AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಮುಗಿಸಿ, ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂದಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಮುಗಿಸಿ, ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Jul 20, 2022 | 10:59 PM

Share

ಬೆಂಗಳೂರು: ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿ ಕೆರೆ ಒತ್ತುವರಿ ತೆರವು ವಿಳಂಬಕ್ಕೆ ಹೈಕೋರ್ಟ್(High Court) ಅಸಮಾಧಾನ ವ್ಯಕ್ತಪಡಿಸಿದೆ. ಹಾಗೂ ರಾಜ್ಯಸರ್ಕಾರ(Karnataka Government) ಮತ್ತು ಬಿಬಿಎಂಪಿಗೆ(BBMP) ತರಾಟೆಗೆ ತೆಗೆದುಕೊಂಡಿದೆ. ಕಳೆದ 6 ತಿಂಗಳಿನಿಂದ ಒಂದೇ ಒಂದು ಒತ್ತುವರಿ ತೆರವುಗೊಳಿಸಿಲ್ಲ. ಬೆಂಗಳೂರಿನ ಕೆರೆಗಳನ್ನು ಭವಿಷ್ಯದ ಜನರಿಗಾಗಿ ರಕ್ಷಿಸಬೇಕು. ತಹಶೀಲ್ದಾರ್‌ಗಳು ಒತ್ತುವರಿ ತೆರವಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು. ಅಗತ್ಯ ಸಿಬ್ಬಂದಿ, ಪೊಲೀಸ್ ಭದ್ರತೆ ಒದಗಿಸುವಂತೆ ಕೆರೆ ಸುತ್ತಲ ರಸ್ತೆ ಅಗಲೀಕರಣಗೊಳಿಸದಂತೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ

ಕರ್ನಾಟಕ ಹೈಕೋರ್ಟ್ಗೆ(Karnataka High Court) ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ(Supreme Court Collegium) ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ಜಡ್ಜ್ಗಳಿಗೆ ಹೈಕೋರ್ಟ್ ಜಡ್ಜ್ ಹುದ್ದೆಗೆ ಬಡ್ತಿ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಅನಿಲ್ ಭೀಮಸೇನ ಕತ್ತಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ ಭಟ್ ಅಡಿಗ, ತಲಕಾಡು ಗಿರಿಗೌಡ ಶಿವಶಂಕರೇಗೌಡ‌ ಅವರಿಗೆ ಹೈಕೋರ್ಟ್ ಜಡ್ಜ್ ಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕದ ಹೈಕೋರ್ಟ್ ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಸದ್ಯ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದರೇ, ಜಡ್ಜ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

Published On - 10:56 pm, Wed, 20 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?