AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕ ದಾಟಿದ ತರಕಾರಿಗಳ ಬೆಲೆ! ಬೆಂಗಳೂರಿನಲ್ಲಿ ತರಕಾರಿಗಳ ದರ ಹೀಗಿದೆ ನೋಡಿ

Vegetables Rate: ಕುಸಿದಿದ್ದ ಟೊಮ್ಯಾಟೋ ದರ ಸೇರಿ ಇತರೆ ತರಕಾರಿ ಬೆಲೆ ಮತ್ತೆ ಏರಿಕೆಯಾಗಿದೆ. ನುಗ್ಗೆಕಾಯಿ ಪ್ರತಿ ಕೆಜಿಗೆ 350 ರೂ. ಇದೆ. ಮಾರುಕಟ್ಟೆಯಲ್ಲಿ ದರ ಕೇಳಿ ಜನರು ತರಕಾರಿ ಕೊಳ್ಳದೆ ವಾಪಸ್ ಹೋಗುತ್ತಿದ್ದಾರೆ.

ಶತಕ ದಾಟಿದ ತರಕಾರಿಗಳ ಬೆಲೆ! ಬೆಂಗಳೂರಿನಲ್ಲಿ ತರಕಾರಿಗಳ ದರ ಹೀಗಿದೆ ನೋಡಿ
ತರಕಾರಿಗಳು (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Dec 12, 2021 | 10:40 AM

ಬೆಂಗಳೂರು: ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಸಂಪೂರ್ಣ ಜಲಾವೃತವಾಗಿತ್ತು. ಇನ್ನೇನು ಫಸಲು ಕೈಗೆ ಸಿಗಬೇಕು ಅನ್ನುವಷ್ಟರಲ್ಲಿ ನಿರಂತರ ಮಳೆಗೆ ನಾಶವಾಯಿತು. ಸುರಿದ ಮಳೆಯಿಂದ ರೈತರ ಬದುಕು ಸದ್ಯ ಹೀನಾಯವಾಗಿದೆ. ತರಕಾರಿಗಳು ಹೊಲದಲ್ಲೇ ಹಾಳಾಗಿರುವುದರಿಂದ ಹೆಚ್ಚು ಪ್ರಮಾಣದ ತರಕಾರಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ದಿನದಿಂದ ದಿನಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಕಂಡು ಖರೀದಿದಾರರು ಕಂಗಾಲಾಗಿದ್ದಾರೆ.

ತರಕಾರಿ ಬೆಲೆ ಕೇಳಿದರೆ ಶಾಕ್ ಆಗುತ್ತೆ. ತರಕಾರಿಗಳ ಬೆಲೆ ಮತ್ತೆ ಶತಕ ದಾಟಿದೆ. ತರಕಾರಿಗಳು ದರ ಏರಿಕೆಯಲ್ಲಿ ಪೈಪೋಟಿ ಬೆಳೆಸಿದೆ. ಅಕಾಲಿಕ ಮಳೆಯಿಂದ ಬೆಲೆ ಡಬಲ್ ಆಗಿದೆ. ಹೊಸದಾಗಿ ತರಕಾರಿ ಬೆಳೆ ರೈತರ ಕೈ ಸೇರುವವರೆಗೂ ರಾಜ್ಯದ ಜನರು ಇದೇ ಸ್ಥಿತಿಯನ್ನು ಎದುರಿಸಬೇಕಾಗಿದೆ. ಕನಿಷ್ಠ 2-3 ತಿಂಗಳು ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

ಕುಸಿದಿದ್ದ ಟೊಮ್ಯಾಟೋ ದರ ಸೇರಿ ಇತರೆ ತರಕಾರಿ ಬೆಲೆ ಮತ್ತೆ ಏರಿಕೆಯಾಗಿದೆ. ನುಗ್ಗೆಕಾಯಿ ಪ್ರತಿ ಕೆಜಿಗೆ 350 ರೂ. ಇದೆ. ಮಾರುಕಟ್ಟೆಯಲ್ಲಿ ದರ ಕೇಳಿ ಜನರು ತರಕಾರಿ ಕೊಳ್ಳದೆ ವಾಪಸ್ ಹೋಗುತ್ತಿದ್ದಾರೆ.

ತರಕಾರಿಗಳ ದರ ಹೀಗಿದೆ ಒಂದು ಕೆಜಿ ನುಗ್ಗೆಕಾಯಿಗೆ 200 ರಿಂದ 360 ರೂ. ಇದೆ. ಟೊಮ್ಯಾಟೋ 60 ರಿಂದ 100 ರೂ. ಈರುಳ್ಳಿ 40 ರಿಂದ 50 ರೂ. ಬೆಂಡೆಕಾಯಿ 60 ರಿಂದ 100 ರೂ. ಬೀನ್ಸ್ 60 ರಿಂದ 100 ರೂ. ಕ್ಯಾರೆಟ್ 70 ರಿಂದ 90 ರೂ. ಹೀರೆಕಾಯಿ 50 ರಿಂದ 85 ರೂ. ಬೀಟ್ರೂಟ್ 40 ರಿಂದ 75 ರೂ. ನಮಿಲು ಕೋಸು 40 ರಿಂದ 100 ರೂ. ಬದನೆಕಾಯಿ 30 ರಿಂದ 114 ರೂ. ಕೊತ್ತಂಬರಿ ಸೊಪ್ಪು 30 ರಿಂದ 40 ರೂ. ಇದೆ. ಇನ್ನು ಮೆಂತ್ಯ, ಪಾಲಕ್, ಅರವೆ, ದಂಟಿನ ಸೊಪ್ಪು ಪ್ರತಿ ಕಟ್ಟಿಗೆ 60 ರಿಂದ 70 ರೂಪಾಯಿ ಇದೆ.

ಇಂದಿನಿಂದ ಡಿ. 15ರವರೆಗೆ ಕರ್ನಾಟಕದಲ್ಲಿ ಹಗುರ ಮಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 15ರವರೆಗೆ ಮಳೆ ಸುರಿಯಲಿದೆ. ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ

ಮತ್ತೆ ಜೋರಾದ ಮತಾಂತರ ಕಾಯ್ದೆ ಜಾರಿ ಚರ್ಚೆ; ಕಾಂಗ್ರೆಸ್ ವಿರೋಧ, ಭಾರತೀಯ ಕ್ರೈಸ್ತ ಒಕ್ಕೂಟದಿಂದ ಧರಣಿಗೆ ನಿರ್ಧಾರ

ಅಮೇರಿಕಾ: ಚಂಡಮಾರುತಕ್ಕೆ ನಲುಗಿದ ಐದು ರಾಜ್ಯಗಳು; 80ಕ್ಕೂ ಅಧಿಕ ಜನರ ದುರ್ಮರಣ

Published On - 10:34 am, Sun, 12 December 21

ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್