AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್​ ಮಾಡಿ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ಈ ಕಾಮುಕ ಒಂಟಿ ಯುವತಿಯರು ಕಂಡ್ರೆ ಸಾಕು. ಅವರನ್ನು ಹಿಂಬಾಲಿಸಿ ಯಾರು ಇಲ್ಲದ ಸಮಯ ನೋಡಿಕೊಂಡು ಅವರನ್ನು ಅಪ್ಪಿ ಅಸಹ್ಯವಾಗಿ ವರ್ತಿಸುತ್ತಿದ್ದ. ಸದ್ಯ ಯುವತಿಯ ದೂರಿನ ಮೇರೆಗೆ ಕೇಸ್​ ದಾಖಲಿಸಿಕೊಂಡಿದ್ದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೀಚಕನ ಮತ್ತಷ್ಟು ನೀಚ ಕೃತ್ಯಗಳು ಬೆಳಕಿಗೆ ಬಂದಿವೆ.

ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್​ ಮಾಡಿ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್
ಅಯ್ಯಪ್ಪ
TV9 Web
| Edited By: |

Updated on: Oct 01, 2023 | 9:14 AM

Share

ಬೆಂಗಳೂರು, ಅ.01: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್ ಮಾಡಿ ಯುವತಿಯರ ಖಾಸಗಿ ಅಂಗ ಮುಟ್ಟಿ ಎಸ್ಕೇಪ್ ಆಗುತ್ತಿದ್ದ ಕೀಚಕನನ್ನು ಹೈಗ್ರೌಂಡ್ಸ್ ಪೊಲೀಸರು (High Ground Police) ಬಂಧಿಸಿದ್ದಾರೆ. ವೈಯ್ಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ಈ ಕಾಮುಕ ಒಂಟಿ ಯುವತಿಯರು ಕಂಡ್ರೆ ಸಾಕು. ಅವರನ್ನು ಹಿಂಬಾಲಿಸಿ ಯಾರು ಇಲ್ಲದ ಸಮಯ ನೋಡಿಕೊಂಡು ಅವರನ್ನು ಅಪ್ಪಿ ಅಸಹ್ಯವಾಗಿ (Misbehave) ವರ್ತಿಸುತ್ತಿದ್ದ. ಸದ್ಯ ಯುವತಿಯ ದೂರಿನ ಮೇರೆಗೆ ಕೇಸ್​ ದಾಖಲಿಸಿಕೊಂಡಿದ್ದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೀಚಕನ ಮತ್ತಷ್ಟು ನೀಚ ಕೃತ್ಯಗಳು ಬೆಳಕಿಗೆ ಬಂದಿವೆ.

ರಾತ್ರಿ ಊಟ ಮುಗಿಸಿ ವಾಕ್ ಮಾಡುತ್ತಿದ್ದ ಯುವತಿಯನ್ನು ಕಂಡು ಬೈಕ್​ನಲ್ಲಿ ದಿಢೀರನೇ ಪ್ರತ್ಯಕ್ಷವಾಗಿದ್ದ ಕಾಮುಕ ಅಯ್ಯಪ್ಪ, ಯುವತಿಯಿಂದ ಅಣತಿ ದೂರದಲ್ಲಿ ಬೈಕ್ ನಿಲ್ಲಿಸಿದ್ದ. ಬಳಿಕ ಯುವತಿಯನ್ನ ಫಾಲೋ ಮಾಡಿ ಅಸಭ್ಯವಾಗಿ ಮುಟ್ಟಿ ಯುವತಿ ಜೊತೆಗೆ ಕಿರಿಕ್ ತೆಗೆದು ಅಸಭ್ಯವಾಗಿ ವರ್ತಿಸಿದ್ದ. ಕೀಚಕನ ಅಸಭ್ಯ ವರ್ತನೆ ಕಂಡು ಯುವತಿ ಕಿರುಚಾಡಿದ್ದಾರೆ. ಇದರಿಂದ ಗಾಬರಿಗೊಂಡ ಕಾಮುಕ ಯುವತಿ ಬಿಟ್ಟು, ಬಂದು ಬೈಕ್​ನಲ್ಲಿ ಎಸ್ಕೇಪ್ ಆಗಿದ್ದ. ಈ ಘಟನೆ ವಸಂತನಗರದಲ್ಲಿ ನಡೆದಿದ್ದು ಘಟನೆ ಬಗ್ಗೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕೇಸ್ ದಾಖಲಿಸಿಕೊಂಡ ಪೊಲೀಸರು ವೈಯ್ಯಾಲಿ ಕಾವಲ್ ನಿವಾಸಿ ಅಯ್ಯಪ್ಪನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕಾಮುಕನ ಮತ್ತಷ್ಟು ನೀಚ ಕೃತ್ಯಗಳು ಬೆಳಕಿಗೆ ಬಂದಿವೆ. ವರ್ಕ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಯ್ಯಪ್ಪ, ರಿಪೇರಿಗೆ ಬರುವ ಬೈಕ್ ತೆಗೆದುಕೊಂಡು ನಗರದಲ್ಲಿ ಸುತ್ತಾಡುತ್ತಿದ್ದ. ದಿನಕ್ಕೊಂದು ಬೈಕ್​ನಲ್ಲಿ ರೌಂಡ್ಸ್ ಹಾಕುತ್ತಿದ್ದ. ಈ ವೇಳೆ ಒಂಟಿಯಾಗಿ ಯುವತಿಯರು ಕಂಡ್ರೆ ಅವರನ್ನು ತಬ್ಬಿ, ಖಾಸಗಿ ಅಂಗ ಮುಟ್ಟಿ ಎಸ್ಕೇಪ್ ಆಗುತ್ತಿದ್ದ. ಈ ರೀತಿ ಅನೇಕ ಬಾರಿ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿ ಎಸ್ಕೇಪ್ ಆಗಿದ್ದ. ಸದ್ಯ ಕಾಮುಕನನ್ನ ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಅಪಘಾತದಲ್ಲಿ ಇಬ್ಬರು ಬೈಕ್​ ಸವಾರರಿಗೆ ಗಂಭೀರ ಗಾಯ

ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್​ ಸವಾರರಿಗೆ ಗಂಭೀರ ಗಾಯಗಳಾಗಿವೆ. ಓವರ್​ ಟೇಕ್​ ಮಾಡಲು ಹೋಗಿ ಮುಂದೆ ಹೋಗುತ್ತಿದ್ದ ಬೈಕ್​ಗೆ​​ ಆಟೋ ಡಿಕ್ಕಿ ಹೊಡೆದಿದೆ. ಇದರಿಂದ ಅಪಘಾತ ಸಂಭವಿಸಿದ್ದು ಅಪಘಾತ ಮಾಡಿದ ಆಟೋ ಚಾಲಕ ಪರಾರಿಯಾಗಿದ್ದಾನೆ. ಆಟೋ ಡಿಕ್ಕಿಯಿಂದಾಗಿ ಇಬ್ಬರು ಬೈಕ್​​ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಹರಿದು ಬೈಕ್​ ಸವಾರರಿಗೆ ಗಂಭೀರ ಗಾಯಗಳಾಗಿವೆ. ಲಾರಿ ಹರಿದ ಪರಿಣಾಮ ಯುವತಿ ಕಾಲು ಕಳೆದುಕೊಂಡಿದ್ದಾಳೆ. ಗಾಯಾಳು ಯುವತಿ, ಯುವಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ