AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಸ್ತೆ ಗುಂಡಿ ಮುಚ್ಚುವಲ್ಲಿ ಬಿಬಿಎಂಪಿ ವಿಫಲ: ಹೈಕೋರ್ಟ್​ಗೆ ಹಾಜರಾದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿತು.

ಬೆಂಗಳೂರು ರಸ್ತೆ ಗುಂಡಿ ಮುಚ್ಚುವಲ್ಲಿ ಬಿಬಿಎಂಪಿ ವಿಫಲ: ಹೈಕೋರ್ಟ್​ಗೆ ಹಾಜರಾದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jun 30, 2022 | 12:06 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಬಗ್ಗೆ ಹೈಕೋರ್ಟ್ ಹಲವು ದಿನಗಳಿಂದ ಅಧಿಕಾರಿಗಳಿಗೆ ಚಾಟಿ ಬೀಸುತ್ತಲೇ ಇದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಹಾಜರಾಗಿದ್ದಾರೆ.

‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಪಿಎಂ ಬಂದಾಗ ಮಾಡಿದ ರಸ್ತೆಗಳು ಹಾಳಾಗಿರುವ ವರದಿಗಳಿವೆ’ ಎಂದು ಹೈಕೋರ್ಟ್ ಆಕ್ಷೇಪಿಸಿತು.

ಹೈಕೋರ್ಟ್ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತರ ಪರ ವಕೀಲರಾದ ಶ್ರೀನಿಧಿ, ಪ್ರಧಾನಿ ಭೇಟಿ ವೇಳೆ ನಿರ್ಮಿಸಿದ್ದ ರಸ್ತೆಗಳು ಹಾಳಾಗಿಲ್ಲ. ಒಳಚರಂಡಿ ಸಮಸ್ಯೆಯಿಂದ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲಾಗಿದೆ. ಜಂಟಿ ಸಮೀಕ್ಷೆಯ ಪ್ರಕಾರ, 847.56 ಕಿಮೀ ರಸ್ತೆಯಲ್ಲಿರುವ ಗುಂಡಿಗಳನ್ನು ಸರಿಪಡಿಸಬೇಕಿದೆ. ಈ ಪೈಕಿ 576 ಕಿಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ. 397 ಕಿಮೀ ರಸ್ತೆ ಗುಂಡಿ ರಿಪೇರಿಗೆ ಕಾರ್ಯಾದೇಶ ನೀಡಲಾಗಿದೆ. ಜುಲೈ 15ರಂದು ಟೆಂಡರ್ ತೆರೆಯಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ರಸ್ತೆಗಳು ಸರಿಯಾಗುವವರೆಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಗಿಸುವುದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದರು.

Published On - 12:02 pm, Thu, 30 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ