ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಓರ್ವ ಬಲಿ, ಕೋಲಾರದಲ್ಲಿ ತಾಯಿ-ಮಗ ಬಲಿ

ಎರಡು ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಸಹಕಾರ ನಗರದ ರೈಲ್ವೆ ಅಂಡರ್​ಪಾಸ್​​ ಬಳಿ ಹಿಟ್ ಆ್ಯಂಡ್ ರನ್​ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಮತ್ತೊಂದೆಡೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿಯಾಗಿ ತಾಯಿ, ಮಗ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಓರ್ವ ಬಲಿ, ಕೋಲಾರದಲ್ಲಿ ತಾಯಿ-ಮಗ ಬಲಿ
ಸಾವುImage Credit source: Citizens for Justice and Peace
Follow us
| Updated By: ಆಯೇಷಾ ಬಾನು

Updated on: Oct 09, 2024 | 8:08 AM

ಬೆಂಗಳೂರು, ಅ.09: ಸಿಲಿಕಾನ್ ಸಿಟಿ ಬೆಂಗಳೂರಿನ ಸಹಕಾರ ನಗರದ ರೈಲ್ವೆ ಅಂಡರ್​ಪಾಸ್​​ ಬಳಿ ಭೀಕರ ಅಪಘಾತ ಸಂಭವಿಸಿದ್ದು ಹಿಟ್ ಆ್ಯಂಡ್ ರನ್​ಗೆ (Hit And Run) ಓರ್ವ ವ್ಯಕ್ತಿ ಬಲಿಯಾಗಿದ್ದಾರೆ (Death). ಮುಂಜಾನೆ ಸುಮಾರು 5 ಗಂಟೆಗೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಾಹನಕ್ಕೆ ಸಿಲುಕಿ ಅನಾಮಿಕ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.

ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿಯಾಗಿ ತಾಯಿ, ಮಗ ದುರ್ಮರಣ

ಇನ್ನು ಮತ್ತೊಂದೆಡೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿಯಾಗಿ ತಾಯಿ, ಮಗ ಮೃತಪಟ್ಟ ಘಟನೆ ನಡೆದಿದೆ. ಹಿಟ್​ ಆ್ಯಂಡ್​ ರನ್​ಗೆ ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48), ಪುತ್ರ ರಘು(26) ಬಲಿಯಾಗಿದ್ದಾರೆ. ಶ್ರೀನಿವಾಸಪುರದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ತೆರಳುವಾಗ ದುರಂತ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊನೆಗೂ ತಗ್ಗಿತು ಡೆಂಗ್ಯೂ ಅಬ್ಬರ: ಆದರೂ ಆತಂಕ ಇದೆ ಎಂದ ಆರೋಗ್ಯ ಇಲಾಖೆ! ಕಾರಣ ಇಲ್ಲಿದೆ

ಆರೋಪಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಹೆಚ್ಚಿನ ಗಾಂಜಾ ಇತ್ತು ಎಂಬ ಆರೋಪ ಹೊರಿಸಿದ್ದಕ್ಕೆ ಬೇಸತ್ತು ಯುವಕ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ನಗರದ ಮುನಿಸಿಪಾಲ್ ಮೈದಾನದ ಬಳಿ ನಡೆದಿದೆ. ನಗರದ ಸುಭಾಸ್ ಸರ್ಕಲ್ ನಿವಾಸಿ ದಾದಾಪೀರ ಆತ್ಮಹತ್ಯೆಗೆ ಯತ್ನಿಸಿದ ಯುವಕ. ದಾದಾಪೀರ್ ಬಳಿ ಪೊಲೀಸರಿಗೆ 40 ಗ್ರಾಂ ಗಾಂಜಾ ಸಿಕ್ಕಿತ್ತು. ಆದರೆ ಪೊಲೀಸರು ದಾದಾಪೀರ ಬಳಿ 2 ಕೆ.ಜಿ ಗಾಂಜಾ ಇರುವ ಆರೋಪ ಹೊರಿಸಿದ್ದರು. ಸಿಇಎನ್ ಕ್ರೈಂ ಠಾಣೆ ಪೊಲೀಸರು ನನ್ನ ಬಳಿ ವಶಕ್ಕೆ ಪಡೆದ ಗಾಂಜಾಗಿಂತ ಹೆಚ್ಚಿನ ಗಾಂಜಾ ಇದೆ ಎಂದು ಆರೋಪಿಸಿದ್ದಾರೆ ಎಂದು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಅಸ್ವಸ್ಥ ಆರೋಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಆರೋಗ್ಯ ಸ್ಥಿರವಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್