AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗ್​ಮನೆ ಡೆವಲಪರ್​ನಿಂದ ರಾಜಕಾಲುವೆ ಒತ್ತುವರಿ ವಿಚಾರ: ಲೋಕಾಯುಕ್ತ ಮಧ್ಯಪ್ರವೇಶಕ್ಕೆ ಹೈಕೋರ್ಟ್ ಅಸಮಾಧಾನ

ಬಾಗ್​ಮನೆ ಡೆವಲಪರ್​ನಿಂದ ಒತ್ತುವರಿಯಾಗಿದ್ದ ರಾಜಕಾಲುವೆ ಪ್ರದೇಶವನ್ನು ಬಿಬಿಎಂಪಿ ತೆರವು ಮಾಡುತ್ತಿದ್ದು, ಇದಕ್ಕೆ ಲೋಕಾಯುಕ್ತ ಮಧ್ಯಪ್ರವೇಶಿಸಿದೆ.

ಬಾಗ್​ಮನೆ ಡೆವಲಪರ್​ನಿಂದ ರಾಜಕಾಲುವೆ ಒತ್ತುವರಿ ವಿಚಾರ: ಲೋಕಾಯುಕ್ತ ಮಧ್ಯಪ್ರವೇಶಕ್ಕೆ ಹೈಕೋರ್ಟ್ ಅಸಮಾಧಾನ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Edited By: |

Updated on:Sep 28, 2022 | 5:10 PM

Share

ಬೆಂಗಳೂರು: ಬಾಗ್​ಮನೆ ಡೆವಲಪರ್​ನಿಂದ ಒತ್ತುವರಿಯಾಗಿದ್ದ ರಾಜಕಾಲುವೆ (Rajkaluve) ಪ್ರದೇಶವನ್ನು  ಬಿಬಿಎಂಪಿ (BBMP) ತೆರವು ಮಾಡುತ್ತಿದ್ದು, ಇದಕ್ಕೆ ಲೋಕಾಯುಕ್ತ (Lokayukta) ಮಧ್ಯಪ್ರವೇಶಿಸಿದೆ. ಆದರೆ ಲೋಕಾಯುಕ್ತ ಮಧ್ಯಪ್ರವೇಶಕ್ಕೆ ಹೈಕೋರ್ಟ್ (Highcourt) ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಮಹಾನಗರದಲ್ಲಿ ಕಳೆದ 15 ದಿನಗಳಿಂದ ರಾಜಕಾಲುವೆ ಮತ್ತು ಕರೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಗಿದ್ದ ಕಟ್ಟಡಗಳನ್ನು ಬಿಬಿಎಂಪಿ ತೆರವು ಮಾಡುತ್ತಿದೆ. ಹಾಗೇ ಮಹಾದೇವಪುರ ನಗರದಲ್ಲಿರುವ ಬಾಗ್​ಮನೆ ಡೆವಲಪರ್​ನಿಂದ ರಾಜಕಾಲುವೆ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಹೈಕೋರ್ಟ್​ ಬಿಬಿಎಂಪಿಗೆ ಸೂಚನೆ ನೀಡಿತ್ತು. ಸೂಚನೆ ಮೇರೆಗೆ ಬಿಬಿಎಂಪಿ ತೆರವು ಕಾರ್ಯ ಕೈಗೊಂಡಾಗ, ಬಿಲ್ಡರ್ ಭಾನುವಾರದಂದು ಲೋಕಾಯುಕ್ತದ ಮೊರೆ ಹೋಗಿದ್ದರು.

ನಂತರ ಲೋಕಾಯುಕ್ತ ಭಾನುವಾರ ಒತ್ತುವರಿ ತೆರವಿಗೆ ತಡೆ ನೀಡಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್ ರಾಜಕಾಲುವೆ ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶಿಸಿದೆ. ಈ ಮಧ್ಯೆ ಲೋಕಾಯುಕ್ತ ಕಾಯ್ದೆ ಮೀರಿ ಮಧ್ಯ ಪ್ರವೇಶಿಸಿದ್ದು ಏಕೆ ? ಲೋಕಾಯುಕ್ತ ಕಾಯ್ದೆಯಡಿ ತಡೆ ನೀಡುವ ಅಧಿಕಾರವಿದೆಯೇ? ಲೋಕಾಯುಕ್ತ ಕಚೇರಿಯೇ ಒತ್ತುವರಿ ತೆರವಿಗೆ ತಡೆ ನೀಡಬಹುದೇ? ಜನ ಕೋರ್ಟ್ ಬದಲು ಲೋಕಾಯುಕ್ತಕ್ಕೆ ಹೋಗಬಹುದಲ್ಲವೇ? ವ್ಯಾಪ್ತಿ ಮೀರಿದ ಆದೇಶ ನೀಡಲು ನಾವು ಅವಕಾಶ ನೀಡುವುದಿಲ್ಲ. ಲೋಕಾಯುಕ್ತದಿಂದ ಸಮಾನಾಂತರ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಲೋಕಾಯುಕ್ತದ ಈ ನಿರ್ಧಾರವನ್ನು ಪ್ರಶ್ನಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ (ಎಸ್‌ಪಿಎಸ್‌) ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ರಿಜಿಸ್ಟ್ರಾರ್‌, ಬಿಬಿಎಂಪಿ ಆಯುಕ್ತ, ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ಮತ್ತು ಬಾಗ್ಮನೆ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ಬುಧವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯಕ್ಕೆ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರ ಪರ ವಕೀಲ ಪರ ಗೌತಮ್‌ ರಮೇಶ್‌ ಕೋರಿದರು. ನ್ಯಾಯಪೀಠವು ಸೆ.26ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ಹೀಗಾಗಿ ಅರ್ಜಿ ವಿಚಾರಣೆ ಸತತ 2 ದಿನಗಳ ಕಾಲ ನಡೆದು ಇಂದು ತೀರ್ಪು ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:00 pm, Wed, 28 September 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ