AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ -ಗೃಹಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ

ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನ ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ. ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ -ಗೃಹಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ
ಗೃಹಸಚಿವ ಡಾ.ಜಿ.ಪರಮೇಶ್ವರ್
TV9 Web
| Edited By: ಆಯೇಷಾ ಬಾನು|

Updated on: Dec 28, 2023 | 12:16 PM

Share

ಬೆಂಗಳೂರು, ಡಿ.28: ರಾಜ್ಯ ಹಾಗೂ ರಾಜಧಾನಿಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ (Karnataka Rakshana Vedike) ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು 29 ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಕನ್ನಡದ ಪರವಾಗಿ, ಯೋಜನೆಗಳನ್ನ, ತೀರ್ಮಾನಗಳ ಬಗ್ಗೆ ನಿಂತಿದೆ. ಕನ್ನಡ ಅನುಷ್ಠಾನದ ಬಗ್ಗೆ ಹಲವು ಬಾರಿ ತೀರ್ಮಾನ ಮಾಡಿದ್ದೇವೆ. ಲೈಸೆನ್ಸ್ ಕೊಡುವ ಸಮಯದಲ್ಲಿ ಕೂಡ ಕನ್ನಡ ಬೋರ್ಡ್ ಬಗ್ಗೆ ಹೇಳಿದ್ದೇನೆ. ಈಗ ಕರವೇ ಬಲವಂತವಾಗಿ ಬೋರ್ಡ್ ತೆಗೆಯೋದು, ಒಡೆಯೋದು ಮಾಡಿದ್ದಾರೆ. ಸಮಸ್ಯೆ ಇದ್ರೆ ನಮ್ಮ ಗಮನಕ್ಕೆ ತರಬೇಕಿತ್ತು. ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಾಗಿತ್ತು. ಅದಕ್ಕಾಗಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಕನ್ನಡ ಕಡ್ಡಾಯ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ. ಬಿಬಿಎಂಪಿಯವರು ಫೆಬ್ರವರಿ 28 ಗಡುವು ನೀಡಿದ್ದಾರೆ. ಕಡ್ಡಾಯ ಮಾಡ್ತೀವೆ ಸ್ವಲ್ಪ ಸಮಯ ಕಾಯಬೇಕಲ್ವಾ ಎಂದು ಹೇಳಿದರು.

ಇದನ್ನೂ ಓದಿ: ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ​ ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಅಂದ್ರೆ ಹೇಗೆ? ಪ್ರತಿಭಟನೆ ಮಾಡೋಕೆ ಒಂದಷ್ಟು ಸಮಯ ಕೊಡ್ತಾರೆ. ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರೋಕೆ ಆಗಲ್ಲ. ಮಾಲ್​ಗಳಲ್ಲೂ ಕೂಡ ಭದ್ರತೆ ಕೇಳ್ತಾರೆ, ಕೊಡಬೇಕಲ್ವಾ? ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನ ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಇನ್ನು ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸ್ತೀವಿ ಅಂತಾ ನಾರಾಯಣಗೌಡ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈಗಾಗಲೇ ನಾವು ಸಾಕಷ್ಟು ಪಾಠ ಕಲಿತಿದ್ದೇವೆ. ಬೇರೆಯವರಿಂದ ಪಾಠ ಕಲಿಯೋ ಅವಶ್ಯಕತೆಯಿಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ