ಕರ್ನಾಟಕ ಹೈಕೋರ್ಟ್
TV9 Web
| Updated By: ಆಯೇಷಾ ಬಾನು|

Updated on:Jan 17, 2023 | 1:16 PM

Share

ಬೆಂಗಳೂರು: ಬಾಲಬ್ರೂಯಿ ಗೆಸ್ಟ್​ಹೌಸ್​ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್​ಗೆ ಹೈಕೋರ್ಟ್ ಗ್ರೀನ್​ಸಿಗ್ನಲ್ ಕೊಟ್ಟಿದೆ.​ ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್‌ ನಿರ್ಮಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಆದ್ರೆ ಈ ಬಗ್ಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳಲು ಆದೇಶಿಸಿತ್ತು. ಮಧ್ಯಂತರ ಆದೇಶ ನೀಡಿತ್ತು. ಸದ್ಯ ಈಗ ಬಾಲಬ್ರೂಯಿ ಗೆಸ್ಟ್​ಹೌಸ್​ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್​ಗೆ ಹೈಕೋರ್ಟ್ ಗ್ರೀನ್​ಸಿಗ್ನಲ್ ಕೊಟ್ಟಿದೆ.

ಬಾಲಬ್ರೂಯಿ ಆವರಣದಲ್ಲಿ ಮರಗಳನ್ನು ಕಡಿಯಲಾಗುವುದಿಲ್ಲ. ಕಟ್ಟಡಕ್ಕೆ ಧಕ್ಕೆಯಾಗುವ ಕಾಮಗಾರಿ ನಡೆಸಲಾಗುವುದಿಲ್ಲ. ಗೆಸ್ಟ್​ಹೌಸ್ ನಿರ್ವಹಣೆಗೆ ಮಾತ್ರ ಕ್ರಮ ಕೈಗೊಳ್ಳಲಾಗುವುದು. ಗೆಸ್ಟ್​ಹೌಸ್ ಆವರಣದ 159 ಮರಗಳನ್ನು ಕಡಿಯುವುದಿಲ್ಲ. ಗೆಸ್ಟ್​ಹೌಸ್ ಅನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಆಗಿ ಬಳಸಲಾಗುವುದು ಎಂದು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ. ಸರ್ಕಾರದ ಹೇಳಿಕೆ ದಾಖಲಿಸಿಕೊಂಡು ಕಾನ್ಸ್ಟಿಟ್ಯೂಷನ್ ಕ್ಲಬ್​ಗೆ ಕೋರ್ಟ್​ ಅನುಮತಿ ನೀಡಿದೆ. ಕಾನ್ಸ್ಟಿಟ್ಯೂಷನ್ ಕ್ಲಬ್​ನಲ್ಲಿ ಒಳ್ಳೆಯ ಲೈಬ್ರರಿ, ಉತ್ತಮ ಕಾಫಿ ಸಿಗುವಂತಿರಲಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಿಜೆ ಪ್ರಸನ್ನ ಬಿ.ವರಾಳೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: 1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

ಘಟನೆ ಹಿನ್ನೆಲೆ

ಪಾರಂಪರಿಕ ಮೌಲ್ಯ ಹೊಂದಿರುವ ಬಾಲಬ್ರೂಯಿ ಕಟ್ಟಡದಲ್ಲಿ ಕಾನ್​ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸುವ ಸರ್ಕಾರದ ಪ್ರಸ್ತಾವಕ್ಕೆ ಈ ಹಿಂದೆ ಪರಿಸರವಾದಿಗಳು ಮತ್ತು ನಗರದ ಇತಿಹಾಸ ತಜ್ಞರಿಂದ ವಿರೋಧ ವ್ಯಕ್ತವಾಗಿತ್ತು. ‘ಬೆಂಗಳೂರಿನ ಪರಂಪರೆ ಸಾರುವ ಇಂಥ ತಾಣಗಳನ್ನು ಕಾಪಾಡಬೇಕು. ಒಮ್ಮೆ ಇಂಥ ಕಟ್ಟಡಗಳ ಮೂಲ ಸ್ವರೂಪ ನಾಶಪಡಿಸಿದರೆ ಮತ್ತೆ ರೂಪಿಸುವುದು ಅಸಾಧ್ಯ’ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು.

‘ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್‌ ಅವರಂಥ ಮಹನೀಯರು ಬಾಲಬ್ರೂಯಿ ಕಟ್ಟಡದಲ್ಲಿ ಉಳಿದುಕೊಂಡಿದ್ದರು. ಇಂಥ ಕಟ್ಟಡವನ್ನು, ಅಲ್ಲಿರುವ ಪ್ರಾಕೃತಿಕ ಸೌಂದರ್ಯವನ್ನು ಮರು ಸೃಷ್ಟಿಸಲು ಸಾಧ್ಯವಿಲ್ಲ. ಈ ಕಟ್ಟಡವನ್ನು ಮ್ಯೂಸಿಯಂ ಆಗಿ ರೂಪಿಸಬೇಕು’ ಎಂದು ಬಿ ಪ್ಯಾಕ್‌ ಸಂಸ್ಥೆಯ ಶರತ್‌ ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

ಬಾಲಬ್ರೂಯಿ ಕಟ್ಟಡವನ್ನು ಕಾನ್​ಸ್ಟಿಟ್ಯೂಶನ್​ ಕ್ಲಬ್​ಗೆ ಬಳಸುವ ಪ್ರಸ್ತಾವ ವಿರೋಧಿಸಿ ಬೆಂಗಳೂರು ಪರಿಸರ ಟ್ರಸ್ಟ್‌ ಅಧ್ಯಕ್ಷ ಯಲ್ಲಪ್ಪ ರೆಡ್ಡಿ, ಭಾರತೀಯ ಸಸ್ಯಶಾಸ್ತ್ರ ಸರ್ವೆ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಸಂಜಪ್ಪ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಡೀನ್‌ ಪ್ರೊ.ಬಾಲಕೃಷ್ಣ ಗೌಡ, ಐಐಎ ಮಾಜಿ ಅಧ್ಯಕ್ಷ ಪ್ರೊ. ಜೈಸಿಂಹ ಶಾಸಕರಿಗೆ ಪತ್ರ ಬರೆದಿದ್ದರು.

14 ಎಕರೆ ಪ್ರದೇಶದಲ್ಲಿ 1850ರಲ್ಲಿ ಬಾಲಬ್ರೂಯಿ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೈಸೂರು ರಾಜ್ಯದಲ್ಲಿ ಸುದೀರ್ಘ ಕಾಲ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಮಾರ್ಕ್ ಕಬ್ಬನ್ ತಮ್ಮ ಐರಿಶ್ ಸಮುದ್ರದ ದ್ವೀಪದ ಊರಿನಲ್ಲಿರುವ ರಚನೆಯನ್ನು ನಿರ್ಮಿಸಲು ಉದ್ದೇಶಿಸಿದ್ದರು. ಇಲ್ಲಿ 100 ವರ್ಷಗಳಿಗೂ ಹಳೆಯ ಸುಮಾರು 150 ವಿವಿಧ ಮರಗಳಿವೆ ಎಂದು ಪರಿಸರವಾದಿಗಳು ಹೇಳುತ್ತಾರೆ.

ಸದ್ಯ ಈ ಸಂಬಂಧ ನಿರ್ಧಾರ ಪ್ರಕಟಿಸಿರುವ ಕೋರ್ಟ್ ಕೆಲವು ನಿರ್ಬಂಧಗಳನ್ನು ಹೇರಿ, ಮರಗಳನ್ನು ಕಡಿಯದೆ, ಕಟ್ಟಡಕ್ಕೆ ಹಾನಿ ಮಾಡದೇ ಕ್ಲಬ್ ತೆರೆಯಲು ಅನುಮತಿ ನೀಡಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:16 pm, Tue, 17 January 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?