AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ -ಗೃಹಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ

ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನ ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ. ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ -ಗೃಹಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ
ಗೃಹಸಚಿವ ಡಾ.ಜಿ.ಪರಮೇಶ್ವರ್
TV9 Web
| Edited By: |

Updated on: Dec 28, 2023 | 12:16 PM

Share

ಬೆಂಗಳೂರು, ಡಿ.28: ರಾಜ್ಯ ಹಾಗೂ ರಾಜಧಾನಿಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ (Karnataka Rakshana Vedike) ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು 29 ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಕನ್ನಡದ ಪರವಾಗಿ, ಯೋಜನೆಗಳನ್ನ, ತೀರ್ಮಾನಗಳ ಬಗ್ಗೆ ನಿಂತಿದೆ. ಕನ್ನಡ ಅನುಷ್ಠಾನದ ಬಗ್ಗೆ ಹಲವು ಬಾರಿ ತೀರ್ಮಾನ ಮಾಡಿದ್ದೇವೆ. ಲೈಸೆನ್ಸ್ ಕೊಡುವ ಸಮಯದಲ್ಲಿ ಕೂಡ ಕನ್ನಡ ಬೋರ್ಡ್ ಬಗ್ಗೆ ಹೇಳಿದ್ದೇನೆ. ಈಗ ಕರವೇ ಬಲವಂತವಾಗಿ ಬೋರ್ಡ್ ತೆಗೆಯೋದು, ಒಡೆಯೋದು ಮಾಡಿದ್ದಾರೆ. ಸಮಸ್ಯೆ ಇದ್ರೆ ನಮ್ಮ ಗಮನಕ್ಕೆ ತರಬೇಕಿತ್ತು. ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಾಗಿತ್ತು. ಅದಕ್ಕಾಗಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಕನ್ನಡ ಕಡ್ಡಾಯ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ. ಬಿಬಿಎಂಪಿಯವರು ಫೆಬ್ರವರಿ 28 ಗಡುವು ನೀಡಿದ್ದಾರೆ. ಕಡ್ಡಾಯ ಮಾಡ್ತೀವೆ ಸ್ವಲ್ಪ ಸಮಯ ಕಾಯಬೇಕಲ್ವಾ ಎಂದು ಹೇಳಿದರು.

ಇದನ್ನೂ ಓದಿ: ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ​ ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಅಂದ್ರೆ ಹೇಗೆ? ಪ್ರತಿಭಟನೆ ಮಾಡೋಕೆ ಒಂದಷ್ಟು ಸಮಯ ಕೊಡ್ತಾರೆ. ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರೋಕೆ ಆಗಲ್ಲ. ಮಾಲ್​ಗಳಲ್ಲೂ ಕೂಡ ಭದ್ರತೆ ಕೇಳ್ತಾರೆ, ಕೊಡಬೇಕಲ್ವಾ? ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನ ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಇನ್ನು ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸ್ತೀವಿ ಅಂತಾ ನಾರಾಯಣಗೌಡ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈಗಾಗಲೇ ನಾವು ಸಾಕಷ್ಟು ಪಾಠ ಕಲಿತಿದ್ದೇವೆ. ಬೇರೆಯವರಿಂದ ಪಾಠ ಕಲಿಯೋ ಅವಶ್ಯಕತೆಯಿಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​