AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಬಿಡಿಎ ಸೈಟ್ ಬೇಕೇಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ

ಬಿಡಿಎ ಮಾಡುವ ಅವಸರಗಳಿಂದಾಗಿ ಅವಾಂತರಗಳು ಆಗುತ್ತಿವೆ. ಬಿಡಿಎ ನನಗೆ ಬದಲಿ ನಿವೇಶನ ಕೊಡಲೇಬೇಕು ಎಂದು ಆಗ್ರಹಿಸಿದರು.

ನನಗೆ ಬಿಡಿಎ ಸೈಟ್ ಬೇಕೇಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Oct 12, 2022 | 12:54 PM

Share

ಬೆಂಗಳೂರು: ತಮಗೆ ಮಂಜೂರು ಮಾಡಿದ್ದ ನಿವೇಶನವನ್ನು ಹಿಂಪಡೆಯುವಂತೆ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂಕೋರ್ಟ್​ ನೀಡಿರುವ ಆದೇಶವನ್ನು ಗೌರವಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸುಪ್ರೀಂಕೋರ್ಟ್​​ ಆದೇಶದಂತೆ ನಡೆದುಕೊಳ್ಳುತ್ತೇವೆ. ಬಿಡಿಎ ಮಾಡುವ ಅವಸರಗಳಿಂದಾಗಿ ಅವಾಂತರಗಳು ಆಗುತ್ತಿವೆ. ನನಗೆ ಬಿಡಿಎ ಬದಲಿ ನಿವೇಶನ ಕೊಡಲೇಬೇಕು ಎಂದು ಆಗ್ರಹಿಸಿದರು. ಬಿಡಿಎ ಅಧಿಕಾರಿಗಳು ನನ್ನಿಂದ ಹಣ ಕಟ್ಟಿಸಿಕೊಂಡಿದ್ದಾರೆ. ನಾನು ನ್ಯಾಯಯುತವಾಗಿಯೇ ನಿವೇಶನ ಖರೀದಿಸಿದ್ದೇನೆ. ಆದರೆ ಬಿಡಿಎ ಮಾಡಿದ ತಪ್ಪುಗಳಿಂದಾಗಿ ಸಮಸ್ಯೆ ಆಗುತ್ತಿದೆ. ಬಿಡಿಎ ಪರಿಸ್ಥಿತಿಯೇ ಸರಿಯಿಲ್ಲ. ಅಲ್ಲಿ ಎಲ್ಲವೂ ಅಯೋಮಯ ಎಂದರು.

ಎಸ್​ಸಿ, ಎಸ್​ಟಿ ಮೀಸಲಾತಿ ವಿಚಾರದಲ್ಲಿ ಕ್ರೆಡಿಟ್ ವಾರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕಳೆದ 40 ವರ್ಷಗಳಿಂದ ದಲಿತರು ಮೀಸಲಾತಿ ಕೇಳುತ್ತಲೇ ಇದ್ದರು. ದಲಿತರಿಗೆ ಕಾಂಗ್ರೆಸ್​​ನವರು ಮೀಸಲಾತಿ ಕೊಡಲೇ ಇಲ್ಲ. ಅವರಿಗೆ ಮೀಸಲಾತಿ ಕೊಡಲು ನಿರ್ಧರಿಸಿದ್ದು ಬಿಜೆಪಿ. ಹೀಗಾಗಿ ಸಹಜವಾಗಿ ನಮಗೆ ಅದರ ಕ್ರೆಡಿಟ್ ಸೇರುತ್ತದೆ. ದಲಿತ ಸಮುದಾಯಕ್ಕೆ ಬಿಜೆಪಿ ನ್ಯಾಯ ಒದಗಿಸಿದೆ. ಸಹಜವಾಗಿಯೇ ಅದರ ಕ್ರೆಡಿಟ್ ನಮಗೆ ಸೇರುತ್ತದೆ ಎಂದರು.

ಎಸ್​.ಟಿ.ಸೋಮಶೇಖರ್ ಮೇಲಿನ ಎಫ್​ಐಆರ್ ರದ್ದುಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಮಶೇಖರ್​​ ರಾಜೀನಾಮೆಗೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​​ ಪಕ್ಷದಲ್ಲೂ ಹಲವರು ಬೇಲ್ ಮೇಲೆ ಹೊರಗಿದ್ದಾರೆ. ಕಾನೂನು ಕಾಯ್ದೆ ಪ್ರಕಾರ ಸೋಮಶೇಖರ್ ನಡೆದುಕೊಳ್ಳುತ್ತಾರೆ ಎಂದರು. ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್​ನವರ ಪೈಕಿಯೂ ಹಲವು ಬೇಲ್ ಮೇಲೆ ಹೊರಗಿದ್ದಾರೆ ಎಂದರು.

ಬದಲಿ ನಿವೇಶನ ವಾಪಸ್​ಗೆ ಸುಪ್ರೀಂಕೋರ್ಟ್‌ ಆದೇಶ

ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ರಾಜಕಾರಣಿಗಳಿಗೆ ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಬದಲಿ ನಿವೇಶನಗಳನ್ನು ಕಾನೂನು ಪ್ರಕ್ರಿಯೆಗಳ ಅನುಸಾರ ವಾಪಸ್‌ ಪಡೆಯುವಂತೆ ಬಿಡಿಎ ಗೆ ಮಂಗಳವಾರ ಆದೇಶ ನೀಡಿದೆ. ಮಂಜೂರಾತಿ ರದ್ದುಗೊಳಿಸುವುದಷ್ಟೇ ಸಾಲದು. ಮಾಲೀಕರಿಂದ ಅವುಗಳನ್ನು ಮರಳಿ ಸ್ವಾಧೀನಕ್ಕೆ ಪಡೆಯಬೇಕು ಎಂದು ತಾಕೀತು ಮಾಡಿದೆ.

Published On - 12:54 pm, Wed, 12 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?