AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆಯಾ? ರಾಜಸ್ಥಾನದಿಂದ ಬಂದ ಮಾಂಸದ ಬಾಕ್ಸ್​ಗೆ ತಡೆ

ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಿರುವ ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಸರಬರಾಜು ಆಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ರಾಜಸ್ಥಾನದಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್​ಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಈ ಹಿಲ್ಲೆಯಲ್ಲಿ ರೈಲ್ವೆ ಸ್ಟೇಷನ್​ನಲ್ಲಿ ದೊಡ್ಡ ಗಲಾಟೆಯಾಗಿದೆ.

ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆಯಾ? ರಾಜಸ್ಥಾನದಿಂದ ಬಂದ ಮಾಂಸದ ಬಾಕ್ಸ್​ಗೆ ತಡೆ
ಮಾಂಸ ಬಾಕ್ಸ್​ ತಡೆದ ಪುನೀತ್ ತಂಡ
ರಮೇಶ್ ಬಿ. ಜವಳಗೇರಾ
|

Updated on:Jul 26, 2024 | 11:03 PM

Share

ಬೆಂಗಳೂರು, (ಜುಲೈ 26): ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಇಂದು (ಜುಲೈ 26) ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು, ಇಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು, ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿ ಮಾಂಸದ ಬಾಕ್ಸ್​ಗಳನ್ನು ತಡೆಹಿಡಿದಿದ್ದಾರೆ.

ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ಜೈಪುರ ರೈಲಿನ ಮೇಲೆ ದಾಳಿ ಮಾಡಿದ್ದು, ಮಟನ್ ಮಾಂಸವನ್ನು ಎತ್ತಿ ನೋಡಿದ್ದಾರೆ. ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.

ಇನ್ನು ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್‌ಗಳು ಪಾರ್ಸಲ್‌ ಬಂದಿವೆ. ಅದರಲ್ಲಿ ಒಟ್ಟು 4,500 ಕೆ.ಜಿ. ಮಾಂಸವಿದೆ. ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಅವರು ಕಡಿಮೆ ಬೆಲೆಗೆ ರಾಜಸ್ಥಾನದಿಂದ ಮಾಂಸ ತರಿಸಿಕೊಂಡು ಹೆಚ್ಚಿ ದರಕ್ಕೆ ಬೆಂಗಳೂರಿನ ಹಲವು ಹೋಟೆಲ್​ಗಳಿಗೆ ಸರಬರಾಜು ಮಾಡುತ್ತಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಆ್ಯಪ್​ಗಳನ್ನ ನಂಬಿ ಹಣ ಹಾಕೋರು ಈ ಸ್ಟೋರಿ ಮಿಸ್ ಮಾಡದೇ ಓದಿ

ಪುನೀತ್ ಕೆರೆಹಳ್ಳಿ ಆರೋಪವೇನು?

ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ, ಜೈಪುರದಿಂದ ಫಿಶ್ ಮಾಂಸ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಇದು ಹೋಗುತ್ತೆ. ಮೀನು ಎಂದು ಬೋರ್ಡ್ ಹಾಕಿಕೊಂಡು ಮಾಂಸ ಸಾಗಾಟ ಮಾಡ್ತಿದ್ದಾರೆ. ಮೀನು ತಂದಿದ್ದರೇ ಮೀನು ಅಂತಾ ಬೋರ್ಡ್‌ ಇರಬೇಕಿತ್ತು. ಮಾಂಸ ತಂದು ಅದಕ್ಕೆ ಮೀನು ಎಂದು ಏಕೆ ಬೋರ್ಡ್‌ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನವಿದೆ. ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರುವ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರುವುದಕ್ಕೆ ಅನುಮತಿ ಇದೆಯಾ? ಇದರ ಬಗ್ಗೆ ಅನುಮಾನ ಇದೆ ಎಂದು ಆರೋಪಿಸಿದರು.

ಅಬ್ದುಲ್ ರಜಾಕ್​ ಹೇಳುವುದೇನು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್​ಕಾಲ್​ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸ್ಥಳಕ್ಕೆ ಬಂದ ಬಿಬಿಎಂಪಿ ಆರೋಗ್ಯ ಅಧಿಕಾರಿ ದೌಡು

ಇನ್ನು ಜೈಪುರಿಂದ ಬಂದ ಮಾಂಸದ ಬಗ್ಗೆ ವಾಗ್ದಾದ ನಡೆದಿರುವ ಮಧ್ಯ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ. ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್‌ ಆಗಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ಮಾಲೀಕ‌ನ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:46 pm, Fri, 26 July 24

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ