AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲೂ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರವೀಣ್ ಹತ್ಯೆ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇವೆ. ಪ್ರವೀಣ್ ಅಂತ್ಯಕ್ರಿಯೆ ನೆರವೇರಿದೆ. ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ.

ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲೂ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ - ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: ಆಯೇಷಾ ಬಾನು|

Updated on:Jul 27, 2022 | 4:08 PM

Share

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು(Praveen Nettar) ಬರ್ಬರ ಕೊಲೆಯಾಗಿದೆ. ಭೀಕರ ಹತ್ಯೆಗೆ ಕರಾವಳಿ ಕಾದ ಕೆಂಡದಂತಾಗಿದೆ. ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ. ಸದ್ಯ ನೆಟ್ಟಾರು ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಅಂತ್ಯಸಂಸ್ಕಾರ ನೆರವೇರಿದೆ. ಮತ್ತೊಂದು ಕಡೆ ಘಟನೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಜೊತೆ ಸಿ.ಟಿ ರವಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಸಭೆ ನಡೆಸಿದ್ದಾರೆ. ಸಭೆಯ ವಿವರ ಇಲ್ಲಿದೆ.

ಪ್ರವೀಣ್ ಹತ್ಯೆ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇವೆ. ಪ್ರವೀಣ್ ಅಂತ್ಯಕ್ರಿಯೆ ನೆರವೇರಿದೆ. ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಸದ್ಯ 10 ಜನರನ್ನ ವಶಕ್ಕೆ ಪಡೆದಿದ್ದಾರೆ. ಕೇರಳಕ್ಕೆ ತೆರಳಿ ಸಹ ಸರ್ಚ್ ಮಾಡುತ್ತಿದ್ದಾರೆ. ಇವು ಸಡನ್ನಾಗಿ ನಡೆಯುವಂತಹ ಕೃತ್ಯಗಳು. ಈ ತರಹದ ಘಟನೆ ನಡೆದಾಗ ಯಾವ ಕೇಸ್ ಸಹ ಬಿಟ್ಟಿಲ್ಲ. ಹಿಂದಿನ ಸರ್ಕಾರದಲ್ಲಿ ಕೆಲವು ಕೇಸ್ ತನಿಖೆ ಆಯ್ತು, ಕೆಲವು ತನಿಖೆ ಮಾಡಲಿಲ್ಲ. ನಮ್ಮ ಸರ್ಕಾರದಲ್ಲಿ ನಡೆದ ಎಲ್ಲವೂ ತನಿಖೆ ನಡೆಸುತ್ತಿದ್ದೇವೆ. ಕರಾವಳಿಯಲ್ಲಿ ಕೇರಳದಿಂದ ಬರುವವರು ಹೆಚ್ಚಾಗುತ್ತಿದ್ದಾರೆ. ಕೇರಳ ಸರ್ಕಾರದ ಜೊತೆ ನಮ್ಮ ಡಿಜಿ ಮಾತನಾಡಿದ್ದಾರೆ. ಜಂಟಿಯಾಗಿ ಕಾರ್ಯಚರಣೆ ಮಾಡುತ್ತೇವೆ. ಅಪಾರಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಫೊಲೀಸರು ಸಫಲರಾಗ್ತಾರೆ ಎಂದು ತಿಳಿಸಿದರು.

ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಸಹಜ. ಅಮಾಯಕರ ಮೇಲೆ ಹತ್ಯೆಯಾದಾಗ ನೋವಾಗುತ್ತೆ. ಮನಸ್ಸು ಕಲಕುತ್ತೆ. ಸಿಟ್ಟು ಬರುತ್ತೆ. ಭಾವನೆಗಳು ಕೆದುಕುತ್ತವೆ. ಆರೋಪಿಗಳನ್ನ ಬಂಧಿಸಿದ ಮೇಲೆ ಆಕ್ರೋಶ ಕಡಿಮೆಯಾಗುತ್ತೆ ಎಂದರು.

ಯಾರು ಯಾರು ಭಾಗಿಯಾಗಿದ್ದಾರೆ ಅನ್ನೋದರ ಬಗ್ಗೆ ತನಿಖೆಯಾಗ್ತಿದೆ

ಸಿಎಂ ಜೊತೆ ಚರ್ಚೆ ಬಳಿಕ ಸಿ.ಟಿ. ರವಿ ಮಾತನಾಡಿದ್ದು, ನಿನ್ನೆ ನಡೆದ ಪ್ರವೀಣ್ ಹತ್ಯೆ ಸಂಬಂಧಿಸಿದಂತೆ ಗಂಭೀರ ಚರ್ಚೆ ಆಗಿದೆ. ಜೊತೆಗೆ ಈಗಾಗಲೇ ಶಂಕಿತರ ಬೆನ್ನು ಹತ್ತಿದ್ದಾರೆ. ಕೇರಳಕ್ಕೆ ಒಂದು ತಂಡ ಕಳಿಸಲಾಗಿದೆ. ಇಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಅನ್ನೋದರ ಬಗ್ಗೆ ತನಿಖೆಯಾಗ್ತಿದೆ. ಕೆಲವು ಶಂಕಿತರನ್ನ ವಶಕ್ಕೆ ಪಡೆಯಲಾಗಿದೆ, ವಿಚಾರಣೆ ನಡೆಯುತ್ತಿದೆ. ಸ್ವತಃ ಸಿಎಂ, ಗೃಹ ಸಚಿವರೇ ಪ್ರವೀಣ್ ಹತ್ಯೆ ಪ್ರಕರಣವನ್ನ ನಿರ್ವಹಣೆ ಮಾಡ್ತಾ ಇದ್ದಾರೆ. ನನ್ನ ಮುಂದಯೇ ಅಧಿಕಾರಿಗಳ ಜೊತೆ ಮಾತಾಡಿದ್ದಾರೆ. ನಾನು ಉಳಿದ ವಿಷಯಗಳನ್ನು ಇಲ್ಲಿ ಹೇಳಿದ್ರೆ ಸರಿಯಾಗಲ್ಲ, ಉಳಿದ ವಿಚಾರಗಳನ್ನು ಅವ್ರು ಮಾತಾಡ್ತಾರೆ ಎಂದರು.

ಪ್ರವೀಣ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ನೀಡುವ ಭರವಸೆ

ಸಂಘ ಪರಿವಾರ ಸಂಘಟನೆಗಳಿಂದ ಪ್ರವೀಣ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಸಂಘದ ಪ್ರಾಂತ ಉಸ್ತುವಾರಿ ನಾ.ಸೀತಾರಾಂ ಘೋಷಣೆ ಮಾಡಿದ್ದಾರೆ.

Published On - 3:47 pm, Wed, 27 July 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ