AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ

ಬೆಂಗಳೂರಿನ ಶಿವಾಜಿನಗರದ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ
ಆರೋಪಿ ಸೈಯದ್​ ಮಹಮ್ಮದ್ ಅನ್ವರ್ (ಎಡಚಿತ್ರ) ರೆಸೆಲ್​ ಮಾರುಕಟ್ಟೆ​ಶಿವಾಜಿನಗರ​ (ಬಲಚಿತ್ರ)
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jul 10, 2023 | 8:48 AM

Share

ಬೆಂಗಳೂರು: ನಗರದ ಶಿವಾಜಿನಗರದ (Shivajinagar) ಆಜಾಂ ಮಸೀದಿಯಲ್ಲಿ (Mosque) ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು (Shivajinagar Police) ಬಂಧಿಸಿದ್ದಾರೆ. ಮಹಾರಾಷ್ಟ್ರ (Maharashtra) ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಬಂಧಿತ ಆರೋಪಿ.

ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್​ ಮಹಮ್ಮದ್ ಅನ್ವರ್, ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಹೀಗೆ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಮಸೀದಿಯಲ್ಲಿ ಮಲಗಲು ಅವಕಾಶವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಇದರಿಂದ ಬೇಸರಗೊಂಡು ಮೆಜೆಸ್ಟಿಕ್​ಗೆ ತೆರಳಿ ಕರ್ನೂಲ್​ ಬಸ್​ ಹತ್ತಿದ್ದಾನೆ. ಬಸ್​​ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿದ್ದ ಸೈಯದ್ ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂದು ಹುಸಿ ಕರೆ ಮಾಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಬಾಂಬ್​ ಇರಲಿಲ್ಲ. ಹುಸಿ ಬಾಂಬ್​ ಕರೆಯಂದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂತರ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆಂಧ್ರಕ್ಕೆ ತೆರಳಿದ್ದ ಆರೋಪಿ ಸೈಯದ್​ನನ್ನು ಶಿವಾಜಿನಗರ ಪೊಲೀಸರು ಕರ್ನೂಲ್​ನಿಂದ ತೆಲಂಗಾಣದ ಮೆಹಬೂಬ್​ನಗರಕ್ಕೆ ತೆರಳಿದ್ದಾಗ ಬಂಧಿಸಿದ್ದಾರೆ. ಸೈಯದ್​ ಮಹಮ್ಮದ್ ಬಿಎಸ್​ಸಿ ಪದವಿ ಮುಗಿಸಿದ್ದು ಕೆಲಸ ಇರಲಿಲ್ಲ. ಹೀಗಾಗಿ ಊರೂರು ಸುತ್ತಿ ​ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದ. ಆರೋಪಿ ಸೈಯದ್​ ಮಹಮ್ಮದ್ ಈ ಹಣದಲ್ಲೇ ಜೀವನ ಸಾಗಿಸುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್