AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಂದುತ್ವ ಪರ ಕಾರ್ಯಕರ್ತರಿಂದ ಹಲಾಲ್ ಮುಕ್ತ ದೀಪಾವಳಿ ಅಭಿಯಾನ: ಮನೆಮನೆಗೆ ಭಿತ್ತಿಪತ್ರ ಹಂಚಿಕೆ

ಮನೆ ಮನೆಗೆ ತೆರಳಿ ಹಲಾಲ್ ಜಿಹಾದ್ ಪುಸ್ತಕ ಮತ್ತು ಬಿತ್ತಿಪತ್ರಗಳನ್ನು ನೀಡಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹಲಾಲ್ ವಸ್ತುಗಳನ್ನು ಖರೀದಿ ಮಾಡದಂತೆ ಮನವಿ ಮಾಡಲಾಗುತ್ತೆ.

ಬೆಂಗಳೂರಿನಲ್ಲಿ ಹಿಂದುತ್ವ ಪರ ಕಾರ್ಯಕರ್ತರಿಂದ ಹಲಾಲ್ ಮುಕ್ತ ದೀಪಾವಳಿ ಅಭಿಯಾನ: ಮನೆಮನೆಗೆ ಭಿತ್ತಿಪತ್ರ ಹಂಚಿಕೆ
ದೀಪಾವಳಿ ದಿವಾಳಿ ಎಂದಾಗದಿರಲಿ, ಮೈಸೂರಿನಲ್ಲಿ ಜಾಗೃತಿ ಅಭಿಯಾನ
TV9 Web
| Edited By: |

Updated on:Oct 20, 2022 | 9:48 AM

Share

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಹಲಾಲ್ ಮುಕ್ತ ದೀಪಾವಳಿ ಅಭಿಯಾನ(Halal Mukta Deepavali Abhiyan) ನಡೆಸಲು ಹಿಂದೂ ಸಂಘಟನೆಗಳು(Hindu organizations) ಕರೆ ಕೊಟ್ಟಿವೆ. ಹಿಂದೂಪರ ಸಂಘಟನೆಗಳ “ಹಲಾಲ್ ಮುಕ್ತ ದೀಪಾವಳಿ” ಕರೆ ಹಿನ್ನೆಲೆ ಜಯನಗರ, ಬಸವನಗುಡಿಯಲ್ಲಿಂದು 11 ಗಂಟೆಗೆ ಜಾಗೃತಿ ಅಭಿಯಾನ ನಡೆಯಲಿದೆ. ಜಯನಗರದ ಮಯ್ಯಾಸ್ ಹೋಟೆಲ್ ಬಳಿಯಿಂದ ಅಭಿಯಾನ ಆರಂಭವಾಗಲಿದೆ. ಅಭಿಯಾನದಲ್ಲಿ ಭಾಷಣಕಾರರಾದ ವಿವೇಕ್ ವಂಶಿ, ಹಾರಿಕ ಮುಂಜುನಾಥ್, ಮುಖಂಡರಾದ ಮೋಹನ್ ಗೌಡ, ಮುನೇಗೌಡ ಹಾಗೂ ಪುನೀತ್ ಕೆರೆ ಹಳ್ಳಿ ಭಾಗಿಯಾಗಲಿದ್ದಾರೆ.

ಆಟೋದಲ್ಲಿ ಮೈಕ್ ಸೆಟ್ ‌ಮೂಲಕ ಜಾಗೃತಿ ಮೂಡಿಸಲಿದ್ದಾರೆ. ಮನೆ ಮನೆಗೆ ತೆರಳಿ ಹಲಾಲ್ ಜಿಹಾದ್ ಪುಸ್ತಕ ಮತ್ತು ಬಿತ್ತಿಪತ್ರಗಳನ್ನು ನೀಡಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹಲಾಲ್ ವಸ್ತುಗಳನ್ನು ಖರೀದಿ ಮಾಡದಂತೆ ಮನವಿ ಮಾಡಲಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ, ಶ್ರೀ ರಾಮ ಸೇನೆ, ರಾಷ್ಟ್ರ ರಕ್ಷಣಾ ಪಡೆ ಹಾಗೂ ವಿಶ್ವ ಹಿಂದೂ ಸನಾತನ ಪರಿಷತ್ತಿನ ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಇಂದು ಜಯನಗರ ಮತ್ತು ಬಸವನಗುಡಿಯ ವಿಧಾನಸಭಾ ಕ್ಷೇತ್ರದಲ್ಲಿ ಜಾಗೃತಿ ಅಭಿಯಾನ ನಡೆಯಲಿದೆ. ಹಿಂದೂಪರ ಹೋರಾಟಗಾರರು ಹೋಟೆಲ್‌ ಮಾಲೀಕರು, ಉದ್ಯಮಿಗಳು, ಅಂಗಡಿ ಮಾಲೀಕರು ಹಾಗೂ ಎಪಿಎಂಸಿ ಮಾಲೀಕರ ಜೊತೆಗೆ ಜಾಗೃತಿ ‌ಸಭೆ ಕೂಡ ಮಾಡಲಿದ್ದಾರೆ. ಇದನ್ನೂ ಓದಿ: Population Policy: ಮತಾಂತರಗೊಂಡವರಿಗೆ ಮೀಸಲಾತಿ ಸವಲತ್ತು ಸಲ್ಲದು; ಆರ್​ಎಸ್​ಎಸ್​ ನಾಯಕ ದತ್ತಾತ್ರೇಯ ಹೊಸಬಾಳೆ

ದೀಪಾವಳಿ ದಿವಾಳಿ ಎಂದಾಗದಿರಲಿ, ಮೈಸೂರಿನಲ್ಲಿ ಜಾಗೃತಿ ಅಭಿಯಾನ

ಇನ್ನು ಮತ್ತೊಂದೆಡೆ ಮೈಸೂರಿನಲ್ಲೂ ಜಾಗೃತಿ ಅಭಿಯಾನ ಶುರುವಾಗಿದೆ. ದೀಪಾವಳಿ ದಿವಾಳಿ ಎಂದಾಗದಿರಲಿ ಕನ್ನಡ ಪದ ಬಳಕೆ ಸರಿಯಿರಲಿ ಎಂದು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ದೇವರಾಜ ಅರಸು ರಸ್ತೆ, ವಿನೋಬ ರಸ್ತೆ, ಶಿವರಾಂಪೇಟೆ ಸೇರಿ ಹಲವು ಅಂಗಡಿಗಳಿಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಗುಲಾಬಿ ಹೂವು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:48 am, Thu, 20 October 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ