AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಡಿಪಿಆರ್‌ ಇಲಾಖೆಯಲ್ಲಿ 269 ಕೋಟಿ ರೂ. ನಷ್ಟ: ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಪಡಿಸಿದ ಹೈಕೋರ್ಟ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲಾಖೆಗೆ 269 ಕೋಟಿ ರೂ. ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್​ ತಡೆ ನೀಡಿದೆ.

ಆರ್‌ಡಿಪಿಆರ್‌ ಇಲಾಖೆಯಲ್ಲಿ 269 ಕೋಟಿ ರೂ. ನಷ್ಟ: ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಪಡಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Sep 13, 2023 | 2:58 PM

Share

ಬೆಂಗಳೂರು ಸೆ.13: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಇಲಾಖೆಗೆ 269 ಕೋಟಿ ರೂ. ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ (IAS)​ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್​ (High Court) ತಡೆ ನೀಡಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಅಮಿತಾ ಪ್ರಸಾದ್, ಡಾ.ಇ.ವಿ.ರಮಣರೆಡ್ಡಿ ಅವರ ವಿರುದ್ಧ ಇಲಾಖೆಯ ಹಣವನ್ನು ದುರ್ವಿನಿಯೋಗ ಮಾಡಿಕೊಂಡ  ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಗೆ ಸರ್ಕಾರದ ಪೂರ್ವಾನುಮತಿ ಇಲ್ಲದ ಹಿನ್ನೆಲೆಯಲ್ಲಿ ಹೈಕೋರ್ಟ್​​ ಕೇಸ್ ರದ್ದು ಮಾಡಿದೆ.

ಪ್ರಕರಣದ ಹಿನ್ನೆಲೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಈ ಮೂವರು ಐಎಎಸ್​ ಅಧಿಕಾರಿಗಳು ಅಧಿಕಾರಿಗಳು, 2009-10ರಿಂದ 2014- 15ರ ನಡುವೆ ಆರ್‌ಡಿಪಿಆರ್‌ ಇಲಾಖೆಯ ಹಣವನ್ನು ಬ್ಯಾಂಕ್​​ನಲ್ಲಿ ಠೇವಣಿ(FD) ಮಾಡದೇ ಒಪ್ಪಂದದ ನಿಯಮಗಳಿಗೆ ವಿರುದ್ಧವಾಗಿ ದುರ್ವಿನಿಯೋಗ ಮಾಡಿಕೊಂಡಿದ್ದಾರೆ ಎಂದು ಕೋಲಾರದ ಮಾಸ್ತಿ ಲೇಔಟ್‌ನ ಸಾಮಾಜಿಕ ಕಾರ್ಯಕರ್ತ ಎಸ್.ನಾರಾಯಣಸ್ವಾಮಿ ದೂರು ನೀಡಿದ್ದರು.

ಇದನ್ನೂ ಓದಿ: ವಿದೇಶ ಪ್ರವಾಸ ಖರ್ಚನ್ನು ಶಾಸಕರ ಭತ್ಯೆಯಿಂದ ಕಡಿತಗೊಳಿಸಲು ಆದೇಶ, ಇದನ್ನು ಪ್ರಶ್ನಿಸಿದ ಹೈಕೋರ್ಟ್​ ಮೊರೆ ಹೊಗಿದ್ದ ಮಾಜಿ ಶಾಸಕರಿಗೆ ಹಿನ್ನೆಡೆ

ಇವರ ಜೊತೆ ಬ್ಯಾಂಕ್ ಮ್ಯಾನೇಜರ್ ಕೂಡಾ ಒಪ್ಪಂದದ ನಿಯಮಗಳಿಗೆ ವಿರುದ್ಧವಾಗಿ 98 ಖಾತೆಗಳನ್ನು ತೆರೆದಿದ್ದಾರೆ. ಈ ಮೂಲಕ 269 ಕೋಟಿ ರೂ. ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣದ ತನಿಖೆಗೆ ಎಸಿಬಿಗೆ ನಿರ್ದೇಶನ ನೀಡಿದ್ದರು.

ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆ ಕೋರಿ ನಿವೃತ್ತ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತು ಹಾಲಿ ಐಎಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ