AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Highest road accident city in india: ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು: ಟಾಪ್ 3 ನಗರಗಳಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ

2021 ರಲ್ಲಿ ರಸ್ತೆ ಅಪಘಾತಗಳಿಂದಾಗಿ ಅತಿ ಹೆಚ್ಚು ಸಾವು ಸಂಭವಿಸಿದ ನಗರಗಳಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ಅಂಕಿಅಂಶಗಳು ತಿಳಿಸಿವೆ.

Highest road accident city in india: ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು: ಟಾಪ್ 3 ನಗರಗಳಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ
ಸಾಂದರ್ಭಿಕ ಚಿತ್ರ Image Credit source: PTI
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 30, 2022 | 1:43 PM

Share

ಬೆಂಗಳೂರು: 2021 ರಲ್ಲಿ ರಸ್ತೆ ಅಪಘಾತಗಳಿಂದಾಗಿ ಅತಿ ಹೆಚ್ಚು ಸಾವು ಸಂಭವಿಸಿದ ನಗರಗಳಲ್ಲಿ ಕರ್ನಾಟಕದ (Karnataka) ರಾಜಧಾನಿ ಬೆಂಗಳೂರು (bengaluru) ಸೇರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ಅಂಕಿಅಂಶಗಳು ತಿಳಿಸಿವೆ. ದೆಹಲಿಯು 1,239 ಸಾವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ, ಚೆನ್ನೈ ಮತ್ತು ಬೆಂಗಳೂರು ಕ್ರಮವಾಗಿ 998 ಮತ್ತು 654 ಸಾವುಗಳನ್ನು ದಾಖಲಿಸಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಬೆಂಗಳೂರಿನ ನಂತರ ಮೊದಲ 10 ಸ್ಥಾನದಲ್ಲಿರುವ ಇತರ ನಗರಗಳು ಜೈಪುರ, ಕಾನ್ಪುರ, ಆಗ್ರಾ, ಅಲಹಾಬಾದ್ (ಈಗ ಪ್ರಯಾಗ್‌ರಾಜ್), ಇಂದೋರ್, ರಾಯ್‌ಪುರ ಮತ್ತು ಜಬಲ್‌ಪುರ. ಭಾರತದಲ್ಲಿ ರಸ್ತೆ ಅಪಘಾತಗಳು – 2021′ ಎಂಬ ಶೀರ್ಷಿಕೆಯ ವರದಿಯು, ಸಮೀಕ್ಷೆ ನಡೆಸಿದ ಒಟ್ಟು 50 ನಗರಗಳಲ್ಲಿ ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ ಶೇಕಡಾ 43.13 ರಷ್ಟು ಈ ಅಗ್ರ 10 ನಗರಗಳು ಸಂಭವಿಸಿವೆ ಎಂದು ಹೇಳಿದೆ. ಶ್ರೀನಗರ, ಅಮೃತಸರ ಮತ್ತು ಜಮ್‌ಶೆಡ್‌ಪುರ 2021 ರಲ್ಲಿ ಕಡಿಮೆ ರಸ್ತೆ ಅಪಘಾತ ಸಾವುಗಳನ್ನು ಹೊಂದಿರುವ ನಗರಗಳಾಗಿದ್ದು, ಮೂರು ಸ್ಥಾನಗಳನ್ನು ಪಡೆದುಕೊಂಡಿವೆ.

ಇದನ್ನು ಓದಿ:ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

ಕಳೆದ ವರ್ಷ ಬೆಂಗಳೂರು ನಗರದಲ್ಲಿ ಹೊಂಡ ಮತ್ತು ಹದಗೆಟ್ಟ ರಸ್ತೆಗಳಿಂದಾಗಿ ಹಲವಾರು ಸಾವುಗಳು ಸಂಭವಿಸಿವೆ. ಕರ್ನಾಟಕ ಹೈಕೋರ್ಟ್ ಡಿಸೆಂಬರ್ ಮಧ್ಯದಲ್ಲಿ ರಾಜ್ಯ ಸರ್ಕಾರವು ಗುಂಡಿಗಳಿಂದ ಉಂಟಾದ ಅಪಘಾತಗಳಿಗೆ ಸಂಬಂಧಿಸಿದ ದೂರುಗಳ ಬಗ್ಗೆ ಪ್ರಥಮ ಮಾಹಿತಿ ವರದಿಗಳನ್ನು (ಎಫ್‌ಐಆರ್) ದಾಖಲಿಸುವಂತೆ ಆದೇಶಿಸಿದೆ.

ಬೆಂಗಳೂರಿನಲ್ಲಿ ಗುಂಡಿಗಳನ್ನು ಸಾವಿನ ಬಲೆ ಎಂದು ಕರೆಯಲ್ಪಡುತ್ತವೆ. ಇತ್ತೀಚಿನ ಘಟನೆಯಲ್ಲಿ, 55 ವರ್ಷದ ಬೈಕ್ ಸವಾರರೊಬ್ಬರು ಗುಂಡಿ ತಪ್ಪಿಸಲು ಪ್ರಯತ್ನಿಸುವಾಗ ಕಾಲು ಜಾರಿ ಬಿದ್ದು, ಟ್ರ್ಯಾಕ್ಟರ್ ಅವರ ಮೇಲೆ ಹರಿದು ಪ್ರಾಣ ಕಳೆದುಕೊಂಡಿದ್ದಾರೆ. ಅಕ್ಟೋಬರ್ 2021 ರಿಂದ ಇದೇ ರೀತಿಯ ಘಟನೆಗಳಲ್ಲಿ ಬೆಂಗಳೂರಿನಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Fri, 30 December 22