Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಬೆಂಗಳೂರು ನಗರದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ಗಳ ಪೈಕಿ ಕೆಲವು ಬಸ್​ಗಳಲ್ಲಿ ಪ್ರಯಾಣಿಕರಿಗೆ ಮುಂದಿನ ನಿಲ್ದಾಣದ ಹೆಸರು ಸೂಚಿಸುವ ಆಡಿಯೋ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಸದ್ಯ, ಆಡಿಯೋ ಪ್ರಕಟಣೆ ನಿಲ್ಲಿಸಿದ ಹಿನ್ನೆಲೆ ನಿವಾಸಿಯೊಬ್ಬರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಏಪ್ರಿಲ್ 15 ರ ಒಳಗಾಗಿ ಧ್ವನಿ ಪ್ರಕಟಣೆ ವ್ಯವಸ್ಥೆ ಅಳವಡಿಸುವಂತೆ ನಿರ್ದೇಶನ ನೀಡಿದೆ.

ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು
ಏಪ್ರಿಲ್ 15ರ ಒಳಗೆ BMTC ಬಸ್​​ಗಳಲ್ಲಿ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ನಿರ್ದೇಶನ
Follow us
TV9 Web
| Updated By: Rakesh Nayak Manchi

Updated on: Dec 21, 2023 | 11:09 AM

ಬೆಂಗಳೂರು, ಡಿ.21: ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ (BMTC) ಬಸ್​ಗಳಲ್ಲಿ ಮುಂದೆ ಬರುವ ನಿಲ್ದಾಣಗಳ ಹೆಸರು ಪ್ರಕಟಿಸುವ ಆಡಿಯೋ ಅಳವಡಿಕೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಏಪ್ರಿಲ್ 15ರ ಗಡುವು ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಕೆಲವು ಬಸ್​ಗಳಲ್ಲಿ ಆಡಿಯೋ ಪ್ರಕಟಣೆಗಳನ್ನು ಅಳವಡಿಸಲಾಗಿತ್ತು. ಅದನ್ನು ಈಗ ನಿಲ್ಲಿಸಲಾಗಿದೆ ಎಂದು ಎನ್‌ಜಿಒ ಶ್ರೇಯಸ್ ಗ್ಲೋಬಲ್ ಟ್ರಸ್ಟ್ ನಡೆಸುತ್ತಿರುವ ವಕೀಲ ಮತ್ತು ದೃಷ್ಟಿಹೀನ ವ್ಯಕ್ತಿ ಶ್ರೇಯಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಕೈಗೆತ್ತಿಕೊಂಡಿತು.

ಇದನ್ನೂ ಓದಿ: ಟಿವಿ9 ವರದಿ ಇಂಪ್ಯಾಕ್ಟ್: ಬಿಎಂಟಿಸಿಗೆ ಬಂತು 100 ಹೊಸ ಎಲೆಕ್ಟ್ರಿಕ್ ಬಸ್​, ಇವುಗಳ ವಿಶೇಷತೆ ತಿಳಿಯಿರಿ

ವಿಚಾರಣೆ ವೇಳೆ ಬಿಎಂಟಿಸಿ ಪರ ವಾದ ಮಂಡಿಸಿದ ವಕೀಲರು, ಮುಂಬರುವ ನಿಲ್ದಾಣಗಳ ಬಗ್ಗೆ ಜನರಿಗೆ ತಿಳಿಸಲು ಶೇಕಡಾ 58 ರಷ್ಟು ಬಸ್‌ಗಳಲ್ಲಿ ಆಡಿಯೋ ವ್ಯವಸ್ಥೆ ಅಳವಡಿಸಲಾಗಿದ್ದು, 2,562 ವಾಹನಗಳಿಗೆ ಅಳವಡಿಕೆ ಮಾಡಿಲ್ಲ. ಮುಂದಿನ ಆರು ತಿಂಗಳಲ್ಲಿ 1,141 ಬಸ್‌ಗಳಲ್ಲಿ ಆಡಿಯೋ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ವಾದ ಆಲಿಸಿದ ವಿಭಾಗೀಯ ಪೀಠ, 2024ರ ಏಪ್ರಿಲ್ 15 ರವರೆಗೆ ಬಸ್‌ಗಳಲ್ಲಿ ಆಡಿಯೋ ಅಳವಡಿಕೆ ಮಾಡುವಂತೆ ನಿರ್ದೇಶನ ನೀಡಿತು. ಅಳವಡಿಕೆ ಮಾಡದೇ ಇದ್ದಲ್ಲದೆ ಯಾವುದೇ ಕ್ಷಮೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿ ಏಪ್ರಿಲ್ 18ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​