AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರ PFI, SDPI ಬ್ಯಾನ್: ಪೂರಕ ಸಾಕ್ಷ್ಯ ಕಲೆಹಾಕಿದ ಶಿವಮೊಗ್ಗ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿನಂದನೆ

ಸಂಘಟನೆಗಳನ್ನ ಬ್ಯಾನ್​ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಶೀಘ್ರ PFI, SDPI ಬ್ಯಾನ್: ಪೂರಕ ಸಾಕ್ಷ್ಯ ಕಲೆಹಾಕಿದ ಶಿವಮೊಗ್ಗ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿನಂದನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Sep 22, 2022 | 11:37 AM

Share

ಬೆಂಗಳೂರು: ಪ್ರೇಮ್​ಸಿಂಗ್​ ಚೂರಿ ಇರಿತ ಪ್ರಕರಣದ ತನಿಖೆ ಚುರುಕಾಯುತ್ತಿದ್ದಂತೆ ರಾಜ್ಯ ಸೇರಿ ಇಡೀ ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗೆ ಹೊಂಚು ಹಾಕಿ ಕುಳಿತಿದ್ದ ಶಂಕಿತ ಉಗ್ರ ಮಾಜ್​ ಹಾಗೂ ಯಾಸೀನ್​ನನ್ನ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಕಡೆ ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​​ಐಎ) ದಾಳಿ ನಡೆಸಿದೆ. ಪಿಎಫ್​​ಐ (Popular Front of India-PFI) ಮತ್ತು ಎಸ್​ಡಿಪಿಐ (Social Democratic Party of India-SDPI) ಕಚೇರಿಗಳ ಮೇಲೆ ದಾಳಿ ಮಾಡಿ ಸುಮಾರು 100ಕ್ಕೂ ಪಿಎಫ್​ಐ ನಾಯಕರು, ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಸುದ್ದಿಗೋಷ್ಠಿ ನಡೆಸಿದ್ದು ಸಂಘಟನೆ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

PFI, SDPI ಬ್ಯಾನ್​ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್​ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ. ಧರ್ಮ ನೋಡಿ ಪೊಲೀಸರು ಕಾರ್ಯಚರಣೆ ಮಾಡಲ್ಲ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

PFI ಸಂಘಟನೆ ಏನೇನು ಕೃತ್ಯ ಮಾಡುತ್ತಿದೆ ಮಾಹಿತಿ ಇದೆ

ಇದೇ ವೇಳೆ ಆರಗ ಜ್ಞಾನೇಂದ್ರ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಮಾಹಿತಿ ಆಧಾರದ ಮೇಲೆ NIAಯವರು ದಾಳಿ ಮಾಡಿದ್ದಾರೆ. ಅದನ್ನ ತಡೆದು ಪ್ರತಿಭಟನೆ ಮಾಡುತ್ತಾರೆ ಅಂದರೆ ಏನರ್ಥ? ಇಂಥ ದುಷ್ಟ ಶಕ್ತಿಗಳಿಗೆ ಬೆಂಬಲ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. NIA ದಾಳಿಯಲ್ಲಿ ಯಾವ ರಾಜಕೀಯ ಇಲ್ಲ. PFI ಸಂಘಟನೆ ಏನೇನು ಕೃತ್ಯ ಮಾಡುತ್ತಿದೆ ಮಾಹಿತಿ ಇದೆ. ಕಾಂಗ್ರೆಸ್ ಇಂಥ ದುಷ್ಟ ಶಕ್ತಿಯನ್ನ ಬೆಳೆಸಿದ್ದರಿಂದ ಪ್ರಾಣಹಾನಿಯಾಗಿದೆ. ವೋಟ್ ಬ್ಯಾಂಕ್ ರಾಜಕಾರಣದಿಂದ ಪ್ರಾಣಹಾನಿ ಆಗುತ್ತಿವೆ ಎಂದು ಕಾಂಗ್ರೆಸ್​ ವಿರುದ್ಧ ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:01 am, Thu, 22 September 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್