AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ
ಪ್ರಾತಿನಿಧಿಕ ಚಿತ್ರ
Shivaprasad B
| Edited By: Rakesh Nayak Manchi|

Updated on: Nov 03, 2023 | 1:29 PM

Share

ಬೆಂಗಳೂರು, ನ.3: ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ (Suicide) ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಮೃತೆ ಐಶ್ವರ್ಯಾಳ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್ ಹಾಗೂ ಆತನ ಹೆಂಡತಿ ತಸ್ಮಯ್ ಗೋವಾಗೆ ಹೋಗಿದ್ದರು. ಅಲ್ಲಿ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಎಲ್ಲರ ಮೊಬೈಲ್ ಫೋನ್​ಗಳನ್ನು ಸ್ವಿಚ್ ಆಪ್ ಮಾಡಿಕೊಂಡು ಎಂಜಾಯ್ ಮಾಡುತ್ತಿದ್ದರು.

ಸುಮಾರು‌ ಮೂರು ದಿನಗಳ ಸಿಡಿಆರ್ ಪರಿಶೀಲನೆ ಬಳಿಕ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಮೂರು ದಿನಗಳ ಕಾಲ ಎಲ್ಲರೂ ಗೋವಾದ ಎರಡು ರೆಸಾರ್ಟ್​ನಲ್ಲಿ ನೆಲೆಸಿದ್ದರು. ಕೊನೆಗೆ ಎರಡು ತಂಡಗಳು ಗೋವಾಗೆ ಹೋಗಿದ್ದು ರೆಸಾರ್ಟ್​​ಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

ಈ ವೇಳೆ ಐವರು ಆರೋಪಿಗಳು ವಾಸ್ತವ್ಯ ಇರುವುದು ತಿಳಿದುಬಂದಿದೆ. ನಂತರ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಾ ಇರುವುದು ಗೊತ್ತಾಗಿದೆ. ಐವರು ಗೋವಾದಿಂದ ಮುಂಬೈಗೆ ಶಿಫ್ಟ್ ಆಗುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಗೋವಿಂದರಾಜ ನಗರ ಠಾಣಾ ಪೊಲೀಸರು, ಮುಂಬೈನಲ್ಲಿ‌ ಮಾರ್ಗ ಮಧ್ಯೆ ಬಂಧಿಸಿದ್ದಾರೆ.

ಪ್ರಕಣರದಲ್ಲಿ ಇನ್ನೂ ಐವರು ಆರೋಪಿಗಳು ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಯುಎಸ್​ನಲ್ಲಿ ಇರುವ ಶಾಲಿನಿ ಓಂಪ್ರಕಾಶ್ ಬಂಧನಕ್ಕೂ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ರೆಡ್ ಕಾರ್ನರ್ ನೊಟೀಸ್ ಹೊರಡಿಸಲು ಮುಂದಾಗಿದ್ದಾರೆ. ಡಿಜಿ ಐಜಿಪಿ ಅನುಮತಿ ಪಡೆದು ರೆಡ್ ಕಾರ್ನರ್ ನೋಟೀಸ್ ಹೊರಟಿಸಲು ಸಿದ್ಧತೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ