AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮವಸ್ತ್ರ ಸಂಘರ್ಷ: ಹೈಕೋರ್ಟ್​ನಲ್ಲಿ ಇಂದು ವಿಚಾರಣೆ ಮುಂದುವರಿಕೆ; ಏನಾಗಲಿದೆ ತೀರ್ಪು, ಜನತೆ ಚಿತ್ತ ಹೈಕೋರ್ಟ್​ನತ್ತ

ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಹಕ್ಕಿನ ವಿವಾದ ಮುಗಿಯುವ ಹಂತಕ್ಕೆ ಬಂದಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಅದು ಕೂಡ 6 ರಿಟ್ ಅರ್ಜಿ, ಕೆಲ ಮಧ್ಯಂತರ ಅರ್ಜಿಗಳ ವಿಚಾರಣೆ ಆಗಲಿದೆ.

ಸಮವಸ್ತ್ರ ಸಂಘರ್ಷ: ಹೈಕೋರ್ಟ್​ನಲ್ಲಿ ಇಂದು ವಿಚಾರಣೆ ಮುಂದುವರಿಕೆ; ಏನಾಗಲಿದೆ ತೀರ್ಪು, ಜನತೆ ಚಿತ್ತ ಹೈಕೋರ್ಟ್​ನತ್ತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 14, 2022 | 11:50 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಶಾಲೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈಗ ಮತ್ತೆ ಹಿಜಾಬ್ ವಿವಾದದಿಂದಾಗಿ ಶಾಲೆಗಳಿಂದ ದೂರ ಉಳಿಯುವಂತಾಗಿದೆ. ಸದ್ಯ ಸರ್ಕಾರ ಇಂದಿನಿಂದ ಮತ್ತೆ ಶಾಲೆಗಳನ್ನು ತೆರೆಯಲು ಅವಕಾಶ ನೀಡದೆ. ಇಂತಹ ಸಮಯದಲ್ಲೇ ಸಮವಸ್ತ್ರ ಸಮರ ಕುರಿತು ಇವತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಭಾರಿ ಕುತೂಹಲ ಕರಳಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಮವಸ್ತ್ರ ಸಂಘರ್ಷ ಇವತ್ತು ನ್ಯಾಯದೇಗುಲದ ಮುಂದೆ ಬರ್ತಿದೆ. ಹಾಗಾದ್ರೆ, ಕೋರ್ಟ್‌ನಲ್ಲಿ ಏನಾಗುತ್ತೆ? ವಿದ್ಯಾರ್ಥಿನಿಯರ ವಾದವೇನಿದೆ? ಈ ಮಧ್ಯೆ ಸರ್ಕಾರಕ್ಕೆ ಎದುರಾಗಿರೋ ಸವಾಲೇನು? ಸಿದ್ದಮಾಡ್ಕೊಂಡಿರೋ ಪ್ರತ್ಯಾಸ್ತ್ರವೇನು? ಎಲ್ಲದರ ರಿಪೋರ್ಟ್ ಇಲ್ಲಿದೆ.

ಇವತ್ತು ಹೈಕೋರ್ಟ್ನಲ್ಲಿ ವಿಚಾರಣೆ ಮುಂದುವರಿಕೆ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಹಕ್ಕಿನ ವಿವಾದ ಮುಗಿಯುವ ಹಂತಕ್ಕೆ ಬಂದಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಅದು ಕೂಡ 6 ರಿಟ್ ಅರ್ಜಿ, ಕೆಲ ಮಧ್ಯಂತರ ಅರ್ಜಿಗಳ ವಿಚಾರಣೆ ಆಗಲಿದೆ. ಇವತ್ತು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡೋ ಸಾಧ್ಯತೆ ಇದೆ. ಅದು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ ಪ್ರಶ್ನೆ ಕೇಳಿದ್ರೆ ಸರ್ಕಾರ ಕೈಗೊಂಡ ಕ್ರಮದ‌ ಬಗ್ಗೆ ಎಜಿ ವಿವರಣೆ ಕೊಡಲಿದ್ದಾರೆ.

ಅಂತಿಮ ತೀರ್ಪಿಗಾಗಿ ವಾದ ಮಂಡನೆ? ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ ಕಾಮತ್ ಇವತ್ತು ವಾದ ಮುಂದುವರಿಸಲಿದ್ದಾರೆ. ಅಲ್ದೆ, ತರಗತಿಯೊಳಗೆ ಹಿಜಾಬ್ ಧರಿಸುವುದು ಧಾರ್ಮಿಕ ಅಗತ್ಯತೆಯೇ? ಧಾರ್ಮಿಕ ಆಚರಣೆಯ ಮೂಲ ಅಂಶ ಎಂದು ಮನವರಿಕೆಗೆ ಯತ್ನಿಸಲು ಮುಂದಾಗೋ ಸಾಧ್ಯತೆ ಇದೆ. ಇನ್ನು, ಎರಡೂ ಕಡೆಯಿಂದ್ಲೂ ಶಿರೂರು ಮಠ ಕೇಸ್ ಉಲ್ಲೇಖ ಮಾಡಬಹುದು. ಅಲ್ದೆ, ಯಾವುದು ಅತ್ಯಗತ್ಯ ಆಚರಣೆ. ಯಾವುದು ಅಲ್ಲ ಎಂದು ವಿಶ್ಲೇಷಣೆ ಮಾಡಬಹುದು. ಜೊತೆಗೆ ಖುರಾನ್ನಲ್ಲಿ ಯಾವುದು ಕಡ್ಡಾಯ ಆಚರಣೆ, ಯಾವುದಲ್ಲ ಅಂತಾ ಎಜಿ ವಾದ ಮಂಡಿಸುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ರಾಜ್ಯ ಸರ್ಕಾರ ವಿವರವಾದ ಆಕ್ಷೇಪಣೆ ಸಲ್ಲಿಸಿದೆ.

ಇವತ್ತೇ ವಾದ ಮಂಡನೆ ಪೂರ್ಣವಾಗೋದು ಡೌಟ್ ಇನ್ನು, ಇವತ್ತೇ ವಾದಮಂಡನೆ ಪೂರ್ಣ ವಾಗುವ ಸಾಧ್ಯತೆ ಇಲ್ಲ. ಯಾಕಂದ್ರೆ, ಹಲವು ಅರ್ಜಿಗಳಿರುವುದರಿಂದ‌ ವಾದಮಂಡನೆ ಪೂರ್ಣಗೊಳಿಸಲು ಕೆಲ ದಿನ ಬೇಕು. ಅದ್ರಲ್ಲೂ ಎಲ್ಲರ ವಾದ ಕೇಳಿದ‌ ನಂತರವೇ ಅಂತಿಮ ತೀರ್ಪು ನೀಡುವ ಸಾಧ್ಯತೆ ಇದೆ. ಒಟ್ಟಾರೆ, ಒಂದ್ಕಡೆ ಶಾಲೆ ಓಪನ್ ಆಗಿದ್ದು ಮತ್ತೊಂದ್ಕಡೆ ಸದನ ಕದನ ಇದೆ. ಈ ನಡುವೆ ಹೈಕೋರ್ಟ್ನಲ್ಲಿ ವಿಚಾರಣೆ ಇದೆ. ಹೀಗಾಗಿ ಇಡೀ ರಾಜ್ಯದ ಜನತೆಯ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.

ಇದನ್ನೂ ಓದಿ: Hijab Row what next? ಅನ್ನೋರಿಗೆ ಶಾಕ್​ ಕೊಟ್ಟ ಶಿಕ್ಷಕಿಯರು, ಮಾದರಿಯಾಗಬೇಕಿದ್ದ ಶಿಕ್ಷಕಿಯರೇ ಸ್ವತಃ ಹಿಜಾಬು ಧರಿಸಿದರು!

Published On - 10:28 am, Mon, 14 February 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ