AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಬಿಡಿಎ ಸೈಟ್ ಬೇಕೇಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ

ಬಿಡಿಎ ಮಾಡುವ ಅವಸರಗಳಿಂದಾಗಿ ಅವಾಂತರಗಳು ಆಗುತ್ತಿವೆ. ಬಿಡಿಎ ನನಗೆ ಬದಲಿ ನಿವೇಶನ ಕೊಡಲೇಬೇಕು ಎಂದು ಆಗ್ರಹಿಸಿದರು.

ನನಗೆ ಬಿಡಿಎ ಸೈಟ್ ಬೇಕೇಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Oct 12, 2022 | 12:54 PM

Share

ಬೆಂಗಳೂರು: ತಮಗೆ ಮಂಜೂರು ಮಾಡಿದ್ದ ನಿವೇಶನವನ್ನು ಹಿಂಪಡೆಯುವಂತೆ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂಕೋರ್ಟ್​ ನೀಡಿರುವ ಆದೇಶವನ್ನು ಗೌರವಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸುಪ್ರೀಂಕೋರ್ಟ್​​ ಆದೇಶದಂತೆ ನಡೆದುಕೊಳ್ಳುತ್ತೇವೆ. ಬಿಡಿಎ ಮಾಡುವ ಅವಸರಗಳಿಂದಾಗಿ ಅವಾಂತರಗಳು ಆಗುತ್ತಿವೆ. ನನಗೆ ಬಿಡಿಎ ಬದಲಿ ನಿವೇಶನ ಕೊಡಲೇಬೇಕು ಎಂದು ಆಗ್ರಹಿಸಿದರು. ಬಿಡಿಎ ಅಧಿಕಾರಿಗಳು ನನ್ನಿಂದ ಹಣ ಕಟ್ಟಿಸಿಕೊಂಡಿದ್ದಾರೆ. ನಾನು ನ್ಯಾಯಯುತವಾಗಿಯೇ ನಿವೇಶನ ಖರೀದಿಸಿದ್ದೇನೆ. ಆದರೆ ಬಿಡಿಎ ಮಾಡಿದ ತಪ್ಪುಗಳಿಂದಾಗಿ ಸಮಸ್ಯೆ ಆಗುತ್ತಿದೆ. ಬಿಡಿಎ ಪರಿಸ್ಥಿತಿಯೇ ಸರಿಯಿಲ್ಲ. ಅಲ್ಲಿ ಎಲ್ಲವೂ ಅಯೋಮಯ ಎಂದರು.

ಎಸ್​ಸಿ, ಎಸ್​ಟಿ ಮೀಸಲಾತಿ ವಿಚಾರದಲ್ಲಿ ಕ್ರೆಡಿಟ್ ವಾರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕಳೆದ 40 ವರ್ಷಗಳಿಂದ ದಲಿತರು ಮೀಸಲಾತಿ ಕೇಳುತ್ತಲೇ ಇದ್ದರು. ದಲಿತರಿಗೆ ಕಾಂಗ್ರೆಸ್​​ನವರು ಮೀಸಲಾತಿ ಕೊಡಲೇ ಇಲ್ಲ. ಅವರಿಗೆ ಮೀಸಲಾತಿ ಕೊಡಲು ನಿರ್ಧರಿಸಿದ್ದು ಬಿಜೆಪಿ. ಹೀಗಾಗಿ ಸಹಜವಾಗಿ ನಮಗೆ ಅದರ ಕ್ರೆಡಿಟ್ ಸೇರುತ್ತದೆ. ದಲಿತ ಸಮುದಾಯಕ್ಕೆ ಬಿಜೆಪಿ ನ್ಯಾಯ ಒದಗಿಸಿದೆ. ಸಹಜವಾಗಿಯೇ ಅದರ ಕ್ರೆಡಿಟ್ ನಮಗೆ ಸೇರುತ್ತದೆ ಎಂದರು.

ಎಸ್​.ಟಿ.ಸೋಮಶೇಖರ್ ಮೇಲಿನ ಎಫ್​ಐಆರ್ ರದ್ದುಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಮಶೇಖರ್​​ ರಾಜೀನಾಮೆಗೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​​ ಪಕ್ಷದಲ್ಲೂ ಹಲವರು ಬೇಲ್ ಮೇಲೆ ಹೊರಗಿದ್ದಾರೆ. ಕಾನೂನು ಕಾಯ್ದೆ ಪ್ರಕಾರ ಸೋಮಶೇಖರ್ ನಡೆದುಕೊಳ್ಳುತ್ತಾರೆ ಎಂದರು. ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್​ನವರ ಪೈಕಿಯೂ ಹಲವು ಬೇಲ್ ಮೇಲೆ ಹೊರಗಿದ್ದಾರೆ ಎಂದರು.

ಬದಲಿ ನಿವೇಶನ ವಾಪಸ್​ಗೆ ಸುಪ್ರೀಂಕೋರ್ಟ್‌ ಆದೇಶ

ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ರಾಜಕಾರಣಿಗಳಿಗೆ ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಬದಲಿ ನಿವೇಶನಗಳನ್ನು ಕಾನೂನು ಪ್ರಕ್ರಿಯೆಗಳ ಅನುಸಾರ ವಾಪಸ್‌ ಪಡೆಯುವಂತೆ ಬಿಡಿಎ ಗೆ ಮಂಗಳವಾರ ಆದೇಶ ನೀಡಿದೆ. ಮಂಜೂರಾತಿ ರದ್ದುಗೊಳಿಸುವುದಷ್ಟೇ ಸಾಲದು. ಮಾಲೀಕರಿಂದ ಅವುಗಳನ್ನು ಮರಳಿ ಸ್ವಾಧೀನಕ್ಕೆ ಪಡೆಯಬೇಕು ಎಂದು ತಾಕೀತು ಮಾಡಿದೆ.

Published On - 12:54 pm, Wed, 12 October 22

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ