ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್​ ಮಾಡಿ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ಈ ಕಾಮುಕ ಒಂಟಿ ಯುವತಿಯರು ಕಂಡ್ರೆ ಸಾಕು. ಅವರನ್ನು ಹಿಂಬಾಲಿಸಿ ಯಾರು ಇಲ್ಲದ ಸಮಯ ನೋಡಿಕೊಂಡು ಅವರನ್ನು ಅಪ್ಪಿ ಅಸಹ್ಯವಾಗಿ ವರ್ತಿಸುತ್ತಿದ್ದ. ಸದ್ಯ ಯುವತಿಯ ದೂರಿನ ಮೇರೆಗೆ ಕೇಸ್​ ದಾಖಲಿಸಿಕೊಂಡಿದ್ದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೀಚಕನ ಮತ್ತಷ್ಟು ನೀಚ ಕೃತ್ಯಗಳು ಬೆಳಕಿಗೆ ಬಂದಿವೆ.

ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್​ ಮಾಡಿ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್
ಅಯ್ಯಪ್ಪ
Follow us
| Updated By: ಆಯೇಷಾ ಬಾನು

Updated on: Oct 01, 2023 | 9:14 AM

ಬೆಂಗಳೂರು, ಅ.01: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್ ಮಾಡಿ ಯುವತಿಯರ ಖಾಸಗಿ ಅಂಗ ಮುಟ್ಟಿ ಎಸ್ಕೇಪ್ ಆಗುತ್ತಿದ್ದ ಕೀಚಕನನ್ನು ಹೈಗ್ರೌಂಡ್ಸ್ ಪೊಲೀಸರು (High Ground Police) ಬಂಧಿಸಿದ್ದಾರೆ. ವೈಯ್ಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ಈ ಕಾಮುಕ ಒಂಟಿ ಯುವತಿಯರು ಕಂಡ್ರೆ ಸಾಕು. ಅವರನ್ನು ಹಿಂಬಾಲಿಸಿ ಯಾರು ಇಲ್ಲದ ಸಮಯ ನೋಡಿಕೊಂಡು ಅವರನ್ನು ಅಪ್ಪಿ ಅಸಹ್ಯವಾಗಿ (Misbehave) ವರ್ತಿಸುತ್ತಿದ್ದ. ಸದ್ಯ ಯುವತಿಯ ದೂರಿನ ಮೇರೆಗೆ ಕೇಸ್​ ದಾಖಲಿಸಿಕೊಂಡಿದ್ದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೀಚಕನ ಮತ್ತಷ್ಟು ನೀಚ ಕೃತ್ಯಗಳು ಬೆಳಕಿಗೆ ಬಂದಿವೆ.

ರಾತ್ರಿ ಊಟ ಮುಗಿಸಿ ವಾಕ್ ಮಾಡುತ್ತಿದ್ದ ಯುವತಿಯನ್ನು ಕಂಡು ಬೈಕ್​ನಲ್ಲಿ ದಿಢೀರನೇ ಪ್ರತ್ಯಕ್ಷವಾಗಿದ್ದ ಕಾಮುಕ ಅಯ್ಯಪ್ಪ, ಯುವತಿಯಿಂದ ಅಣತಿ ದೂರದಲ್ಲಿ ಬೈಕ್ ನಿಲ್ಲಿಸಿದ್ದ. ಬಳಿಕ ಯುವತಿಯನ್ನ ಫಾಲೋ ಮಾಡಿ ಅಸಭ್ಯವಾಗಿ ಮುಟ್ಟಿ ಯುವತಿ ಜೊತೆಗೆ ಕಿರಿಕ್ ತೆಗೆದು ಅಸಭ್ಯವಾಗಿ ವರ್ತಿಸಿದ್ದ. ಕೀಚಕನ ಅಸಭ್ಯ ವರ್ತನೆ ಕಂಡು ಯುವತಿ ಕಿರುಚಾಡಿದ್ದಾರೆ. ಇದರಿಂದ ಗಾಬರಿಗೊಂಡ ಕಾಮುಕ ಯುವತಿ ಬಿಟ್ಟು, ಬಂದು ಬೈಕ್​ನಲ್ಲಿ ಎಸ್ಕೇಪ್ ಆಗಿದ್ದ. ಈ ಘಟನೆ ವಸಂತನಗರದಲ್ಲಿ ನಡೆದಿದ್ದು ಘಟನೆ ಬಗ್ಗೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕೇಸ್ ದಾಖಲಿಸಿಕೊಂಡ ಪೊಲೀಸರು ವೈಯ್ಯಾಲಿ ಕಾವಲ್ ನಿವಾಸಿ ಅಯ್ಯಪ್ಪನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕಾಮುಕನ ಮತ್ತಷ್ಟು ನೀಚ ಕೃತ್ಯಗಳು ಬೆಳಕಿಗೆ ಬಂದಿವೆ. ವರ್ಕ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಯ್ಯಪ್ಪ, ರಿಪೇರಿಗೆ ಬರುವ ಬೈಕ್ ತೆಗೆದುಕೊಂಡು ನಗರದಲ್ಲಿ ಸುತ್ತಾಡುತ್ತಿದ್ದ. ದಿನಕ್ಕೊಂದು ಬೈಕ್​ನಲ್ಲಿ ರೌಂಡ್ಸ್ ಹಾಕುತ್ತಿದ್ದ. ಈ ವೇಳೆ ಒಂಟಿಯಾಗಿ ಯುವತಿಯರು ಕಂಡ್ರೆ ಅವರನ್ನು ತಬ್ಬಿ, ಖಾಸಗಿ ಅಂಗ ಮುಟ್ಟಿ ಎಸ್ಕೇಪ್ ಆಗುತ್ತಿದ್ದ. ಈ ರೀತಿ ಅನೇಕ ಬಾರಿ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿ ಎಸ್ಕೇಪ್ ಆಗಿದ್ದ. ಸದ್ಯ ಕಾಮುಕನನ್ನ ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಅಪಘಾತದಲ್ಲಿ ಇಬ್ಬರು ಬೈಕ್​ ಸವಾರರಿಗೆ ಗಂಭೀರ ಗಾಯ

ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್​ ಸವಾರರಿಗೆ ಗಂಭೀರ ಗಾಯಗಳಾಗಿವೆ. ಓವರ್​ ಟೇಕ್​ ಮಾಡಲು ಹೋಗಿ ಮುಂದೆ ಹೋಗುತ್ತಿದ್ದ ಬೈಕ್​ಗೆ​​ ಆಟೋ ಡಿಕ್ಕಿ ಹೊಡೆದಿದೆ. ಇದರಿಂದ ಅಪಘಾತ ಸಂಭವಿಸಿದ್ದು ಅಪಘಾತ ಮಾಡಿದ ಆಟೋ ಚಾಲಕ ಪರಾರಿಯಾಗಿದ್ದಾನೆ. ಆಟೋ ಡಿಕ್ಕಿಯಿಂದಾಗಿ ಇಬ್ಬರು ಬೈಕ್​​ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಹರಿದು ಬೈಕ್​ ಸವಾರರಿಗೆ ಗಂಭೀರ ಗಾಯಗಳಾಗಿವೆ. ಲಾರಿ ಹರಿದ ಪರಿಣಾಮ ಯುವತಿ ಕಾಲು ಕಳೆದುಕೊಂಡಿದ್ದಾಳೆ. ಗಾಯಾಳು ಯುವತಿ, ಯುವಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ