AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​​ಲೈನ್ ವೆಂಕಟೇಶ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ

ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮಾಲಕತ್ವದ ರಾಕ್​​ಲೈನ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಅಲ್ಲಿಗೆ ರಾಕ್​ಲೈನ್ ವೆಂಕಟೇಶ್​ಗೆ ಬಿಗ್​ ರಿಲೀಫ್​ ಸಿಕ್ಕಿದೆ. ಬಿಬಿಎಂಪಿ ಆದೇಶ ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ  ರಿಟ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ರಾಕ್​​ಲೈನ್ ವೆಂಕಟೇಶ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ
ರಾಕ್​​ಲೈನ್ ಮಾಲ್
Ramesha M
| Edited By: |

Updated on:Feb 19, 2024 | 4:32 PM

Share

ಬೆಂಗಳೂರು, ಫೆಬ್ರವರಿ 19: ಬಿಬಿಎಂಪಿ ಸೀಜ್ ಮಾಡಿದ್ದ ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ (Rockline Venkatesh) ಮಾಲಕತ್ವದ ರಾಕ್​​ಲೈನ್ ಮಾಲ್ (Rockline Mall) ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಅಲ್ಲಿಗೆ ರಾಕ್​ಲೈನ್ ವೆಂಕಟೇಶ್​ಗೆ ಬಿಗ್​ ರಿಲೀಫ್​ ಸಿಕ್ಕಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ರಾಕ್​​ಲೈನ್ ಮಾಲ್​ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ  ರಿಟ್ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು‌ ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್​ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ನೀಡಿಯೂ ಬಾಕಿ ಪಾವತಿಸದ ಹಿನ್ನೆಲೆ ಮಾಲ್​​ಗೆ ಬೀಗ ಹಾಕಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಕ್​ಲೈನ್ ಮಾಲ್ ಮ್ಯಾನೇಜರ್ ಪ್ರಕಾಶ್, ನಮಗೆ ನೋಟಿಸ್ ಕೊಡದೇ ಮಾಲ್​ಗೆ ಬೀಗ ಹಾಕಿದ್ದಾರೆ ಎಂದು ಹೇಳಿದ್ದರು.

ರಾಕ್​ಲೈನ್ ವೆಂಕಟೇಶ್​ ಪುತ್ರ ಯತೀಶ್ ಅಧಿಕಾರಿಗಳಿಗೆ ಆವಾಜ್

ಈ ಬಗ್ಗೆ ರಾಕ್​ಲೈನ್ ವೆಂಕಟೇಶ್​ ಪುತ್ರ ಯತೀಶ್ ಅಧಿಕಾರಿಗಳಿಗೆ ಆವಾಜ್ ಹಾಕಿದ್ದರು. ಮಾಲ್ ಏನು ನಿಮ್ಮಪ್ಪಂದಾ ಅಂತಾ ಅಧಿಕಾರಿಗಳನ್ನು ನಿಂದಿಸಿದ್ದರು. ಬಾಗಿಲು ಹಾಕು ಅಂತೀಯಾ, ಆದೇಶ ಪ್ರತಿ ಎಲ್ಲಿ ಎಂದು ಕಿರಿಕ್ ತೆಗೆದಿದ್ದರು. ಬಿಬಿಎಂಪಿ ಎಆರ್​​ಒ ರಮೇಶ್​ಗೆ ಹಿಗ್ಗಾಮುಗ್ಗಾ ಆವಾಜ್ ಹಾಕಿದ್ದರು.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ: ರಾಕ್​ಲೈನ್​ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ

ತೆರಿಗೆ ಬಾಕಿ ಉಳಿಸಿದ್ದರಿಂದ ರಾಕ್​ಲೈನ್ ಮಾಲ್​ಗೆ ಅಧಿಕಾರಿಗಳು ಬೀಗ ಜಡಿದಿದ್ದರು. ಆದರೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ರಾಕ್​ಲೈನ್ ಪುತ್ರ ಯತೀಶ್ ಆವಾಜ್ ಹಾಕಿ ದರ್ಪ ಮೆರೆದಿದ್ದರು.

ಇದನ್ನೂ ಓದಿ: ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ

ಪ್ರಕರಣ ಸಂಬಂಧ ದಾಸರಹಳ್ಳಿ ವಲಯ ಅಪರ ಆಯುಕ್ತ ಬಾಲಶೇಖರ್ ಮಾತನಾಡಿ, 2011ರಿಂದ 11 ಕೋಟಿ 56 ಲಕ್ಷ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. 11 ವರ್ಷದಿಂದ ತೆರಿಗೆ ಕಟ್ಟಿಲ್ಲ. ಒಮ್ಮೆ ಒಂದು ಬಾರಿ 1 ಕೋಟಿ 10 ಲಕ್ಷ ರೂ. ಕಟ್ಟಿದ್ದಾರೆ. 26 ಲಕ್ಷ ರೂ. ಚೆಕ್ ಕೊಟ್ಟಿದ್ದರು. ಈಗ ನೋಟಿಸ್ ಕೊಟ್ಟಿದ್ದೇವೆ ಆದರೂ ಕಟ್ಟಿಲ್ಲ. ಹೀಗಾಗಿ ಸೀಲ್ ಮಾಡಿದ್ದೇವೆ ಎಂದು ಈ ಹಿಂದೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:08 pm, Mon, 19 February 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್