AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​​​ ರನ್​ಗೆ ಒಂದೇ ಕುಟುಂಬದ ಇಬ್ಬರ ಸಾವು: ಓರ್ವ ಗಂಭೀರ

ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​​ನಲ್ಲಿ ಹಿಟ್ ಅಂಡ್ ರನ್​ಗೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​​​ ರನ್​ಗೆ ಒಂದೇ ಕುಟುಂಬದ ಇಬ್ಬರ ಸಾವು: ಓರ್ವ ಗಂಭೀರ
ತಂದೆ ರಘು (ಎಡಚಿತ್ರ) ಮಗ ಚಿರಂಜೀವಿ (ಬಲಚಿತ್ರ)
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ|

Updated on:Aug 07, 2023 | 7:23 AM

Share

ಬೆಂಗಳೂರು: ನಗರದ ಸದಾಶಿವನಗರ ಸಂಚಾರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​​ನಲ್ಲಿ ಹಿಟ್ ಆ್ಯಂಡ್​​ ರನ್​ಗೆ (Hit and Run) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಕುವೆಂಪು ನಗರದ ನಿವಾಸಿಗಳಾದ ರಘು ಮತ್ತು ಚಿರಂಜೀವಿ (ಅಪ್ಪ ಮತ್ತು ಮಗ) ಮೃತ ದುರ್ದೈವಿಗಳು ವಾಸು (ಅಳಿಯ) ಸ್ಥಿತಿ ಗಂಭೀರವಾಗಿದೆ.

ಒಂದೇ ಕುಟುಂಬದ ಮೂವರು ಪುಸ್ತಕದ ವ್ಯಾಪಾರ ಮಾಡುತ್ತಿದ್ದರು. ಇವರು ಕಳೆದ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಎಂಎಸ್ ರಾಮಯ್ಯ ಅಸ್ಪತ್ರೆ ಕಡೆಯಿಂದ ಬಂದ ಮಾರುತಿ ಇಕೋ ಕಾರು ಮೊದಲು ನಿಂತಿದ್ದ ಒಂದು ಕಾರು ಮತ್ತು ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿ ನಿಂತಿದ್ದ ವಾಸು ಗುದ್ದಿ, ತದನಂತರ ಡಿಯೋ ಸ್ಕೂಟರ್​ನಲ್ಲಿದ್ದ ರಘು ಮತ್ತು ಚಿರಂಜೀವಿ ಅವರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ: ಹೆಸ್ಕಾಂ ವಿರುದ್ಧ ಆರೋಪ

ಘಟನೆ ಬಳಿಕ ಸ್ಥಳೀಯರು ಕಾರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮೂವರ ಪೈಕಿ ಆಕಾಶ್​​ ಎಂಬುವರು ಕಾರಿನಿಂದ ಕೆಳೆಗೆ ಇಳಿದ್ದಿದ್ದು, ಉಳಿದ ಇಬ್ಬರು ಕಾರಿನ ಸಹಿತ ಎಸ್ಕೇಪ್ ಆಗಿದ್ದಾರೆ. ಆಕಾಶ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಕಾಶ್​ ಮಾಗಡಿ ಜಿಲ್ಲಾ ಪಂಚಾಯತಿ ಸದಸ್ಯರ ಮಗ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು: ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಜೇನುಬೈಲು ಗ್ರಾಮದ ಬಳಿ  ನಡೆದಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಾಲಗಿದೆ. ಭೀಕರ ಅಪಘಾತದ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ‌ಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Mon, 7 August 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ