AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯ ಮುಗಿಸಿ ಮಧ್ಯಪ್ರದೇಶದಿಂದ ರಾಜ್ಯಕ್ಕೆ ಹಿಂದಿರುಗಿದ್ದ ಹೋಂ ಗಾರ್ಡ್​ ಸಾವು, ಸರ್ಕಾರದ ವಿರುದ್ಧ ಕುಟುಂಬಸ್ಥರ ಆಕ್ರೋಶ

ರಾಜ್ಯದಿಂದ ಮಧ್ಯಪ್ರದೇಶ ಚುನಾವಣೆ ಡ್ಯೂಟಿಗೆ ಹೋಗಿದ್ದ ಹೋಂ ಗಾರ್ಡ್ ಸಿದ್ದು ಅವರು ವಾಪಸ್ ಆಗುವಾಗ ರೈಲಿನಲ್ಲಿ ತೀವ್ರ ಅಸ್ವಸ್ಥಗೊಂಡು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸರಿಯಾದ ಊಟ, ತಿಂಡಿ ಸಿಗದೇ ಸಿದ್ದು ಮೃತಪಟ್ಟಿದ್ದಾನೆಂದು ಸರ್ಕಾರದ ನಿರ್ಲಕ್ಷ್ಯಕ್ಕೆ ಮೃತ ಸಿದ್ದು ಕುಟುಂಬಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಚುನಾವಣಾ ಕರ್ತವ್ಯ ಮುಗಿಸಿ ಮಧ್ಯಪ್ರದೇಶದಿಂದ ರಾಜ್ಯಕ್ಕೆ ಹಿಂದಿರುಗಿದ್ದ ಹೋಂ ಗಾರ್ಡ್​ ಸಾವು, ಸರ್ಕಾರದ ವಿರುದ್ಧ ಕುಟುಂಬಸ್ಥರ ಆಕ್ರೋಶ
ಸಾವುImage Credit source: The Economic Times
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Nov 25, 2023 | 7:39 AM

ಬೆಂಗಳೂರು, ನ.25: ಚುನಾವಣಾ ಕರ್ತವ್ಯ ಮುಗಿಸಿ ಹಿಂದಿರುಗಿದ್ದ ಹೋಂ ಗಾರ್ಡ್ (​Home Guard) ಚಿಕಿತ್ಸೆ ಫಲಿಸದೆ ಬೆಂಗಳೂರಿನ ಕೆ.ಸಿ.ಜನರಲ್ (KC General Hospital) ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಧ್ಯಪ್ರದೇಶದಿಂದ ರಾಜ್ಯಕ್ಕೆ ಬರುವಾಗ ರೈಲಿನಲ್ಲಿ ತೀವ್ರ ಅಸ್ವಸ್ಥಗೊಂಡ ಮಂಡ್ಯ (Mandya) ಮೂಲದ ಹೋಂ ಗಾರ್ಡ್ ಸಿದ್ದು ಅವರನ್ನು ಸ್ನೇಹಿತರು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ನ.24ರ ಸಂಜೆ 5.30ಕ್ಕೆ ಪ್ರಾಣಬಿಟ್ಟಿದ್ದಾರೆ. ಸರಿಯಾದ ಊಟ, ತಿಂಡಿ ಸಿಗದೇ ಸಿದ್ದು ಮೃತಪಟ್ಟಿದ್ದಾನೆಂದು ಸರ್ಕಾರದ ನಿರ್ಲಕ್ಷ್ಯಕ್ಕೆ ಮೃತ ಸಿದ್ದು ಕುಟುಂಬಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಮಾರ್ಗ ಮಧ್ಯೆ0ಯೇ ಮೃತ ಸಿದ್ದು ರೈಲಿನಲ್ಲಿ ಎರಡು ಮೂರು ಬಾರಿ ವಾಂತಿ ಮಾಡಿಕೊಂಡಿದ್ದರು. ತೀವ್ರ ಅಸ್ವಸ್ಥರಾದ ಹಿನ್ನೆಲೆ ಕೂಡಲೆ ಅವರ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಕೆಸಿ ಜನರಲ್ ಶವಗಾರದಲ್ಲಿ ಮೃತ ಹೋಂ ಗಾರ್ಡ್ ಪಾರ್ಥಿವ ಶರೀರ ಇರಿಸಲಾಗಿದೆ.

ಇದನ್ನೂ ಓದಿ: ಅಂತು ಇಂತು ತಡವಾಗಿ ಬಂದ ರೈಲು: ನಿಟ್ಟುಸಿರು ಬಿಟ್ಟ ಯಾದಗಿರಿಯ 200 ಹೋಂ ಗಾರ್ಡ್ಸ್

ಮಧ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಚುನಾವಣೆ ಹಿನ್ನೆಲೆ ರಾಜ್ಯದ ಹೋಮ್ ಗಾರ್ಡ್​ಗಳನ್ನ ವಿಶೇಷ ಚುನಾವಣಾ ಸೇವೆಗೆಂದು ಮಧ್ಯ ಪ್ರದೇಶಕ್ಕೆ ಕಳುಹಿಸಲಾಗಿತ್ತು. ವಿವಿಧ ಜಿಲ್ಲೆಗಳಿಂದ ರಾಜ್ಯದ ಸುಮಾರು 4000 ಹೋಮ್ ಗಾರ್ಡ್​ಗಳನ್ನ ಮಧ್ಯ ಪ್ರದೇಶಕ್ಕೆ ಕಳುಹಿಸಲಾಗಿತ್ತು. ಇವರೆಲ್ಲಾ ಇದೇ ನವೇಂಬರ್ 17 ರಂದು ಅಲ್ಲಿನ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ವಾಪಸ್ ರಾಜ್ಯಕ್ಕೆ ಮರಳಬೇಕಿತ್ತು.ಆದ್ರೆ ಒಂದು ವಾರದ ಕಾಲ ನಮ್ಮ ಹೋಮ್​ ಗಾರ್ಡ್​​ಗಳನ್ನ ವಾಪಸ್ ಕಳಿಸೋ ವ್ಯವಸ್ಥೆ ಮಾಡಿರ್ಲಿಲ್ಲ. ಅಲ್ಲಿನ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ, ನಮ್ಮ ರಾಜ್ಯದ ಅಧಿಕಾರಿಗಳ ಕುಂಟು ನೆಪಗಳಿಂದ ಸುಮಾರು 4000 ಜನ ಗೃಹ ರಕ್ಷಕ ದಳದ ಸಿಬ್ಬಂದಿ ಮರಳಿ ರಾಜ್ಯಕ್ಕೆ ಬಾರಲಾಗದೇ ಅಕ್ಷರಶಃ ಕಂಗಾಲಾಗಿದ್ರು.

ಮಧ್ಯ ಪ್ರದೇಶದಲ್ಲಿ ಇರಲು ವಸತಿ ವ್ಯವಸ್ಥೆ ಸರಿ ಇಲ್ಲದೆ,ಊಟದ ವ್ಯವಸ್ಥೆ ಇಲ್ಲದೆ ಸ್ವಂತ ಹಣ ಖರ್ಚು ಮಾಡುತ್ತ ಪರದಾಡುತ್ತಿದ್ದರು. ವಾಪಸ್ ಬರಲು ಸೂಕ್ತ ರೈಲ್ವೆ ವ್ಯವಸ್ಥೆ ಇಲ್ಲದೆ ಪರಿಸಪಿಸುತ್ತಿದ್ದರು. ಈ ಬಗ್ಗೆ ಟಿವಿ9 ಕೂಡ ಸುದ್ದಿ ಬಿತ್ತರಿಸಿ ಅಧಿಕಾರಿಗಳನ್ನು ಎತ್ತರಿಸಿತ್ತು. ಇದರ ಭಾಗವಾಗಿ ನಿನ್ನೆ ರಾತ್ರಿ ಗೃಹ ರಕ್ಷಕ ದಳದ ಸಿಬ್ಬಂದಿ ಮರಳಿ ಮನೆ ಸೇರಲು ರೈಲಿನ ವ್ಯವಸ್ಥೆ ಮಾಡಲಾಗಿತ್ತು. ಅದರಂತೆಯೇ ಮರಳಿ ಊರಿಗೆ ಬರುವಾಗ ಸಿದ್ದು ಅವರು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್