AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಲವ್ ಜಿಹಾದ್ ವಿರೋಧಿ ಪೋಲೀಸ್ ಪಡೆ ರಚನೆಗೆ ಹಿಂದೂ ಸಂಘಟನೆಗಳ ಒತ್ತಾಯ

ಉತ್ತರಪ್ರದೇಶ ಮಾದರಿಯಲ್ಲಿ ಪ್ರತ್ಯೇಕ ಲವ್ ಜಿಹಾದ್ ವಿರೋಧಿ ಪೋಲೀಸ್ ಪಡೆ ರಚನೆ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ್ ಗೌಡ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರತ್ಯೇಕ ಲವ್ ಜಿಹಾದ್ ವಿರೋಧಿ ಪೋಲೀಸ್ ಪಡೆ ರಚನೆಗೆ ಹಿಂದೂ ಸಂಘಟನೆಗಳ ಒತ್ತಾಯ
ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ್ ಗೌಡ
TV9 Web
| Edited By: ವಿವೇಕ ಬಿರಾದಾರ|

Updated on:Dec 17, 2022 | 6:28 PM

Share

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಹಾಲಾಲ್​ ಕಟ್ (Halal Cut) ಅಭಿಯಾನ ಮತ್ತೆ ಮುನ್ನಲೆಗೆ ಬಂದಿದೆ. ಇದರ ಜೊತೆಗೆ ಇತ್ತೀಚಿಗೆ ಲವ್​ ಜಿಹಾದ್ (Love Jihad)​ ಪ್ರಕರಣಗಳು ಕೂಡ ವರದಿಯಾಗುತ್ತಿವೆ. ಈ ಕುರಿತು ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ್ ಗೌಡ ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಲವ್ ಜಿಹಾದ್ ಪ್ರಕರಣಗಳು ದಾಖಲಾಗುತ್ತಿವೆ. ಉತ್ತರಪ್ರದೇಶ ಮಾದರಿಯಲ್ಲಿ ಪ್ರತ್ಯೇಕ ಲವ್ ಜಿಹಾದ್ ವಿರೋಧಿ ಪೋಲೀಸ್ ಪಡೆ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಹಾಲಾಲ್​ ಮತ್ತು ಲವ್​ ಜಿಹಾದ ವಿರುದ್ಧ ಇಂದು (ಡಿ.17) ಫ್ರೀಡಂಪಾರ್ಕ್​ನಲ್ಲಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಿವೆ. ಈ ವೇಳೆ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಸಂಚಾಲಕ ಮೋಹನ್ ಗೌಡ ಮತಾಂತರ ಕಾಯ್ದೆ ಜಾರಿಯಲ್ಲಿದ್ದರೂ ಕೂಡ ಲವ್ ಜಿಹಾದ್ ಪ್ರಕರಣಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪತ್ರ್ಯೇಕ ಪೊಲೀಸ್​ ಪಡೆ ರಚನೆಗಾಗಿ ಸಚಿವರಿಗೆ ಮತ್ತು ಶಾಸಕರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಡಿ.19ರಿಂದ ಮೂರು ದಿನ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

ಚುನಾವಣೆ ಸಮಯದಲ್ಲಿ ಯಾರ್ಯಾರಿಗೆ ಮಣ್ಣು ಹಾಕಬೇಕು ಅನ್ನೋದು ನಮಗೆ ಗೊತ್ತು

ನಿಮಗೆ ವೋಟು ಹಾಕಿ ಅಧಿಕಾರಕ್ಕೆ ತಂದಿರೋದು ಹಿಂದೂ ಸಂಘಟನೆಗಳು. ಆದರೆ ಬೇರೆ ಧರ್ಮದ ಮೇಲೆ ಯಾಕಿಷ್ಟು ವಾತ್ಸಲ್ಯ? ಸಾಫ್ಟ್ ಹಿಂದುತ್ವ ಬೇಕಾಗಿಲ್ಲ. ಚುನಾವಣೆ ಸಮಯದಲ್ಲಿ ಯಾರ್ಯಾರಿಗೆ ಮಣ್ಣು ಹಾಕಬೇಕು ಅನ್ನೋದು ನಮಗೆ ಗೊತ್ತು ಎಂದು ವಿಶ್ವ ಸನಾತನ ಪರಿಷತ್ತಿನ ಅಧ್ಯಕ್ಷ ಭಾಸ್ಕರನ್​ ಎಚ್ಚರಿಕೆ ನೀಡಿದ್ದಾರೆ.

ಮೊದಲು ಜಿಹಾದಿ ಪೋರ್ಸ್​​​ಗಳನ್ನು ತಡೆಯಿರಿ. ಹಿಂದೂ ಹುಡುಗಿಯರ ಜೊತೆ ಸ್ನೇಹ ಬೆಳೆಸಿ ಬಲೆಗೆ ಕೆಡವಿಕೊಳ್ಳಲು ಮುಸ್ಲಿಂ ಯುವಕರ ಗ್ಯಾಂಗ್ ತಯಾರಾಗಿದೆ. ನಿರಂತರವಾಗಿ ಹಿಂದೂ ಯುವತಿಯರ ಬ್ರೈನ್ ವಾಷ್ ಮಾಡಲಾಗುತ್ತಿದೆ. ನಾವೇನಾದರು ತಡೆದರೇ ನೈತಿಕ ಪೊಲೀಸ್ ಗಿರಿ ಅಂತ ಆಗುತ್ತೆ. ಇದೆಲ್ಲವೂ ಬೇಡ‌ ಮೊದಲು ಲವ್ ಜಿಹಾದ್ ತಡೆಯಲು ಪೊಲೀಸ್ ಪಡೆ ತನ್ನಿ. ಇಲ್ಲದೆ ಇದ್ದರೇ ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿ ಪಕ್ಷದ ವಿರುದ್ಧವೇ ಕೆಲ್ಸ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಗೆ ಎದುರಾದ ಬಜರಂಗದಳ

ಹಾಲಾಲ್ ಸರ್ಟಿಫಿಕೇಟ್ ನಿಷೇಧ ಮಾಡಬೇಕು

ಚಳಿಗಾಲ ಅಧಿವೇಶ ನಡೆಯಲಿದೆ ಹೀಗಾಗಿ ನಮ್ಮ ಸಂಘಟನೆಯಿಂದ ಕೆಲ ಬೇಡಿಕೆ ಇಟ್ಟಿದ್ದೇವೆ. ಹಿಂದೂ ಯುವತಿಯರನ್ನು ಚಿತ್ರಹಿಂಸೆ ಕೊಟ್ಟು ಸಾಯಿಸಲಾಗುತ್ತಿದೆ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರು ಮೋಸ ಹೋಗುತ್ತಿದ್ದಾರೆ. ಮತಾಂತರ ತಡೆ ಕಾನೂನು ಅಡಿಯಲ್ಲಿ ಈವರೆಗೆ ಯಾರಿಗೂ ಶಿಕ್ಷೆ ನೀಡಿಲ್ಲ. ಯಾವ ಕಾರಣಕ್ಕೆ ಲವ್ ಜಿಹಾದ್ ನಡೆಯುತ್ತಿದೆ ಅಂತ ಅರಿಯಬೇಕು. ಹಾಲಾಲ್ ಸರ್ಟಿಫಿಕೇಟ್ ನಿಷೇಧ ಮಾಡಬೇಕು. ಇದರಿಂದ ಬರುವ ಹಣ ಭಯೋತ್ಪಾದನೆಗೆ ಬಳಕೆ ಆಗುತ್ತಿದೆ. ಹೀಗಾಗಿ ಒಂದು ಧರ್ಮಕ್ಕೆ ಸೀಮಿತವಾದ ಸರ್ಟಿಫಿಕೇಟ್ ಹಂಚಿಕೆ ನಿಲ್ಲಿಸಬೇಕು. ಗೃಹ ಸಚಿವರು ಇದನ್ನು ಗಂಭೀರವಾಗಿ ತಗೆದುಕೊಳ್ಳಬೇಕು ಎಂದು ರಣ ರಾಗಿಣಿ ಬ್ರಿಗೇಡ್​ನ ಭವ್ಯ ಗೌಡ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Sat, 17 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ