AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ

ಬೆಂಗಳೂರಿನ ಶಿವಾಜಿನಗರದ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ
ಆರೋಪಿ ಸೈಯದ್​ ಮಹಮ್ಮದ್ ಅನ್ವರ್ (ಎಡಚಿತ್ರ) ರೆಸೆಲ್​ ಮಾರುಕಟ್ಟೆ​ಶಿವಾಜಿನಗರ​ (ಬಲಚಿತ್ರ)
Jagadisha B
| Edited By: |

Updated on: Jul 10, 2023 | 8:48 AM

Share

ಬೆಂಗಳೂರು: ನಗರದ ಶಿವಾಜಿನಗರದ (Shivajinagar) ಆಜಾಂ ಮಸೀದಿಯಲ್ಲಿ (Mosque) ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು (Shivajinagar Police) ಬಂಧಿಸಿದ್ದಾರೆ. ಮಹಾರಾಷ್ಟ್ರ (Maharashtra) ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಬಂಧಿತ ಆರೋಪಿ.

ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್​ ಮಹಮ್ಮದ್ ಅನ್ವರ್, ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಹೀಗೆ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಮಸೀದಿಯಲ್ಲಿ ಮಲಗಲು ಅವಕಾಶವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಇದರಿಂದ ಬೇಸರಗೊಂಡು ಮೆಜೆಸ್ಟಿಕ್​ಗೆ ತೆರಳಿ ಕರ್ನೂಲ್​ ಬಸ್​ ಹತ್ತಿದ್ದಾನೆ. ಬಸ್​​ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿದ್ದ ಸೈಯದ್ ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂದು ಹುಸಿ ಕರೆ ಮಾಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಬಾಂಬ್​ ಇರಲಿಲ್ಲ. ಹುಸಿ ಬಾಂಬ್​ ಕರೆಯಂದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂತರ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆಂಧ್ರಕ್ಕೆ ತೆರಳಿದ್ದ ಆರೋಪಿ ಸೈಯದ್​ನನ್ನು ಶಿವಾಜಿನಗರ ಪೊಲೀಸರು ಕರ್ನೂಲ್​ನಿಂದ ತೆಲಂಗಾಣದ ಮೆಹಬೂಬ್​ನಗರಕ್ಕೆ ತೆರಳಿದ್ದಾಗ ಬಂಧಿಸಿದ್ದಾರೆ. ಸೈಯದ್​ ಮಹಮ್ಮದ್ ಬಿಎಸ್​ಸಿ ಪದವಿ ಮುಗಿಸಿದ್ದು ಕೆಲಸ ಇರಲಿಲ್ಲ. ಹೀಗಾಗಿ ಊರೂರು ಸುತ್ತಿ ​ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದ. ಆರೋಪಿ ಸೈಯದ್​ ಮಹಮ್ಮದ್ ಈ ಹಣದಲ್ಲೇ ಜೀವನ ಸಾಗಿಸುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ