AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರ ತಿರಸ್ಕೃತ: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ

ರಿಪಿಟರ್ಸ್​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿದೆ.

ಸರ್ಕಾರದ ನಿರ್ಧಾರ ತಿರಸ್ಕೃತ: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Sep 03, 2022 | 10:49 PM

Share

ಬೆಂಗಳೂರು: ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣನೆ ವಿಚಾರಕ್ಕೆ ಸಂಬಂಧಿಸಿ ಹಿಂದಿನಂತೆ ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂಬ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂದು ರಾಜ್ಯ ಸರ್ಕಾರ ಜುಲೈ 30ರಂದು ಆದೇಶ ಹೊರಡಿಸಿತ್ತು. ಬಳಿಕ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಸಲ್ಲಿಸಿದ್ದರು. ಕೊವಿಡ್‌ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ಪಿಯು ಉತ್ತೀರ್ಣರಾಗಿದ್ರು. ಹೀಗಾಗಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕವನ್ನು ಕೆಇಎ ಪರಿಗಣಿಸಲಿಲ್ಲ. ಸದ್ಯ ಈಗ ಪಿಯುಸಿ ಅಂಕ ಪರಿಗಣಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

2020-21ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದು, ಸಿಇಟಿ ಪರೀಕ್ಷೆಗೆ ಪುನರಾವರ್ತಿತರಾಗಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್​ಗಳ ಸೀಟು ಹಂಚಿಕೆ ಮಾಡುವಾಗ ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಸಹ ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್​ ಆದೇಶ ನೀಡಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2020-21ನೇ) ದ್ವಿತೀಯ ಪಿಯುಸಿಯಲ್ಲಿ ತಾವು ಗಳಿಸಿದ ಅಂಕಗಳನ್ನು ವತ್ತಿಪರ ಕೋರ್ಸ್​ಗಳ ಸಿಇಟಿ ಹಂಚಿಕೆಯ ರ‍್ಯಾಂಕಿಂಗ್​ಗೆ ಪರಿಗಣಿಸಬೇಕು ಎಂದು ಕೋರಿ ಹಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ಈ ತೀರ್ಪು ನೀಡಿದೆ. ರಿಪಿಟರ್ಸ್​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಈಗಾಗಲೇ ಸಿಇಟಿ ಪ್ರಕಟಿಸಿದ ರ‍್ಯಾಂಕಿಂಗ್​​​ ಪಟ್ಟಿಯಲ್ಲಿ ಏರುಪೇರಾಗುವ ಎಲ್ಲ ಸಾಧ್ಯತೆಗಳಿವೆ.

Published On - 10:49 pm, Sat, 3 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ