AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಪಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಕರ್ನಾಟಕ ಹೈಕೋರ್ಟ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 04, 2023 | 4:56 PM

Share

ಬೆಂಗಳೂರು: ಆ್ಯಪ್‌ ಆಧಾರಿತ ಸೇವೆ ಒದಗಿಸುತ್ತಿರುವ ಓಲಾ, ಉಬರ್‌ (Uber, Ola)ಕಂಪನಿಗಳ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಪಡಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ (Karnataka High Court) ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೋಟರ್‌ ವಾಹನ ಅಗ್ರಿಗೇಟರ್ಸ್‌ -2020 ಪ್ರಕಾರ ದರವನ್ನು ಶೇ.50ರಿಂದ ಶೇ.150ರಷ್ಟು ಏರಿಕೆ ಮಾಡಬಹುದು.  ಕೇಂದ್ರ ಸಾರಿಗೆ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ನೇ ಬಂಡವಾಳವಾಗಿಟ್ಟುಕೊಂಡು ಓಲಾ, ಉಬರ್‌ ಕಂಪನಿಗಳು ಪ್ರಯಾಣಿಕರ ಸುಲಿಗೆಗೆ ನಿಂತಿದ್ದವು. ಆದ್ರೆ, ಇದಕ್ಕೆ ರಾಜ್ಯ ಸರ್ಕಾರ ಬ್ರೇಕ್​ ಹಾಕಿ ಶೇ.5ರಷ್ಟು ಮಾತ್ರ ಸೇವಾಶುಲ್ಕ ನಿಗದಿಪಡಿಸಿತ್ತು. ಇದರ ವಿರುದ್ಧ ಓಲಾ, ಉಬರ್‌ ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.

ಇದನ್ನೂ ಓದಿ: ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ 

ಮಾರ್ಗಸೂಚಿಯನ್ನೇ ಬಂಡವಾಳ ಮಾಡಿಕೊಂಡು ವಸೂಲಿ

ಕೇಂದ್ರ ಸರ್ಕಾರದ ಮೋಟರ್‌ ವಾಹನ ಅಗ್ರಿಗೇಟರ್ಸ್‌ ಮಾರ್ಗಸೂಚಿ-2020’ರಂತೆ ಅಗ್ರಿಗೇಟರ್ಸ್‌ಗಳಿಗೆ ಶೇ.50 ರಿಂದ ಶೇ.150ರಷ್ಟು ದರ ಏರಿಳಿಕೆ ಮಾಡುವ ಅವಕಾಶವಿದೆ. ಇದನ್ನೇ ಮುಂದಿಟ್ಟುಕೊಂಡಿರುವ ಓಲಾ, ಉಬರ್‌ ಸೇರಿದಂತೆ ಆಗ್ರಿಗೇಟರ್ಸ್‌ ಆ್ಯಪ್‌ಗಳು ಆಟೋ ರಿಕ್ಷಾ, ಕಾರುಗಳ ದರವನ್ನು ಸಾಕಷ್ಟುಏರಿಕೆ ಮಾಡಿ ಪ್ರಯಾಣಿಕರಿಂದ ಹೆಚ್ಚಿನ ದರವನ್ನು ಪಡೆಯುತ್ತಿದ್ದವು. ರಾಜ್ಯದಲ್ಲಿ ‘ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ನಿಯಮ-2016’ರ ಕಾಯ್ದೆಯಡಿ ಈ ಆ್ಯಪ್‌ಗಳು ಅನುಮತಿ ಪಡೆದಿದ್ದರೂ, ಕೇಂದ್ರದ ನೂತನ ಮಾರ್ಗಸೂಚಿ ತೋರಿಸಿ ಪ್ರಯಾಣಿಕರ ಸುಲಿಗೆ ಮಾಡುತ್ತಿದ್ದವು.

ಓಲಾ,ಊಬರ್‌ ದರ ಏರಿಕೆಗೆ ಸರ್ಕಾರ ಬ್ರೇಕ್

ಆಟೋ ಸೇವೆ ನೀಡುತ್ತಿದ್ದ ಓಲಾ, ಉಬರ್‌ ಕಂಪನಿಗಳು 2 ಕಿ. ಮೀ. ಗೆ ಪ್ರಯಾಣಿಕರಿಂದ ಕನಿಷ್ಠ 100 ರೂ. ದರ ವಸೂಲಿ ಮಾಡುತ್ತಿದ್ದವು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪರಿಣಾಮ, ಸಾರಿಗೆ ಇಲಾಖೆಯು ಓಲಾ, ಊಬರ್‌ ಕಂಪನಿಗಳ ಆಟೋ ಸೇವೆ ಸ್ಥಗಿತಕ್ಕೆ ಆದೇಶಿಸಿತು. ಪ್ರಕರಣವು ಹೈಕೋರ್ಟ್‌ ಮೆಟ್ಟಿಲೇರಿತು. ಕಂಪನಿಗಳೊಂದಿಗೆ ಚರ್ಚಿಸಿ ದರ ನಿಗದಿ ಮಾಡುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಸಾರಿಗೆ ಇಲಾಖೆ ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿತ್ತು. ಕನಿಷ್ಠ ದರ ​ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿತ್ತು.

ಇದನ್ನೂ ಓದಿ: ಟಿವಿ9 ರಿಯಾಲಿಟಿ ಚೆಕ್ ನಲ್ಲಿ ಬಯಲಾಯ್ತು ಸರ್ಕಾರದ ವೈಫಲ್ಯ: ಓಲಾ, ಊಬರ್​ಗೆ ನೋಟಿಸ್ ನೀಡಿದ ನಂತರವೂ ದರ ದುಪ್ಪಟ್ಟು ವಸೂಲಿ!

ಸರ್ಕಾರದ ಆದೇಶ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಓಲಾ, ಊಬರ್‌

ಆಟೋ ರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಓಲಾ ಹಾಗೂ ಉಬರ್‌ ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಇದರಲ್ಲಿ ರಾಜ್ಯ ಸರ್ಕಾರ ಮೂಗು ತೂರಿಸುತ್ತಿದೆ, ಹಾಗೇ ಕೇಂದ್ರದ ಸಾರಿಗೆ ಇಲಾಖೆಯ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎನ್ನುವುದು ಓಲಾ, ಊಬರ್​ನ ವಾದಗಿದೆ. ಇದೀಗ ಇದಕ್ಕೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರದ ಶೇ. 5ರಷ್ಟು ಸೇವಾಶುಲ್ಕ ನಿಗದಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

Published On - 4:31 pm, Wed, 4 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ