AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರ ತಿರಸ್ಕೃತ: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ

ರಿಪಿಟರ್ಸ್​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿದೆ.

ಸರ್ಕಾರದ ನಿರ್ಧಾರ ತಿರಸ್ಕೃತ: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Sep 03, 2022 | 10:49 PM

Share

ಬೆಂಗಳೂರು: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣನೆ ವಿಚಾರಕ್ಕೆ ಸಂಬಂಧಿಸಿ ಹಿಂದಿನಂತೆ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂಬ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂದು ರಾಜ್ಯ ಸರ್ಕಾರ ಜುಲೈ 30ರಂದು ಆದೇಶ ಹೊರಡಿಸಿತ್ತು. ಬಳಿಕ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಸಲ್ಲಿಸಿದ್ದರು. ಕೊವಿಡ್‌ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ಪಿಯು ಉತ್ತೀರ್ಣರಾಗಿದ್ರು. ಹೀಗಾಗಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕವನ್ನು ಕೆಇಎ ಪರಿಗಣಿಸಲಿಲ್ಲ. ಸದ್ಯ ಈಗ ಪಿಯುಸಿ ಅಂಕ ಪರಿಗಣಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

2020-21ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದು, ಸಿಇಟಿ ಪರೀಕ್ಷೆಗೆ ಪುನರಾವರ್ತಿತರಾಗಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್​ಗಳ ಸೀಟು ಹಂಚಿಕೆ ಮಾಡುವಾಗ ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಸಹ ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್​ ಆದೇಶ ನೀಡಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2020-21ನೇ) ದ್ವಿತೀಯ ಪಿಯುಸಿಯಲ್ಲಿ ತಾವು ಗಳಿಸಿದ ಅಂಕಗಳನ್ನು ವತ್ತಿಪರ ಕೋರ್ಸ್​ಗಳ ಸಿಇಟಿ ಹಂಚಿಕೆಯ ರ‍್ಯಾಂಕಿಂಗ್​ಗೆ ಪರಿಗಣಿಸಬೇಕು ಎಂದು ಕೋರಿ ಹಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ಈ ತೀರ್ಪು ನೀಡಿದೆ. ರಿಪಿಟರ್ಸ್​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಈಗಾಗಲೇ ಸಿಇಟಿ ಪ್ರಕಟಿಸಿದ ರ‍್ಯಾಂಕಿಂಗ್​​​ ಪಟ್ಟಿಯಲ್ಲಿ ಏರುಪೇರಾಗುವ ಎಲ್ಲ ಸಾಧ್ಯತೆಗಳಿವೆ.

Published On - 10:49 pm, Sat, 3 September 22

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!