AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್​​ ಕೊಲೆಗೆ ಯತ್ನ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ಜೈಲಿನ ವಾರ್ಡರ್ ಮೇಲೆ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ತಿಂಗಳ ಹಿಂದೆ ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ಕೆಲ ಜೈಲು ಬಂಧಿಗಳ ಶಿಫ್ಟ್​ ಮಾಡಲಾಗಿತ್ತು. ಈ ವೇಳೆ ಮಂಜುನಾಥ್ ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದರು. ಅಲ್ಲದೆ, ಹೆಚ್ಚುವರಿ ವಸ್ತು ತೆಗೆದುಕೊಂಡು ಹೋಗಲು ಅವಕಾಶ ನೀಡಿರಲಿಲ್ಲ. ಇದೇ ಸಿಟ್ಟಿಗೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್​​ ಕೊಲೆಗೆ ಯತ್ನ
ವಾರ್ಡರ್​​ ಕೊಲೆಗೆ ಯತ್ನ Image Credit source: Tv9 Kannada
ರಾಮು, ಆನೇಕಲ್​
| Edited By: |

Updated on:Sep 04, 2026 | 2:04 PM

Share

ಆನೇಕಲ್​​, ಸೆಪ್ಟೆಂಬರ್​​ 04: ಕೊಲೆ ಕೇಸ್​​ ಆರೋಪಿಗಳು ಜೈಲಿನ ವಾರ್ಡರ್​​ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಮಂಗಳೂರಿನ ಭಜರಂಗದಳ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಕೇಸ್​ನ ಆರೋಪಿಗಳು ವಾರ್ಡರ್ ಮಂಜುನಾಥ್​ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು, ಪರಪ್ಪನ ಅಗ್ರಹಾರ ಜೈಲಿನ ಶಿಕ್ಷಾ ಬಂಧಿ ವಿಭಾಗದಲ್ಲಿ ಸೆ.2ರಂದು ಬೆಳಗ್ಗೆ 11.30ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ಪರಪ್ಪನ ಅಗ್ರಹಾರ ಜೈಲು ಮತ್ತೆ ಸುದ್ದಿಯಾಗಿದೆ.

ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ವಿಷಯ ನಿರ್ವಾಹಕರಾಗಿ ಸೇವೆ ಸಂಬಂಧ ವೀಕ್ಷಕ‌ ಮಂಜುನಾಥ್ ಶಿಕ್ಷಾ ಬಂಧಿ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸುಹಾಸ್ ಕೊಲೆ ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್ ಮತ್ತು ಕಲಂದರ್ ಶಫಿ ವಾರ್ಡರ್​​ರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ. ಜೊತೆಗೆ ಏಕಾಏಕಿ ಮಂಜುನಾಥ್​​ ಅವರನ್ನು ಬ್ಯಾರಕ್​ನ ಕೊಠಡಿ ಸಂಖ್ಯೆ 4ಕ್ಕೆ ಎಳೆದೊಯ್ದು ಆರೋಪಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆ ಯತ್ನ ನಡೆಸಿದ್ದಾರೆ. ಕೂಡಲೇ ಅಲರ್ಟ್​​ ಆದ ಕರ್ತವ್ಯನಿರತ ಇನ್ನುಳಿದ ಅಧಿಕಾರಿ, ಸಿಬ್ಬಂದಿ ಮಂಜುನಾಥ್​​ ಅವರ ರಕ್ಷಣೆ ಧಾವಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಲಾಲ್‌ಬಾಗ್‌ ಶಿಲಾ ರಚನೆ ಕುರಿತ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ: ಹೆಬ್ಬಾಳ ಕೆರೆಗೂ ಟನಲ್‌ ರೋಡ್‌ ಟೆನ್ಷನ್

ತಿಂಗಳ ಹಿಂದೆ ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ಕೆಲ ಜೈಲು ಬಂಧಿಗಳ ಶಿಫ್ಟ್​ ಮಾಡಲಾಗಿತ್ತು. ಈ ವೇಳೆ ಮಂಜುನಾಥ್ ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದರು. ಅಲ್ಲದೆ, ಹೆಚ್ಚುವರಿ ವಸ್ತು ತೆಗೆದುಕೊಂಡು ಹೋಗಲು ಅವಕಾಶ ನೀಡಿರಲಿಲ್ಲ. ಇದೇ ವಿಚಾರವಾಗಿ ಜೈಲಿನಲ್ಲಿ ಆರೋಪಿಗಳ ನಡುವೆ ವಾಗ್ವಾದ ಆಗಿತ್ತು. ಅಕ್ರಮ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಗೆ ವಾರ್ಡರ್​ ತಿಳಿಸುತ್ತಿದ್ದ ಎಂಬ ಕಾರಣಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:04 pm, Fri, 4 September 26

Follow Us
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ
ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ
ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ
ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ