AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಜಿಹಾದ್ ನಿಷೇಧಕ್ಕೆ ಪ್ರತ್ಯೇಕ ಕಾನೂನು, ಕಾರ್ಯಪಡೆ ಜಾರಿಗೆ ಹಿಂದುತ್ವಪರ ಸಂಘಟನೆಗಳ ಆಗ್ರಹ

ಹಿಂದೂ ಜನಜಾಗೃತಿ, ದುರ್ಗಾವಾಹಿನಿ, ರಣರಾಗಿಣಿ ಬ್ರಿಗೇಡ್​​ನಿಂದ ಅಭಿಯಾನ ನಡೆಯಲಿದೆ. ಲವ್​ ಜಿಹಾದ್​ ತಡೆಗೆ ವಿಶೇಷ ಕಾನೂನು ರೂಪಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಲವ್ ಜಿಹಾದ್ ನಿಷೇಧಕ್ಕೆ ಪ್ರತ್ಯೇಕ ಕಾನೂನು, ಕಾರ್ಯಪಡೆ ಜಾರಿಗೆ ಹಿಂದುತ್ವಪರ ಸಂಘಟನೆಗಳ ಆಗ್ರಹ
ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಂಚಾಲಕ ಮೋಹನ್​ ಗೌಡ
TV9 Web
| Edited By: |

Updated on:Dec 11, 2022 | 10:58 AM

Share

ಬೆಂಗಳೂರು: ಲವ್ ಜಿಹಾದ್​ (Love Jihad) ವಿರುದ್ಧ ಪ್ರತ್ಯೇಕ ಕಾನೂನು ಜಾರಿ ಮಾಡಬೇಕೆಂಬ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಬಂಧ ಚಳಿಗಾಲದ ಅಧಿವೇಶನದಲ್ಲಿಯೇ (Winter Session) ವಿಶೇಷ ಕಾನೂನು ರೂಪಿಸಬೇಕೆಂದು ಸರ್ಕಾರದ ಒತ್ತಡ ಹಾಕಲು ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರು ಸಜ್ಜಾಗಿದ್ದಾರೆ. ಲವ್​ ಜಿಹಾದ್​ ತಡೆಗೆ ಕಾನೂನು, ವಿಶೇಷ ಪೊಲೀಸ್ ದಳ ರಚಿಸಲು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭಾನುವಾರ (ಡಿ 11) ಭೇಟಿಯಾಗಿ ಹಿಂದುತ್ವಪರ ಸಂಘಟನೆಗಳು ಆಗ್ರಹಿಸಿವೆ. ಲವ್ ಜಿಹಾದ್​ ನಿಷೇಧ ಕಾನೂನು ರೂಪಿಸುವಂತೆ ಆಗ್ರಹಿಸಲು ಡಿ 18ರವರೆಗೆ ಹಿಂದುತ್ವಪರ ಸಂಘಟನೆಗಳು ರಾಜ್ಯಾದ್ಯಂತ ಅಭಿಯಾನ ರೂಪಿಸಿವೆ.

ಹಿಂದೂ ಜನಜಾಗೃತಿ, ದುರ್ಗಾವಾಹಿನಿ, ರಣರಾಗಿಣಿ ಬ್ರಿಗೇಡ್​​ನಿಂದ ಅಭಿಯಾನ ನಡೆಯಲಿದೆ. ಲವ್​ ಜಿಹಾದ್​ ತಡೆಗೆ ವಿಶೇಷ ಕಾನೂನು ರೂಪಿಸಬೇಕು, ವಿಶೇಷ ಪೊಲೀಸ್ ದಳ ರಚಿಸಬೇಕು. ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲೇ ಕಾನೂನು ಜಾರಿಗೊಳಿಸಬೇಕು ಎಂದು ರಾಜ್ಯದ ಎಲ್ಲಾ ಕ್ಷೇತ್ರಗಳ ಶಾಸಕರಿಗೆ ಸ್ಥಳೀಯ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಲವ್ ಜಿಹಾದ್​ ವಿರುದ್ಧ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಂಚಾಲಕ ಮೋಹನ್​ ಗೌಡ, ಈ ಅಧಿವೇಶನದಲ್ಲೇ ಲವ್​ ಜಿಹಾದ್ ನಿಷೇಧ ಕಾನೂನು ಜಾರಿ ಆಗಬೇಕು. ಈ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿಗೂ ಮನವಿ ಮಾಡುತ್ತೇವೆ ಎಂದರು.

ವಿಎಚ್‌ಪಿಯಿಂದ ರಾಷ್ಟ್ರವ್ಯಾಪಿ ಆಂದೋಲನ

ಲವ್ ಜಿಹಾದ್ ವಿರುದ್ಧ ರಾಷ್ಟ್ರ ವ್ಯಾಪಿ ಜನಜಾಗೃತಿ ಮೂಡಿಸುವ ಅಭಿಯಾನವನ್ನು ವಿಶ್ವ ಹಿಂದೂ ಪರಿಷತ್ ಆರಂಭಿಸಿದೆ. ಈ ಅಭಿಯಾನಕ್ಕೆ ‘ಜನ್ ಜಾಗರಣ್ ಅಭಿಯಾನ’ ಎಂದು ಕರೆಯಲಾಗಿದೆ. ಯುವಜನರು, ಹರೆಯದ ಹುಡುಗಿಯರು ಮತ್ತು ಮಹಿಳೆಯರನ್ನು ಅಕ್ರಮವಾಗಿ ಮತಾಂತರ ಮಾಡಲು ಪ್ರೀತಿಯನ್ನು ಒಂದು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಜಾಗೃತಿ ಮೂಡಿಸುವ ಮೂಲಕ ಈ ಪಿಡುಗಿಗೆ ತಡೆಯೊಡ್ಡಲು ಕಾರ್ಯಪಡೆ ರೂಪಿಸಬೇಕು ಎಂದು ವಿಎಚ್​ಪಿ ಒತ್ತಾಯಿಸಿದೆ.

ಡಿಸೆಂಬರ್ 10ರಿಂದ ದೇಶದ ಮೂಲೆಮೂಲೆಗಳಲ್ಲಿ ವಿಎಚ್‌ಪಿಯ ಯುವ ಘಟಕವಾದ ಬಜರಂಗದಳವು ಶೌರ್ಯ ಯಾತ್ರೆ ನಡೆಸಲಿದೆ. ನಮ್ಮ ಸಹೋದರಿಯರನ್ನು ಲವ್‌ ಜಿಹಾದ್‌ನಂಥ ಅಕ್ರಮಗಳ ಸಂತ್ರಸ್ತರಾಗಿಸುವ ಧೈರ್ಯ ಯಾರಿಗೂ ಇರಬಾರದು ಎಂದು ವಿಎಚ್​ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದರು. ವಿಎಚ್‌ಪಿಯ ಮಹಿಳಾ ಘಟಕವಾದ ದುರ್ಗಾ ವಾಹಿನಿ ಕೂಡಾ ಪ್ರತ್ಯೇಕ ಅಭಿಯಾನವನ್ನು ಕೈಗೊಳ್ಳಲಿದೆ‍ ಲವ್‌ ಜಿಹಾದ್‌ಗೆ ಸಂಬಂಧಿಸಿದ ಸುಮಾರು 400 ಪ್ರಕರಣಗಳ ಪಟ್ಟಿಯನ್ನು ವಿಎಚ್​ಪಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶೀಘ್ರ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಗೆ ಆಗ್ರಹ, ಮುಸ್ಲಿಂ ಬಾಲಕಿಯರಿಗೆ ಪ್ರತ್ಯೇಕ ಕಾಲೇಜು ಚಿಂತನೆಗೆ ವಿರೋಧ

ಲವ್ ಜಿಹಾದ್​ಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Sun, 11 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ