AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಬೆಂಗಳೂರು ನಗರದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ಗಳ ಪೈಕಿ ಕೆಲವು ಬಸ್​ಗಳಲ್ಲಿ ಪ್ರಯಾಣಿಕರಿಗೆ ಮುಂದಿನ ನಿಲ್ದಾಣದ ಹೆಸರು ಸೂಚಿಸುವ ಆಡಿಯೋ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಸದ್ಯ, ಆಡಿಯೋ ಪ್ರಕಟಣೆ ನಿಲ್ಲಿಸಿದ ಹಿನ್ನೆಲೆ ನಿವಾಸಿಯೊಬ್ಬರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಏಪ್ರಿಲ್ 15 ರ ಒಳಗಾಗಿ ಧ್ವನಿ ಪ್ರಕಟಣೆ ವ್ಯವಸ್ಥೆ ಅಳವಡಿಸುವಂತೆ ನಿರ್ದೇಶನ ನೀಡಿದೆ.

ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು
ಏಪ್ರಿಲ್ 15ರ ಒಳಗೆ BMTC ಬಸ್​​ಗಳಲ್ಲಿ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ನಿರ್ದೇಶನ
TV9 Web
| Edited By: |

Updated on: Dec 21, 2023 | 11:09 AM

Share

ಬೆಂಗಳೂರು, ಡಿ.21: ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ (BMTC) ಬಸ್​ಗಳಲ್ಲಿ ಮುಂದೆ ಬರುವ ನಿಲ್ದಾಣಗಳ ಹೆಸರು ಪ್ರಕಟಿಸುವ ಆಡಿಯೋ ಅಳವಡಿಕೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಏಪ್ರಿಲ್ 15ರ ಗಡುವು ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಕೆಲವು ಬಸ್​ಗಳಲ್ಲಿ ಆಡಿಯೋ ಪ್ರಕಟಣೆಗಳನ್ನು ಅಳವಡಿಸಲಾಗಿತ್ತು. ಅದನ್ನು ಈಗ ನಿಲ್ಲಿಸಲಾಗಿದೆ ಎಂದು ಎನ್‌ಜಿಒ ಶ್ರೇಯಸ್ ಗ್ಲೋಬಲ್ ಟ್ರಸ್ಟ್ ನಡೆಸುತ್ತಿರುವ ವಕೀಲ ಮತ್ತು ದೃಷ್ಟಿಹೀನ ವ್ಯಕ್ತಿ ಶ್ರೇಯಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಕೈಗೆತ್ತಿಕೊಂಡಿತು.

ಇದನ್ನೂ ಓದಿ: ಟಿವಿ9 ವರದಿ ಇಂಪ್ಯಾಕ್ಟ್: ಬಿಎಂಟಿಸಿಗೆ ಬಂತು 100 ಹೊಸ ಎಲೆಕ್ಟ್ರಿಕ್ ಬಸ್​, ಇವುಗಳ ವಿಶೇಷತೆ ತಿಳಿಯಿರಿ

ವಿಚಾರಣೆ ವೇಳೆ ಬಿಎಂಟಿಸಿ ಪರ ವಾದ ಮಂಡಿಸಿದ ವಕೀಲರು, ಮುಂಬರುವ ನಿಲ್ದಾಣಗಳ ಬಗ್ಗೆ ಜನರಿಗೆ ತಿಳಿಸಲು ಶೇಕಡಾ 58 ರಷ್ಟು ಬಸ್‌ಗಳಲ್ಲಿ ಆಡಿಯೋ ವ್ಯವಸ್ಥೆ ಅಳವಡಿಸಲಾಗಿದ್ದು, 2,562 ವಾಹನಗಳಿಗೆ ಅಳವಡಿಕೆ ಮಾಡಿಲ್ಲ. ಮುಂದಿನ ಆರು ತಿಂಗಳಲ್ಲಿ 1,141 ಬಸ್‌ಗಳಲ್ಲಿ ಆಡಿಯೋ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ವಾದ ಆಲಿಸಿದ ವಿಭಾಗೀಯ ಪೀಠ, 2024ರ ಏಪ್ರಿಲ್ 15 ರವರೆಗೆ ಬಸ್‌ಗಳಲ್ಲಿ ಆಡಿಯೋ ಅಳವಡಿಕೆ ಮಾಡುವಂತೆ ನಿರ್ದೇಶನ ನೀಡಿತು. ಅಳವಡಿಕೆ ಮಾಡದೇ ಇದ್ದಲ್ಲದೆ ಯಾವುದೇ ಕ್ಷಮೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿ ಏಪ್ರಿಲ್ 18ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ