AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit and Run: ಕುಡಿದ ಮತ್ತಲ್ಲಿ ಯುವಕ, ಯುವತಿಯರ ಜಾಲಿ ರೈಡ್: ಹಿಟ್ ಆ್ಯಂಡ್ ರನ್​ಗೆ ಡೆಲೆವೆರಿ ಬಾಯ್​ ಬಲಿ

ಬೆಂಗಳೂರಲ್ಲಿ ಹಿಟ್​​  ಆ್ಯಂಡ್​ ರನ್​ಗೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಆರ್​.ಆರ್​​. ನಗರದ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

Hit and Run: ಕುಡಿದ ಮತ್ತಲ್ಲಿ ಯುವಕ, ಯುವತಿಯರ ಜಾಲಿ ರೈಡ್: ಹಿಟ್ ಆ್ಯಂಡ್ ರನ್​ಗೆ ಡೆಲೆವೆರಿ ಬಾಯ್​ ಬಲಿ
ಅಪಘಾತವಾದ ಕಾರು (ಎಡಚಿತ್ರ) ಮೃತ ಪವನ್​ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 19, 2023 | 7:01 AM

Share

ಬೆಂಗಳೂರು: ನಗರದಲ್ಲಿ ಹಿಟ್​​ ಆ್ಯಂಡ್​ ರನ್​ಗೆ (Hit and Run) ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಆರ್​.ಆರ್​​. ನಗರದ (RR Nagar) ಮೆಟ್ರೋ ನಿಲ್ದಾಣದ (Metro Station) ಬಳಿ ನಡೆದಿದೆ. ಜೊಮ್ಯಾಟೊ (Zomato) ಡೆಲಿವರಿ ಬಾಯ್ (Delivery Boy) ಪವನ್​ ಮೃತ ದುರ್ದೈವಿ. ಮೃತ ಪವನ್, ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ನಿವಾಸಿಯಾಗಿದ್ದನು. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಕಾರು ಚಾಲಕ ವಿನಾಯಕ್​​ ವಿಜಯನಗರ ನಿವಾಸಿಯಾಗಿದ್ದು, ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ರಾಜಾಜಿನಗರದ ಮಹೀಂದ್ರ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದಾನೆ. ವೀಕೆಂಡ್​ ಹಿನ್ನೆಲೆ ಇನ್ಸೆಂಟಿವ್ ಹಣದಲ್ಲಿ ನಿನ್ನೆ (ಜೂ.18) ರಾತ್ರಿ ಗೆಳೆಯರ ಜೊತೆ ಪಾರ್ಟಿ ​ಪಾರ್ಟಿ ಮಾಡಿದ್ದಾನೆ.

ಪಾರ್ಟಿ ಬಳಿಕ ಗೆಳೆಯ ಗೆಳೆಯ ಸಾಗರ್​ ಎಂಬವನಿಗೆ ಡ್ರಾಪ್​ ನೀಡಲು ಕಾರಿನಲ್ಲಿ ಮೂವರು ಯುವತಿರು ಓರ್ವ ಯುವಕ ನಾಯಂಡಹಳ್ಳಿಯಿಂದ ಆರ್​.ಆರ್​ನಗರದ ಕಡೆಗೆ ತೆರಳಿದ್ದಾರೆ. ವಿನಾಯಕ್ ಕುಡಿದ ಮತ್ತಿನಲ್ಲೇ ಕಾರು ಚಲಾಯಿಸುತ್ತಿದ್ದು, ತಡರಾತ್ರಿ 1:45ರ ಸುಮಾರಿಗೆ ಆರ್​.ಆರ್​​. ನಗರದ ಮೆಟ್ರೋ ನಿಲ್ದಾಣದ ಬಳಿ ಮುಂದೆ ಹೋಗುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಪವನ್ ​ಬೈಕ್​​ಗೆ ಹಿಂದಿನಿಂದ ಗುದ್ದಿದ್ದಾನೆ.

ಇದನ್ನೂ ಓದಿ: Bengaluru Mysuru Expressway: ಸಾವಿನ ಹೆದ್ದಾರಿಯಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪವನ್​​​​​ನನ್ನು ಕಾರು 100 ಮೀಟರ್ ಎಳೆದೊಯ್ದಿದೆ. ನಂತರ ಪವನ್​​ ಬಿಟ್ಟು ಕಾರು ಸಮೇತ ಯುವಕ, ಯುವತಿಯರು ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಸುಮಾರು 1 ಕಿ.ಮೀ.ವರೆಗೂ ಕಾರನ್ನು ಚೇಸ್​ ಮಾಡಿದ್ದಾರೆ. ನಂತರ ಕಾರನ್ನು ಅಡ್ಡ ಹಾಕಿ ಆರೋಪಿ ಚಾಲಕ ವಿನಾಯಕನನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ. ಕಾರಿನ ಗ್ಲಾಸ್​ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಕಾರಿನಲ್ಲಿದ್ದ ಮೂವರು ಯುವತಿಯರು, ಯುವಕ ಪರಾರಿಯಾಗಿದ್ದಾರೆ. ನಂತರ ಸ್ಥಳೀಯರು ಆರೋಪಿ ವಿನಾಯಕ್​ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ತಪಾಸಣೆ ವೇಳೆ ವಿನಾಯಕ್​ ಮದ್ಯಪಾನ ಮಾಡಿರುವುದು ದೃಢವಾಗಿದೆ. ಇನ್ನು ಕಾರಿನಲ್ಲಿ ಯುವತಿಯರ ಐಡಿ ಕಾರ್ಡ್​ ಪತ್ತೆಯಾಗಿದೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 am, Mon, 19 June 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ