AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ವಲಯವಾರು ಕ್ರಿಯಾ ಯೋಜನೆ ರೂಪಿಸಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಬಿಬಿಎಂಪಿ ಈವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ನೀವು ಹೇಳುತ್ತೀರಾ ಏನೂ ಮಾಡುವುದಿಲ್ಲ. ಬಿಬಿಎಂಪಿ ಪ್ರತಿದಿನ ಒಂದು ವಲಯದ ಸಭೆ ನಡೆಸಬೇಕು.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ವಲಯವಾರು ಕ್ರಿಯಾ ಯೋಜನೆ ರೂಪಿಸಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: sandhya thejappa

Updated on:Apr 05, 2022 | 2:49 PM

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ (Pothole) ಮುಚ್ಚುವ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ವಲಯವಾರು ಕ್ರಿಯಾ ಯೋಜನೆ ರೂಪಿಸಲು ಆದೇಶ ನೀಡಿರುವ ಹೈಕೋರ್ಟ್, 8 ವಲಯಗಳಲ್ಲಿ ರಸ್ತೆ ಅಗೆಯುವ ಏಜೆನ್ಸಿಗಳನ್ನು ಗುರುತಿಸಿ. ಏಜೆನ್ಸಿಗಳೊಂದಿಗೆ ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಸಬೇಕು ಎಂದು ತಿಳಿಸಿದೆ. ರಸ್ತೆಗಳ ಜಂಟಿ ಸರ್ವೆ ನಡೆಸಿ ಯೋಜನೆ ರೂಪಿಸಬೇಕು. ರಸ್ತೆ ಗುಂಡಿ ಮುಚ್ಚಲು ಸಂಸ್ಥೆ ಆಸಕ್ತಿ ವ್ಯಕ್ತಪಡಿಸಿದೆ. ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆ ಸಿದ್ಧವಿದೆ. ಸಂಸ್ಥೆಯೊಂದಿಗೂ ಅಧಿಕಾರಿಗಳು ಸೇರಿ ಯೋಜನೆ ರೂಪಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಿದೆ.

ಬಿಬಿಎಂಪಿ ಈವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ನೀವು ಹೇಳುತ್ತೀರಾ ಏನೂ ಮಾಡುವುದಿಲ್ಲ. ಬಿಬಿಎಂಪಿ ಪ್ರತಿದಿನ ಒಂದು ವಲಯದ ಸಭೆ ನಡೆಸಬೇಕು. ಏ.19ರೊಳಗೆ 8 ವಲಯಗಳ ಕ್ರಿಯಾಯೋಜನೆ ಸಲ್ಲಿಸಬೇಕು ಅಂತ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ತಾಕೀತು ಮಾಡಿದೆ.

15 ದಿನಗಳ ಗಡುವು ನೀಡಿದ್ದ ಹೈಕೋರ್ಟ್​: ಹೈಕೋರ್ಟ್ ಮಾರ್ಚ್​ 15ಕ್ಕೆ ನಗರದಲ್ಲಿ ರಸ್ತೆ ಗುಂಡಿ ದುರಸ್ತಿಗೆ 15 ದಿನಗಳ ಗಡುವು ನೀಡಿತ್ತು. 15 ದಿನಗಳಲ್ಲಿ ರಸ್ತೆಗುಂಡಿ ಮುಚ್ಚಲು ಬಿಬಿಎಂಪಿಗೆ ಹೈಕೋರ್ಟ್ ತಾಕೀತು ನೀಡಿದ್ದು, 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿ ನೀಡಲು ಸೂಚಿಸಿತ್ತು. ಸಿಬಿಡಿ ವ್ಯಾಪ್ತಿಯ ಪ್ರದೇಶ ಗುಂಡಿ ಮುಕ್ತ ಮಾಡಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.S.R.ಕೃಷ್ಣ ಕುಮಾರ್ರಿದ್ದ ಪೀಠ ಆದೇಶ ನೀಡಿತ್ತು. ರಸ್ತೆ ಗುಂಡಿಯಿಂದ ಅಶ್ವಿನ್ ಸಾವು ಪ್ರಸ್ತಾಪ ಮಾಡಿದ ಹೈಕೋರ್ಟ್ ಆತಂಕ ವ್ಯಕ್ತಪಡಿಸಿತ್ತು. ಕೂಡಲೇ ರಸ್ತೆ ಗುಂಡಿಗಳನ್ನ ಮುಚ್ಚಲು ಆದೇಶಿಸಿತ್ತು.

ಇದನ್ನೂ ಓದಿ

Crime News: ರಾತ್ರಿ ಬಸ್​ನಲ್ಲಿ ಮೈ-ಕೈ ಮುಟ್ಟಿದವನಿಗೆ ಪಿನ್​ನಲ್ಲಿ ಚುಚ್ಚಿ, ಪೊಲೀಸ್ ಠಾಣೆಗೆ ಎಳೆದೊಯ್ದ ಮಹಿಳೆ

ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯಪಾನ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

Published On - 2:45 pm, Tue, 5 April 22

ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!
Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!