Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಮುಗಿಸಿ, ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂದಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಮುಗಿಸಿ, ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ
ಕರ್ನಾಟಕ್​ ಹೈಕೋರ್ಟ್​
Follow us
TV9 Web
| Updated By: ಆಯೇಷಾ ಬಾನು

Updated on:Jul 20, 2022 | 10:59 PM

ಬೆಂಗಳೂರು: ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿ ಕೆರೆ ಒತ್ತುವರಿ ತೆರವು ವಿಳಂಬಕ್ಕೆ ಹೈಕೋರ್ಟ್(High Court) ಅಸಮಾಧಾನ ವ್ಯಕ್ತಪಡಿಸಿದೆ. ಹಾಗೂ ರಾಜ್ಯಸರ್ಕಾರ(Karnataka Government) ಮತ್ತು ಬಿಬಿಎಂಪಿಗೆ(BBMP) ತರಾಟೆಗೆ ತೆಗೆದುಕೊಂಡಿದೆ. ಕಳೆದ 6 ತಿಂಗಳಿನಿಂದ ಒಂದೇ ಒಂದು ಒತ್ತುವರಿ ತೆರವುಗೊಳಿಸಿಲ್ಲ. ಬೆಂಗಳೂರಿನ ಕೆರೆಗಳನ್ನು ಭವಿಷ್ಯದ ಜನರಿಗಾಗಿ ರಕ್ಷಿಸಬೇಕು. ತಹಶೀಲ್ದಾರ್‌ಗಳು ಒತ್ತುವರಿ ತೆರವಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು. ಅಗತ್ಯ ಸಿಬ್ಬಂದಿ, ಪೊಲೀಸ್ ಭದ್ರತೆ ಒದಗಿಸುವಂತೆ ಕೆರೆ ಸುತ್ತಲ ರಸ್ತೆ ಅಗಲೀಕರಣಗೊಳಿಸದಂತೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ

ಕರ್ನಾಟಕ ಹೈಕೋರ್ಟ್ಗೆ(Karnataka High Court) ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ(Supreme Court Collegium) ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ಜಡ್ಜ್ಗಳಿಗೆ ಹೈಕೋರ್ಟ್ ಜಡ್ಜ್ ಹುದ್ದೆಗೆ ಬಡ್ತಿ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಅನಿಲ್ ಭೀಮಸೇನ ಕತ್ತಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ ಭಟ್ ಅಡಿಗ, ತಲಕಾಡು ಗಿರಿಗೌಡ ಶಿವಶಂಕರೇಗೌಡ‌ ಅವರಿಗೆ ಹೈಕೋರ್ಟ್ ಜಡ್ಜ್ ಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕದ ಹೈಕೋರ್ಟ್ ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಸದ್ಯ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದರೇ, ಜಡ್ಜ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

Published On - 10:56 pm, Wed, 20 July 22

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ