AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರ ತಿರಸ್ಕೃತ: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ

ರಿಪಿಟರ್ಸ್​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿದೆ.

ಸರ್ಕಾರದ ನಿರ್ಧಾರ ತಿರಸ್ಕೃತ: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Sep 03, 2022 | 10:49 PM

Share

ಬೆಂಗಳೂರು: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣನೆ ವಿಚಾರಕ್ಕೆ ಸಂಬಂಧಿಸಿ ಹಿಂದಿನಂತೆ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂಬ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂದು ರಾಜ್ಯ ಸರ್ಕಾರ ಜುಲೈ 30ರಂದು ಆದೇಶ ಹೊರಡಿಸಿತ್ತು. ಬಳಿಕ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಸಲ್ಲಿಸಿದ್ದರು. ಕೊವಿಡ್‌ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ಪಿಯು ಉತ್ತೀರ್ಣರಾಗಿದ್ರು. ಹೀಗಾಗಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕವನ್ನು ಕೆಇಎ ಪರಿಗಣಿಸಲಿಲ್ಲ. ಸದ್ಯ ಈಗ ಪಿಯುಸಿ ಅಂಕ ಪರಿಗಣಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

2020-21ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದು, ಸಿಇಟಿ ಪರೀಕ್ಷೆಗೆ ಪುನರಾವರ್ತಿತರಾಗಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್​ಗಳ ಸೀಟು ಹಂಚಿಕೆ ಮಾಡುವಾಗ ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಸಹ ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್​ ಆದೇಶ ನೀಡಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2020-21ನೇ) ದ್ವಿತೀಯ ಪಿಯುಸಿಯಲ್ಲಿ ತಾವು ಗಳಿಸಿದ ಅಂಕಗಳನ್ನು ವತ್ತಿಪರ ಕೋರ್ಸ್​ಗಳ ಸಿಇಟಿ ಹಂಚಿಕೆಯ ರ‍್ಯಾಂಕಿಂಗ್​ಗೆ ಪರಿಗಣಿಸಬೇಕು ಎಂದು ಕೋರಿ ಹಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ಈ ತೀರ್ಪು ನೀಡಿದೆ. ರಿಪಿಟರ್ಸ್​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಈಗಾಗಲೇ ಸಿಇಟಿ ಪ್ರಕಟಿಸಿದ ರ‍್ಯಾಂಕಿಂಗ್​​​ ಪಟ್ಟಿಯಲ್ಲಿ ಏರುಪೇರಾಗುವ ಎಲ್ಲ ಸಾಧ್ಯತೆಗಳಿವೆ.

Published On - 10:49 pm, Sat, 3 September 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ