AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆ ಅಬುಧಾಬಿಗೆ ತೆರಳಲು ಡಾ.B.R.ಶೆಟ್ಟಿಗೆ ಹೈಕೋರ್ಟ್ ಅನುಮತಿ

ಬ್ಯಾಂಕುಗಳ‌ ಸಾಲ ವಸೂಲಾತಿ ಪ್ರಕ್ರಿಯೆ ಬಾಕಿ ಹಿನ್ನೆಲೆ ಡಾ.B.R.ಶೆಟ್ಟಿ ಅವರಿಗೆ ವಿದೇಶಕ್ಕೆ ತೆರಳದಂತೆ ಇಮ್ಮಿಗ್ರೇಷನ್ ಅಧಿಕಾರಿಗಳು ನಿರ್ಬಂಧಿಸಿದ್ದರು. ಸದ್ಯ ಈಗ ಹೈಕೋರ್ಟ್ ಡಾ.B.R.ಶೆಟ್ಟಿಗೆ ಅಬುಧಾಬಿಗೆ ತೆರಳಲು ಅನುಮತಿ ನೀಡಿದೆ. ಬೇರೆ ಪ್ರಕರಣಗಳಿಲ್ಲದಿದ್ದರೆ ವಿದೇಶ ಪ್ರಯಾಣಕ್ಕೆ ಅನುಮತಿಸಬಹುದು ಎಂದು ನ್ಯಾ.ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಚಿಕಿತ್ಸೆಗೆ ಅಬುಧಾಬಿಗೆ ತೆರಳಲು ಡಾ.B.R.ಶೆಟ್ಟಿಗೆ ಹೈಕೋರ್ಟ್ ಅನುಮತಿ
ಡಾ.B.R.ಶೆಟ್ಟಿ
TV9 Web
| Edited By: |

Updated on:Feb 09, 2024 | 11:52 AM

Share

ಬೆಂಗಳೂರು, ಫೆ.09: ಚಿಕಿತ್ಸೆಗೆ ಅಬುಧಾಬಿಗೆ ತೆರಳಲು ಡಾ.B.R.ಶೆಟ್ಟಿಗೆ ಹೈಕೋರ್ಟ್ ಅನುಮತಿ ನೀಡಿದೆ. ಬ್ಯಾಂಕುಗಳ‌ ಸಾಲ ವಸೂಲಾತಿ ಪ್ರಕ್ರಿಯೆ ಬಾಕಿ ಹಿನ್ನೆಲೆ ಡಾ.B.R.ಶೆಟ್ಟಿ ಅವರಿಗೆ ನಿರ್ಬಂಧವಿತ್ತು. ಬ್ಯಾಂಕುಗಳ ಮನವಿ ಮೇರೆಗೆ ಲುಕ್ ಔಟ್ ಸರ್ಕುಲರ್ ಹೊರಡಿಸಲಾಗಿತ್ತು. ವಿದೇಶಕ್ಕೆ ತೆರಳದಂತೆ ಇಮ್ಮಿಗ್ರೇಷನ್ ಅಧಿಕಾರಿಗಳು ನಿರ್ಬಂಧಿಸಿದ್ದರು. ಸದ್ಯ ಈಗ ಹೈಕೋರ್ಟ್ ಡಾ.B.R.ಶೆಟ್ಟಿಗೆ ಅಬುಧಾಬಿಗೆ ತೆರಳಲು ಅನುಮತಿ ನೀಡಿದೆ.

ಶೆಟ್ಟಿ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ, ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದು ಕೋರ್ಟ್​ಗಳ ಆದೇಶದಂತೆ ಸಾಲ ವಸೂಲಾತಿ ಪ್ರಕ್ರಿಯೆ ಜಾರಿಯಲ್ಲಿದೆ. ಡಾ.ಬಿ.ಆರ್.ಶೆಟ್ಟಿ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್​​ಗಳಿಲ್ಲ. ಭಾರತೀಯ ಪ್ರಜೆ, 80 ವರ್ಷ ವಯಸ್ಸಾಗಿರುವುದನ್ನು ಪರಿಗಣಿಸಬೇಕು ಎಂದು ವಾದ ಮಂಡಿಸಿದ್ದಾರೆ. ವಾದ ಪರಿಗಣಿಸಿ ಹೈಕೋರ್ಟ್ ಲುಕ್ ಔಟ್ ಸರ್ಕುಲರ್ ಅಮಾನತ್ತಿನಲ್ಲಿಟ್ಟಿದೆ. ಡಾ.ಬಿ.ಆರ್.ಶೆಟ್ಟಿ ಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಬೇಕು. ಪ್ರಪಂಚದ ಯಾವುದೇ ಭಾಗದ ಆಸ್ತಿಗಳ ಪರಭಾರೆ ಮಾಡಬಾರದು. 1 ಕೋಟಿ ರೂ. ಮೊತ್ತದ ಶ್ಯೂರಿಟಿ ಒದಗಿಸಬೇಕು. ಬೇರೆ ಪ್ರಕರಣಗಳಿಲ್ಲದಿದ್ದರೆ ವಿದೇಶ ಪ್ರಯಾಣಕ್ಕೆ ಅನುಮತಿಸಬಹುದು ಎಂದು ನ್ಯಾ.ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಎಲ್ಒಸಿ ನೀಡುವ ಅಧಿಕಾರ ಹಸ್ತಾಂತರಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಇದನ್ನು ಓದಿ: BR Shetty: ಸಾವಿರ ಕೋಟಿ ರೂ ಬಜೆಟ್​ನಲ್ಲಿ ಮಹಾಭಾರತ ಸಿನಿಮಾ ನಿರ್ಮಿಸಲು ಹೊರಟಿದ್ದ ಈ ಕನ್ನಡಿಗನಿಗೆ ಈಗ ದಿಕ್ಕುತೋಚದ ಸ್ಥಿತಿ

ಏನಿದು ಪ್ರಕರಣ?

ಉದ್ಯಮಿ B.R.ಶೆಟ್ಟಿ 2 ಬ್ಯಾಂಕ್​ಗಳಿಂದ ಸುಮಾರು 2,800 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಪಡೆದಿದ್ದ ಸಾಲ ತೀರಿಸದ ಕಾರಣಕ್ಕೆ ಉದ್ಯಮಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ಹೀಗಾಗಿ, ಅಬುದಾಭಿಗೆ ಪ್ರಯಾಣಿಸಲು ಶೆಟ್ಟಿಗೆ ಅನುಮತಿ ನೀಡಿರಲಿಲ್ಲ.

ಇದನ್ನು ಪ್ರಶ್ನಿಸಿ B.R.ಶೆಟ್ಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ, ಭದ್ರತೆ ಇಲ್ಲದೆ ಭಾರಿ ಸಾಲ ವಿತರಣೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ದೇಶದ ನಾಗರಿಕರಿಗೆ ಪ್ರಯಾಣಿಸುವ ಹಕ್ಕಿರುವುದು ನಿಜ. ಆದರೆ ಪಡೆದ ಸಾಲ ತೀರಿಸುವುದು ಅವರ ಆದ್ಯ ಕರ್ತವ್ಯ. ಸಾಲ ನೀಡುವುದಕ್ಕೂ ಮುನ್ನ ಭದ್ರತೆ ಖಾತ್ರಿಗೊಳಿಸಬೇಕು. RBI ಈ ಬಗ್ಗೆ ಅಗತ್ಯ ನಿಯಮಾವಳಿ ರೂಪಿಸಬೇಕು ಎಂದು ಹೈಕೋರ್ಟ್ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಈ ಹಿಂದೆ ಅಭಿಪ್ರಾಯ ವ್ಯಕ್ತಪಡಿಸಿದರು.

B.R.ಶೆಟ್ಟಿಯ ಎನ್‌ಎಂಸಿ ಹೆಲ್ತ್‌ಕೇರ್ ಕಂಪನಿಗೆ ಅಬುಧಾಬಿಯ ಕಮರ್ಷಿಯಲ್ ಬ್ಯಾಂಕ್ 7,500 ಕೋಟಿ ರೂ.ಗೂ ಹೆಚ್ಚು ಸಾಲ ನೀಡಿತ್ತು. ಆದ್ರೆ ಬಿ.ಆರ್.ಶೆಟ್ಟಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ 2020ರ ಏ.15ರಂದು ಬಿ.ಆರ್.ಶೆಟ್ಟಿ ಸೇರಿ ಇತರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಆಗ ಅಬುಧಾಬಿಯ ಕಮರ್ಷಿಯಲ್ ಬ್ಯಾಂಕ್ ಇಂಗ್ಲೆಂಡ್ ನ್ಯಾಯಾಲಯದ ಮೊರೆ ಹೋಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:49 am, Fri, 9 February 24

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?