AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಭರದ ಸಿದ್ಧತೆ: ಯಾವಾಗ ಶುರು? ಈ ಬಾರಿಯ ವಿಶೇಷವೇನು?

ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಅಂದರೆ ನಗರದ ಹಾಗೂ ಹೊರವಲಯದ ಜನರಿಗೂ ಅಚ್ಚುಮೆಚ್ಚು. ದೊಡ್ಡ ಗಣಪನ ದರ್ಶನ ಪಡೆದು, ಒಂದೆರೆಡು ಸೇರು ಕಡ್ಲೆಕಾಯಿ ಖರೀದಿ ಮಾಡಿ, ಜಾತ್ರೆಯನ್ನು ಸಂಭ್ರಮಿಸಿ ಖುಷಿಪಡುತ್ತಾರೆ. ಈ ವರ್ಷದ ಪರಿಷೆಗೆ ಇದೇ 17 ರಿಂದ ಚಾಲನೆ ಸಿಗಲಿದ್ದು, ನವೆಂಬರ್ 21ರ ವರೆಗೆ ನಡೆಯಲಿದೆ.

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಭರದ ಸಿದ್ಧತೆ: ಯಾವಾಗ ಶುರು? ಈ ಬಾರಿಯ ವಿಶೇಷವೇನು?
ಕಡಲೆಕಾಯಿ ಮಾರಾಟ
Vinay Kashappanavar
| Edited By: |

Updated on: Nov 14, 2025 | 8:03 AM

Share

ಬೆಂಗಳೂರು, ನವೆಂಬರ್ 14: ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai Parishe) ಬೆಂಗಳೂರಿನ (Bengaluru) ಒಂದು ದೊಡ್ಡ ಜಾತ್ರೆ. ಪರಿಷೆ ನೋಡುವುದಕ್ಕೆ ನಗರದ ಮೂಲೆ ಮೂಲೆಗಳಿಂದ ಜನ ಬರುತ್ತಾರೆ. ನವೆಂಬರ್ 17ರಿಂದ 21ರವರೆಗೆ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆಕಾಯಿ ಪರಿಷೆ ಶುರುವಾಗಲಿದೆ. ಹೀಗಾಗಿ ಪರಿಷೆಗೆ ಸಿದ್ಧತೆ ಭರದಿಂದ ಶುರುವಾಗಿದೆ. ಬಸವಣ್ಣ ಹಾಗೂ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಈ ವರ್ಷ ವಿಜೃಂಭಣೆಯಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ಆಚರಿಸಲು ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದ ಕೊನೆಯ ಸೋಮವಾರ ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ಬೆಳಗ್ಗೆ 10ಕ್ಕೆ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗುತ್ತಿದ್ದು, ಪರಿಷೆಗೆ 5 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ.

ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆಯುವ ಕಡಲೆಕಾಯಿ ಪರಿಷೆ ಐತಿಹಾಸಿಕ ಹಿನ್ನಲೆ ಹೊಂದಿದೆ. ಪರಿಷೆಗೆ ಲಕ್ಷಾಂತರ ಜನ ಸೇರುತ್ತಾರೆ.

ಕಡಲೆಕಾಯಿ ಪರಿಷೆ ಐದೇ ದಿನಕ್ಕೆ ಸೀಮಿತಗೊಳಿಸಲು ಬಸವನಗುಡಿ ನಿವಾಸಿಗಳ ಮನವಿ

ಕಡಲೆಕಾಯಿ ಪರಿಷೆಯನ್ನು ಐದು ದಿನಗಳಿಗೆ ಸೀಮಿತ ಮಾಡಬೇಕು ಎಂದು ಬಸವನಗುಡಿ ನಿವಾಸಿಗಳು ಮುಜರಾಯಿ ಇಲಾಖೆ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಹೆರಿಟೇಜ್ ಬಸವನಗುಡಿ ರೆಸಿಡೆಂಟ್ಸ್ ವೆಲ್ಫೇರ್ ಫೋರಂನಿಂದ ಪತ್ರ ಬರೆಯಲಾಗಿದೆ.

ಬಸವನಗುಡಿ ನಿವಾಸಿಗಳ ಸಮಸ್ಯೆ ಏನು?

ಕಡಲೆಕಾಯಿ ಮಾರಾಟ ಮಾಡಲು ಬೇರೆ ಊರು, ಜಿಲ್ಲೆಗಳಿಂದ ವ್ಯಾಪಾರಿಗಳು ಬಂದು ಬಸವನಗುಡಿಯಲ್ಲಿ ಬಿಡಾರ ಹೂಡುತ್ತಾರೆ. ಈ ವ್ಯಾಪಾರಿಗಳಿಗೆ ಯಾವ ಕನಿಷ್ಠ ಸೌಲಭ್ಯವನ್ನೂ ಕಲ್ಪಿಸಲಾಗುವುದಿಲ್ಲ. ಅವರ ಶೌಚಕ್ಕೆ ಶೌಚಾಲಯ ಕೂಡ ಇರುವುದಿಲ್ಲ. ಹೀಗಾಗಿ ಅವರೆಲ್ಲಾ ಮನೆ ಮುಂದೆ, ರಸ್ತೆ ಗಲ್ಲಿಗಳಲ್ಲಿ ಬಹಿರ್ದೆಸೆ ಮುಗಿಸಿಕೊಳ್ಳುತ್ತಾರೆ. ರಾಶಿ ರಾಶಿ ಕಸ, ಗಲೀಜಿನಿಂದ ಸಮಸ್ಯೆಯಾಗುತ್ತದೆ. ಹೀಗಾಗಿ ಪರಿಷೆಗೆ ಸಕಲ ವ್ಯವಸ್ಥೆ ಮಾಡಿಕೊಡಿ ಎಂದು ನಿವಾಸಿಗಳು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ ಪರಿಷೆ: ಎಲ್ಲೆಲ್ಲಿ? ಯಾವಾಗ? ಏನು ವಿಶೇಷ?

ಬಸವನಗುಡಿ ಕಡಲೆಕಾಯಿ ಪರಿಷೆ ಈ ಹಿಂದೆ ಮೂರು ದಿನಗಳ ಕಾಲ ನಡೆಯುತ್ತಿತ್ತು. ಆದರೆ ಈ ವರ್ಷ 5 ದಿನಗಳಿಗೆ ಅವಕಾಶ ನೀಡಲಾಗಿದೆ. ಒಟ್ಟಿನಲ್ಲಿ, ಪರಿಷೆಗೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಭರ್ಜರಿಯಾಗಿ ಕಡಲೆಕಾಯಿ ಪರಿಷೆ ಸಂಭ್ರಮಿಸಲು ನಗರವಾಸಿಗಳು ಕಾತರದಿಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್