ರಾಕ್​​ಲೈನ್ ವೆಂಕಟೇಶ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ

ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮಾಲಕತ್ವದ ರಾಕ್​​ಲೈನ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಅಲ್ಲಿಗೆ ರಾಕ್​ಲೈನ್ ವೆಂಕಟೇಶ್​ಗೆ ಬಿಗ್​ ರಿಲೀಫ್​ ಸಿಕ್ಕಿದೆ. ಬಿಬಿಎಂಪಿ ಆದೇಶ ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ  ರಿಟ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ರಾಕ್​​ಲೈನ್ ವೆಂಕಟೇಶ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ
ರಾಕ್​​ಲೈನ್ ಮಾಲ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 19, 2024 | 4:32 PM

ಬೆಂಗಳೂರು, ಫೆಬ್ರವರಿ 19: ಬಿಬಿಎಂಪಿ ಸೀಜ್ ಮಾಡಿದ್ದ ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ (Rockline Venkatesh) ಮಾಲಕತ್ವದ ರಾಕ್​​ಲೈನ್ ಮಾಲ್ (Rockline Mall) ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಅಲ್ಲಿಗೆ ರಾಕ್​ಲೈನ್ ವೆಂಕಟೇಶ್​ಗೆ ಬಿಗ್​ ರಿಲೀಫ್​ ಸಿಕ್ಕಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ರಾಕ್​​ಲೈನ್ ಮಾಲ್​ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ  ರಿಟ್ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು‌ ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್​ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ನೀಡಿಯೂ ಬಾಕಿ ಪಾವತಿಸದ ಹಿನ್ನೆಲೆ ಮಾಲ್​​ಗೆ ಬೀಗ ಹಾಕಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಕ್​ಲೈನ್ ಮಾಲ್ ಮ್ಯಾನೇಜರ್ ಪ್ರಕಾಶ್, ನಮಗೆ ನೋಟಿಸ್ ಕೊಡದೇ ಮಾಲ್​ಗೆ ಬೀಗ ಹಾಕಿದ್ದಾರೆ ಎಂದು ಹೇಳಿದ್ದರು.

ರಾಕ್​ಲೈನ್ ವೆಂಕಟೇಶ್​ ಪುತ್ರ ಯತೀಶ್ ಅಧಿಕಾರಿಗಳಿಗೆ ಆವಾಜ್

ಈ ಬಗ್ಗೆ ರಾಕ್​ಲೈನ್ ವೆಂಕಟೇಶ್​ ಪುತ್ರ ಯತೀಶ್ ಅಧಿಕಾರಿಗಳಿಗೆ ಆವಾಜ್ ಹಾಕಿದ್ದರು. ಮಾಲ್ ಏನು ನಿಮ್ಮಪ್ಪಂದಾ ಅಂತಾ ಅಧಿಕಾರಿಗಳನ್ನು ನಿಂದಿಸಿದ್ದರು. ಬಾಗಿಲು ಹಾಕು ಅಂತೀಯಾ, ಆದೇಶ ಪ್ರತಿ ಎಲ್ಲಿ ಎಂದು ಕಿರಿಕ್ ತೆಗೆದಿದ್ದರು. ಬಿಬಿಎಂಪಿ ಎಆರ್​​ಒ ರಮೇಶ್​ಗೆ ಹಿಗ್ಗಾಮುಗ್ಗಾ ಆವಾಜ್ ಹಾಕಿದ್ದರು.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ: ರಾಕ್​ಲೈನ್​ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ

ತೆರಿಗೆ ಬಾಕಿ ಉಳಿಸಿದ್ದರಿಂದ ರಾಕ್​ಲೈನ್ ಮಾಲ್​ಗೆ ಅಧಿಕಾರಿಗಳು ಬೀಗ ಜಡಿದಿದ್ದರು. ಆದರೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ರಾಕ್​ಲೈನ್ ಪುತ್ರ ಯತೀಶ್ ಆವಾಜ್ ಹಾಕಿ ದರ್ಪ ಮೆರೆದಿದ್ದರು.

ಇದನ್ನೂ ಓದಿ: ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ

ಪ್ರಕರಣ ಸಂಬಂಧ ದಾಸರಹಳ್ಳಿ ವಲಯ ಅಪರ ಆಯುಕ್ತ ಬಾಲಶೇಖರ್ ಮಾತನಾಡಿ, 2011ರಿಂದ 11 ಕೋಟಿ 56 ಲಕ್ಷ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. 11 ವರ್ಷದಿಂದ ತೆರಿಗೆ ಕಟ್ಟಿಲ್ಲ. ಒಮ್ಮೆ ಒಂದು ಬಾರಿ 1 ಕೋಟಿ 10 ಲಕ್ಷ ರೂ. ಕಟ್ಟಿದ್ದಾರೆ. 26 ಲಕ್ಷ ರೂ. ಚೆಕ್ ಕೊಟ್ಟಿದ್ದರು. ಈಗ ನೋಟಿಸ್ ಕೊಟ್ಟಿದ್ದೇವೆ ಆದರೂ ಕಟ್ಟಿಲ್ಲ. ಹೀಗಾಗಿ ಸೀಲ್ ಮಾಡಿದ್ದೇವೆ ಎಂದು ಈ ಹಿಂದೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:08 pm, Mon, 19 February 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ